ಬೆಂಗಳೂರಿಗೆ ಪ್ರತ್ಯೇಕ ಕೋವಿಡ್ 19 ನಿಯಮ ಜಾರಿ: ಸಚಿವ ಅಶೋಕ್
ಬೆಂಗಳೂರು, ಏಪ್ರಿಲ್ 20: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರತ್ಯೇಕ ಕೋವಿಡ್ ನಿಯಮ ಜಾರಿ ಮಾಡಲಾಗುತ್ತದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
Recommended Video
ಇಂದು ಸಂಜೆಯೊಳಗೆ ಹೊಸ ನಿಯಮ ಜಾರಿಯಾಗಲಿದೆ, ನಾವು ಸುಧಾಕರ್ , ಸಿಎಂ ಜತೆ ಸಭೆ ನಡೆಸಿದ್ದೇವೆ, ಹಾಸಿಗೆಗಳ ಕೊರತೆ ಬಗ್ಗೆ ಗಮನಹರಿಸಿದ್ದೇವೆ, ಇಂದು ಕೆಲವು ಸಭೆಗಳನ್ನು ಮುಂದುವರೆಸಲಿದ್ದೇವೆ, ರಾಜ್ಯಪಾಲರ ಸಲಹೆ ಮೇರೆಗೆ ಕಠಿಣ ನಿಯಮಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.
ರಾಜ್ಯಪಾಲರು ಇಂದು ವರ್ಚ್ಯುವಲ್ ಸಭೆ ಕರೆದಿದ್ದಾರೆ, ಸಿಎಂ, ಪ್ರತಿಪಕ್ಷ ನಾಯಕರು ಭಾಗಿಯಾಗಲಿದ್ದಾರೆ, ರಾಜ್ಯಪಾಲರಿಗೆ ಕೇಂದ್ರವೇ ಸೂಚನೆ ನೀಡಿದೆ.

ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ರಾಜ್ಯಪಾಲರೊಂದಿಗೆ ಚರ್ಚೆ ನಡೆಯುತ್ತಿದೆ, ಇದನ್ನು ಕಾಂಗ್ರೆಸ್ ಅಪಾರ್ಥ ಮಾಡಿಕೊಳ್ಳುವುದು ಬೇಡ, ಕೊರೊನಾ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಮನವಿ ಮಾಡಿದರು.
ಖಾಸಗಿಯವರಿಗೂ ಸರ್ಕಾರವೇ ಆಕ್ಸಿಜನ್ ಪೂರೈಸಲಿದೆ, ನಮ್ಮಲ್ಲಿ ಆಕ್ಸಿಜನ್ ಲಭ್ಯವಿದೆ ಆದರೆ ಖಾಲಿ ಸಿಲಿಂಡರ್ ಕೊರತೆ ಇದೆ ಎಂದಿದ್ದಾರೆ. ಬೆಂಗಳೂರಿಗೆ ಲಾಕ್ ಡೌನ್ ಅವಶ್ಯಕತೆ ಇಲ್ಲ. ಸರ್ಕಾರದ ಮುಂದೆಯೂ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ನಿಂದ ಈಗಾಗಲೇ ತುಂಬಾ ಸಮಸ್ಯೆ ಆಗಿದೆ. ಲಾಕ್ ಡೌನ್ ಹೊರತು ಪಡಿಸಿ ಬಿಗಿ ಕ್ರಮ ಜಾರಿ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಸಭೆಯ ನಂತರ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ ಮಾಡುತ್ತೇವೆ ಎಂದು ಹೇಳಿದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications