ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಮುಂದಾದವರಿಗೆ ಬಿಗ್ ಶಾಕ್..!
ಬೆಂಗಳೂರು, ಡಿ. 25: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಹಿಂದಕ್ಕೆ ಪಡೆದಿದ್ದರಿಂದ, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಭರ್ಜರಿ ಪಾರ್ಟಿ ಮಾಡುವ ಉಮೇದಿನಲ್ಲಿದ್ದ ಬೆಂಗಳೂರಿಗರಿಗೆ ಗೃಹ ಸಚಿವರು ಶಾಕ್ ಕೊಟ್ಟಿದ್ದಾರೆ. ಇಂಗ್ಲೆಂಡ್ನಲ್ಲಿ ಕೊರೊನಾ ವೈರಸ್ ರೂಪಾಂತರಗೊಂಡು ಮತ್ತಷ್ಟು ವೇಗವಾಗಿ ಹರಡುವ ಗುಣಗಳನ್ನು ಬೆಳೆಸಿಕೊಂಡಿದೆ. ಈಗಾಗಲೇ ಇಂಗ್ಲೆಂಡ್ನಿಂದ ಸಾವಿರಾರು ಜನರು ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗೆ ಬಂದಿದ್ದಾರೆ. ಅವರಲ್ಲಿ ಬಹುತೇಕರು ಕೋವಿಡ್ ನೆಗಟಿವ್ ಪರೀಕ್ಷಾ ವರದಿಯನ್ನೂ ಸಲ್ಲಿಸಿರಲಿಲ್ಲ. ಹೀಗಾಗಿ ಗೊಂದಲಕ್ಕೆ ಬಿದ್ದಿದ್ದ ಆರೋಗ್ಯ ಇಲಾಖೆ, ಏಕಾಏಕಿ ನೈಟ್ ಕರ್ಫ್ಯೂ ಹಾಕಲು ಮುಂದಾಗಿತ್ತು.
ಹೀಗಾಗಿ ವರ್ಷಾಚರರಣೆ ಪಾರ್ಟಿ ಮಾಡುವ ಹುಮ್ಮನಸ್ಸಿನಲ್ಲಿದ್ದವರಿಗೆ ನಿರಾಸೆಯಾಗಿತ್ತು. ಬಳಿಕ ಸರ್ಕಾರ ನೈಟ್ ಕರ್ಫ್ಯೂ ಹಿಂದಕ್ಕೆ ಪಡೆದಿದ್ದರಿಂದ ಮತ್ತೆ ಪಾರ್ಟಿ ಪ್ರಿಯರು ಸಂತಸಗೊಂಡಿದ್ದರು. ಆದರೆ ಹೊಸ ವರ್ಷಾಚರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪಾರ್ಟಿ ಪ್ರಿಯರಿಗೆ ಶಾಕ್ ಕೊಟ್ಟಿದ್ದಾರೆ.

ಕಮಿಷನರ್ಗೆ ಸೂಚನೆ
ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಮುಂದಾದವರಿಗೆ ಬಿಗ್ ಶಾಕ್ ಕಾದಿದೆ. ಇಷ್ಟ ಬಂದಂತೆ ವರ್ಷಾಚರಣೆಗೆ ಅವಕಾಶ ಇಲ್ಲ. ನೈಟ್ ಕರ್ಪ್ಯೂ ಇಲ್ಲ ಅಂದರೂ, ಬೆಂಗಳೂರಿಗೆ ಹೊಸ ಮಾರ್ಗಸೂಚಿ ಜಾರಿಯಾಗಲಿದೆ. ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ತರಲು ಗೃಹ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಸಿದ್ಧಮಾಡಲು ಮಹಾನಗರ ಪೊಲೀಸ್ ಆಯುಕ್ತರಿಗೆ ರಾಜ್ಯ ಗೃಹ ಇಲಾಖೆ ಸೂಚಿಸಿದೆ.

ಬೇಕಾಬಿಟ್ಟಿ ಓಡಾಡುವಂತಿಲ್ಲ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರತ್ಯೇಕ ಮಾರ್ಗಸೂಚಿಸಿ ರಚಿಸಿ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಸೂಚನೆ ಕೊಟ್ಟಿದ್ದಾರೆ. ಡಿಸೆಂಬರ್ 31ರಂದು ಬೇಕಾಬಿಟ್ಟಿ ಓಡಾಟ ಸೇರಿದಂತೆ ಕಾನೂನು ಸುವ್ಯಸ್ಥೆಗೆ ಅಡ್ಡಗಾಲು ಹಾಕುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ
ಬೆಂಗಳೂರಿಗೆ ಪ್ರತ್ಯೇಕ ಗೈಡ್ಲೈನ್ಸ್ ತರಲು ಸಿದ್ಧತೆ ನಡೆದಿದೆ.

ಬೆಂಗಳೂರಿಗೆ ಮಾರ್ಗಸೂಚಿ
ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆ ಹಿಂದಿನ ದಿನಕ್ಕೆ ಸಂಬಂಧಿಸಿದಂತೆ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ತರಲು ಸೂಚಿಸಿದ್ದೇನೆ. ಮಹಾನಗರ ಪೊಲೀಸ್ ಆಯುಕ್ತರು ಮಾರ್ಗಸೂಚಿಸಿ ರಚಿಸಿ ಜಾರಿ ಮಾಡುತ್ತಾರೆ. ನಾಳೆ ಅಥವಾ ನಾಡಿದ್ದು ಮಾರ್ಗಸೂಚಿ ಜಾರಿಗೆ ಬರಲಿದೆ ಎಂದು ಹೇಳಿಕೆ ನೀಡಿದ್ದಾರೆ.
Recommended Video

ಸಂಭ್ರಮಾಚರಣೆಗೆ ಅವಕಾಶವಿಲ್ಲ
ಬೆಂಗಳೂರಿನ ಎಂ.ಜಿ. ರೋಡ್, ಬ್ರಿಗೇಡ್ ರಸ್ತೆಗಳಲ್ಲಿ ಕಳೆದ ವರ್ಷದಂತೆ ಯಾವುದೇ ಸಂಭ್ರಮಾಚರಣೆಗೆ ಅವಕಾಶವಿಲ್ಲ ಎಂದು ಈಗಾಗಲೇ ಪೊಲೀಸ್ ಇಲಾಖೆ ಸ್ಷಷ್ಟಪಡಿಸಿದೆ. ಜೊತೆಗೆ ಪಬ್, ಕ್ಲಬ್, ರೆಸ್ಟೊರೆಂಟ್, ಫೈವ್ ಸ್ಟಾರ್ ಹೋಟೆಲ್ ಸೇರಿದಂತೆ ಉಳಿದೆಲ್ಲ ಕಡೆಗಳಲ್ಲಿ ಡಿಸೆಂಬರ್ 31 ರಂದು ಏನೆಲ್ಲಾ ನಿರ್ಬಂಧಗಳು ಇರುತ್ತವೆ ಎಂಬುದು ಪೊಲೀಸ್ ಆಯುಕ್ತರು ಹೊರಡಿಸುವ ಹೊಸ ಮಾರ್ಗಸೂಚಿಯ ಮೇಲೆ ಅವಲಂಬಿತವಾಗುತ್ತದೆ. ಒಟ್ಟಾರೆ ನೈಟ್ಕರ್ಫ್ಯೂ ಇಲ್ಲ, ಸರ್ಕಾರ ತನ್ನ ಆದಾಯಕ್ಕೆ ಕತ್ತರಿ ಹಾಕಿಕೊಳ್ಳುವುದಿಲ್ಲ. ಹೀಗಾಗಿ ನಾವು ನಮ್ಮ ಪಾರ್ಟಿ ಮಾಡಬಹುದು ಎಂದು ಕೊಂಡಿದ್ದರಿಗೆ ಗೃಹ ಸಚಿವರ ಹೇಳಿಕೆ ಶಾಕ್ ನೀಡಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications