ಬೆಂಗಳೂರಿನ ಸೈಕಲ್ ಸವಾರರಿಗೆ ಸಿಹಿ ಸುದ್ದಿ
ಬೆಂಗಳೂರು, ಜೂನ್ 29; ಬೆಂಗಳೂರು ನಗರದಲ್ಲಿ ಸೈಕಲ್ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 8 ಕಿ. ಮೀ. ಪ್ರತ್ಯೇಕ ಸೈಕಲ್ ಪಥವನ್ನು ನಗರದಲ್ಲಿ ನಿರ್ಮಾಣ ಮಾಡಲಾಗಿದೆ.
ನಗರದ ಕಬ್ಬನ್ ಪಾರ್ಕ್ನಲ್ಲಿ ಪ್ರತ್ಯೇಕ ಸೈಕಲ್ ಪಥವನ್ನು ನಿರ್ಮಾಣ ಮಾಡಲಾಗಿದೆ. ಪಾರ್ಕ್ ಆವರಣದಲ್ಲಿ ಸುಮಾರು 8 ಕಿ. ಮೀ. ಈ ಮಾರ್ಗವಿದ್ದು, ಕೆಲವೇ ದಿನಗಳಲ್ಲಿ ಸೈಕಲ್ ಸವಾರರಿಗೆ ಮುಕ್ತವಾಗಲಿದೆ.
ಪ್ರತ್ಯೇಕ ಸೈಕಲ್ ಪಥ ಮುಕ್ತವಾದ ಬಳಿಕ ಸೈಕಲ್ ಸವಾರರು ಬೇರೆ ಯಾವುದೇ ವಾಹನಗಳ ಭಯವಿಲ್ಲದೇ ಸೈಕಲ್ ಪಥದಲ್ಲಿ ಸಂಚಾರ ನಡೆಸಬಹುದಾಗಿದೆ. ಸೈಕಲ್ ಪಥದ ಪಕ್ಕದಲ್ಲಿಯೇ ಜಾಗಿಂಗ್ ಮಾಡುವವರಿಗೆ ವ್ಯವಸ್ಥೆ ಮಾಡಲಾಗಿದೆ.

ಕಬ್ಬನ್ ಪಾರ್ಕ್ನಲ್ಲಿ ಸೈಕಲ್ ಓಡಿಸುವಾಗ, ಜಾಗಿಂಗ್ ಮಾಡುವಾಗ ಬೇರೆ ವಾಹನಗಳ ಭಯವಿತ್ತು. ಪಾರ್ಕ್ನಲ್ಲಿ ವಾಹನಗಳ ಸಂಚಾರವನ್ನು ಶಾಶ್ವತವಾಗಿ ನಿಷೇಧಿಸಬೇಕು ಎಂಬ ಬೇಡಿಕೆಯೂ ಇತ್ತು. ಆದರೆ ಅದಕ್ಕೆ ಸಂಚಾರಿ ಪೊಲೀಸರು ಮತ್ತು ಸರ್ಕಾರ ಒಪ್ಪಿಗೆ ಕೊಡಲಿಲ್ಲ. ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರತ್ಯೇಕವಾದ ಸೈಕಲ್ ಪಥವನ್ನು ನಿರ್ಮಾಣ ಮಾಡಲಾಗಿದೆ.
ಸೈಕಲ್ ಪಥ ಮುಕ್ತವಾದ ಮೇಲೆ ಬೆಳಗ್ಗೆ 8 ರಿಂದ ಸಂಜೆ 7 ಗಂಟೆಯ ತನಕ ಕಬ್ಬನ್ ಪಾರ್ಕ್ನಲ್ಲಿ ಸೈಕಲ್ ಮೂಲಕ ಸಂಚಾರ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಸೈಕಲ್ ಪಥದಲ್ಲಿ ಬೇರೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಇದರಿಂದಾಗಿ ಸೈಕಲ್ ಸವಾರರು ನಿರ್ಭಯವಾಗಿ ಸೈಕಲ್ ಓಡಿಸಬಹುದಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಮಾಡಲಾಗಿದೆ. ಮಕ್ಕಳಿಗಾಗಿಯೇ ಪ್ರತ್ಯೇಕ ಪಾರ್ಕ್ ವ್ಯವಸ್ಥೆ ಮಾಡಲಾಗಿದೆ.
ತೋಟಗಾರಿಕಾ ಇಲಾಖೆ ಕಾರ್ಯಕ್ಕೆ ಸೈಕಲ್ ಸವಾರರು ಹರ್ಷ ವ್ಯಕ್ತಪಡಿಸಿದ್ದಾರೆ. ಜಾಗಿಂಗ್, ವಾಕಿಂಗ್ ಎಂದು ಹಲವಾರು ಜನರು ಪ್ರತಿದಿನ ಕಬ್ಬನ್ ಪಾರ್ಕ್ಗೆ ಆಗಮಿಸುತ್ತಾರೆ. ವಾರಾಂತ್ಯದಲ್ಲಿ ಸಾವಿರಾರು ಜನರು ಆಗಮಿಸುತ್ತಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications