ಬೆಂಗಳೂರಿನ ಸೈಕಲ್ ಸವಾರರಿಗೆ ಸಿಹಿ ಸುದ್ದಿ
ಬೆಂಗಳೂರು, ಜೂನ್ 29; ಬೆಂಗಳೂರು ನಗರದಲ್ಲಿ ಸೈಕಲ್ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 8 ಕಿ. ಮೀ. ಪ್ರತ್ಯೇಕ ಸೈಕಲ್ ಪಥವನ್ನು ನಗರದಲ್ಲಿ ನಿರ್ಮಾಣ ಮಾಡಲಾಗಿದೆ.
ನಗರದ ಕಬ್ಬನ್ ಪಾರ್ಕ್ನಲ್ಲಿ ಪ್ರತ್ಯೇಕ ಸೈಕಲ್ ಪಥವನ್ನು ನಿರ್ಮಾಣ ಮಾಡಲಾಗಿದೆ. ಪಾರ್ಕ್ ಆವರಣದಲ್ಲಿ ಸುಮಾರು 8 ಕಿ. ಮೀ. ಈ ಮಾರ್ಗವಿದ್ದು, ಕೆಲವೇ ದಿನಗಳಲ್ಲಿ ಸೈಕಲ್ ಸವಾರರಿಗೆ ಮುಕ್ತವಾಗಲಿದೆ.
ಪ್ರತ್ಯೇಕ ಸೈಕಲ್ ಪಥ ಮುಕ್ತವಾದ ಬಳಿಕ ಸೈಕಲ್ ಸವಾರರು ಬೇರೆ ಯಾವುದೇ ವಾಹನಗಳ ಭಯವಿಲ್ಲದೇ ಸೈಕಲ್ ಪಥದಲ್ಲಿ ಸಂಚಾರ ನಡೆಸಬಹುದಾಗಿದೆ. ಸೈಕಲ್ ಪಥದ ಪಕ್ಕದಲ್ಲಿಯೇ ಜಾಗಿಂಗ್ ಮಾಡುವವರಿಗೆ ವ್ಯವಸ್ಥೆ ಮಾಡಲಾಗಿದೆ.

ಕಬ್ಬನ್ ಪಾರ್ಕ್ನಲ್ಲಿ ಸೈಕಲ್ ಓಡಿಸುವಾಗ, ಜಾಗಿಂಗ್ ಮಾಡುವಾಗ ಬೇರೆ ವಾಹನಗಳ ಭಯವಿತ್ತು. ಪಾರ್ಕ್ನಲ್ಲಿ ವಾಹನಗಳ ಸಂಚಾರವನ್ನು ಶಾಶ್ವತವಾಗಿ ನಿಷೇಧಿಸಬೇಕು ಎಂಬ ಬೇಡಿಕೆಯೂ ಇತ್ತು. ಆದರೆ ಅದಕ್ಕೆ ಸಂಚಾರಿ ಪೊಲೀಸರು ಮತ್ತು ಸರ್ಕಾರ ಒಪ್ಪಿಗೆ ಕೊಡಲಿಲ್ಲ. ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರತ್ಯೇಕವಾದ ಸೈಕಲ್ ಪಥವನ್ನು ನಿರ್ಮಾಣ ಮಾಡಲಾಗಿದೆ.
ಸೈಕಲ್ ಪಥ ಮುಕ್ತವಾದ ಮೇಲೆ ಬೆಳಗ್ಗೆ 8 ರಿಂದ ಸಂಜೆ 7 ಗಂಟೆಯ ತನಕ ಕಬ್ಬನ್ ಪಾರ್ಕ್ನಲ್ಲಿ ಸೈಕಲ್ ಮೂಲಕ ಸಂಚಾರ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಸೈಕಲ್ ಪಥದಲ್ಲಿ ಬೇರೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಇದರಿಂದಾಗಿ ಸೈಕಲ್ ಸವಾರರು ನಿರ್ಭಯವಾಗಿ ಸೈಕಲ್ ಓಡಿಸಬಹುದಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಮಾಡಲಾಗಿದೆ. ಮಕ್ಕಳಿಗಾಗಿಯೇ ಪ್ರತ್ಯೇಕ ಪಾರ್ಕ್ ವ್ಯವಸ್ಥೆ ಮಾಡಲಾಗಿದೆ.
ತೋಟಗಾರಿಕಾ ಇಲಾಖೆ ಕಾರ್ಯಕ್ಕೆ ಸೈಕಲ್ ಸವಾರರು ಹರ್ಷ ವ್ಯಕ್ತಪಡಿಸಿದ್ದಾರೆ. ಜಾಗಿಂಗ್, ವಾಕಿಂಗ್ ಎಂದು ಹಲವಾರು ಜನರು ಪ್ರತಿದಿನ ಕಬ್ಬನ್ ಪಾರ್ಕ್ಗೆ ಆಗಮಿಸುತ್ತಾರೆ. ವಾರಾಂತ್ಯದಲ್ಲಿ ಸಾವಿರಾರು ಜನರು ಆಗಮಿಸುತ್ತಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications