ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಮುಂದಾದವರಿಗೆ ಬಿಗ್ ಶಾಕ್..!
ಬೆಂಗಳೂರು, ಡಿ. 25: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಹಿಂದಕ್ಕೆ ಪಡೆದಿದ್ದರಿಂದ, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಭರ್ಜರಿ ಪಾರ್ಟಿ ಮಾಡುವ ಉಮೇದಿನಲ್ಲಿದ್ದ ಬೆಂಗಳೂರಿಗರಿಗೆ ಗೃಹ ಸಚಿವರು ಶಾಕ್ ಕೊಟ್ಟಿದ್ದಾರೆ. ಇಂಗ್ಲೆಂಡ್ನಲ್ಲಿ ಕೊರೊನಾ ವೈರಸ್ ರೂಪಾಂತರಗೊಂಡು ಮತ್ತಷ್ಟು ವೇಗವಾಗಿ ಹರಡುವ ಗುಣಗಳನ್ನು ಬೆಳೆಸಿಕೊಂಡಿದೆ. ಈಗಾಗಲೇ ಇಂಗ್ಲೆಂಡ್ನಿಂದ ಸಾವಿರಾರು ಜನರು ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗೆ ಬಂದಿದ್ದಾರೆ. ಅವರಲ್ಲಿ ಬಹುತೇಕರು ಕೋವಿಡ್ ನೆಗಟಿವ್ ಪರೀಕ್ಷಾ ವರದಿಯನ್ನೂ ಸಲ್ಲಿಸಿರಲಿಲ್ಲ. ಹೀಗಾಗಿ ಗೊಂದಲಕ್ಕೆ ಬಿದ್ದಿದ್ದ ಆರೋಗ್ಯ ಇಲಾಖೆ, ಏಕಾಏಕಿ ನೈಟ್ ಕರ್ಫ್ಯೂ ಹಾಕಲು ಮುಂದಾಗಿತ್ತು.
ಹೀಗಾಗಿ ವರ್ಷಾಚರರಣೆ ಪಾರ್ಟಿ ಮಾಡುವ ಹುಮ್ಮನಸ್ಸಿನಲ್ಲಿದ್ದವರಿಗೆ ನಿರಾಸೆಯಾಗಿತ್ತು. ಬಳಿಕ ಸರ್ಕಾರ ನೈಟ್ ಕರ್ಫ್ಯೂ ಹಿಂದಕ್ಕೆ ಪಡೆದಿದ್ದರಿಂದ ಮತ್ತೆ ಪಾರ್ಟಿ ಪ್ರಿಯರು ಸಂತಸಗೊಂಡಿದ್ದರು. ಆದರೆ ಹೊಸ ವರ್ಷಾಚರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪಾರ್ಟಿ ಪ್ರಿಯರಿಗೆ ಶಾಕ್ ಕೊಟ್ಟಿದ್ದಾರೆ.

ಕಮಿಷನರ್ಗೆ ಸೂಚನೆ
ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಮುಂದಾದವರಿಗೆ ಬಿಗ್ ಶಾಕ್ ಕಾದಿದೆ. ಇಷ್ಟ ಬಂದಂತೆ ವರ್ಷಾಚರಣೆಗೆ ಅವಕಾಶ ಇಲ್ಲ. ನೈಟ್ ಕರ್ಪ್ಯೂ ಇಲ್ಲ ಅಂದರೂ, ಬೆಂಗಳೂರಿಗೆ ಹೊಸ ಮಾರ್ಗಸೂಚಿ ಜಾರಿಯಾಗಲಿದೆ. ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ತರಲು ಗೃಹ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ಸಿದ್ಧಮಾಡಲು ಮಹಾನಗರ ಪೊಲೀಸ್ ಆಯುಕ್ತರಿಗೆ ರಾಜ್ಯ ಗೃಹ ಇಲಾಖೆ ಸೂಚಿಸಿದೆ.

ಬೇಕಾಬಿಟ್ಟಿ ಓಡಾಡುವಂತಿಲ್ಲ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರತ್ಯೇಕ ಮಾರ್ಗಸೂಚಿಸಿ ರಚಿಸಿ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಸೂಚನೆ ಕೊಟ್ಟಿದ್ದಾರೆ. ಡಿಸೆಂಬರ್ 31ರಂದು ಬೇಕಾಬಿಟ್ಟಿ ಓಡಾಟ ಸೇರಿದಂತೆ ಕಾನೂನು ಸುವ್ಯಸ್ಥೆಗೆ ಅಡ್ಡಗಾಲು ಹಾಕುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ
ಬೆಂಗಳೂರಿಗೆ ಪ್ರತ್ಯೇಕ ಗೈಡ್ಲೈನ್ಸ್ ತರಲು ಸಿದ್ಧತೆ ನಡೆದಿದೆ.

ಬೆಂಗಳೂರಿಗೆ ಮಾರ್ಗಸೂಚಿ
ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆ ಹಿಂದಿನ ದಿನಕ್ಕೆ ಸಂಬಂಧಿಸಿದಂತೆ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ತರಲು ಸೂಚಿಸಿದ್ದೇನೆ. ಮಹಾನಗರ ಪೊಲೀಸ್ ಆಯುಕ್ತರು ಮಾರ್ಗಸೂಚಿಸಿ ರಚಿಸಿ ಜಾರಿ ಮಾಡುತ್ತಾರೆ. ನಾಳೆ ಅಥವಾ ನಾಡಿದ್ದು ಮಾರ್ಗಸೂಚಿ ಜಾರಿಗೆ ಬರಲಿದೆ ಎಂದು ಹೇಳಿಕೆ ನೀಡಿದ್ದಾರೆ.
Recommended Video

ಸಂಭ್ರಮಾಚರಣೆಗೆ ಅವಕಾಶವಿಲ್ಲ
ಬೆಂಗಳೂರಿನ ಎಂ.ಜಿ. ರೋಡ್, ಬ್ರಿಗೇಡ್ ರಸ್ತೆಗಳಲ್ಲಿ ಕಳೆದ ವರ್ಷದಂತೆ ಯಾವುದೇ ಸಂಭ್ರಮಾಚರಣೆಗೆ ಅವಕಾಶವಿಲ್ಲ ಎಂದು ಈಗಾಗಲೇ ಪೊಲೀಸ್ ಇಲಾಖೆ ಸ್ಷಷ್ಟಪಡಿಸಿದೆ. ಜೊತೆಗೆ ಪಬ್, ಕ್ಲಬ್, ರೆಸ್ಟೊರೆಂಟ್, ಫೈವ್ ಸ್ಟಾರ್ ಹೋಟೆಲ್ ಸೇರಿದಂತೆ ಉಳಿದೆಲ್ಲ ಕಡೆಗಳಲ್ಲಿ ಡಿಸೆಂಬರ್ 31 ರಂದು ಏನೆಲ್ಲಾ ನಿರ್ಬಂಧಗಳು ಇರುತ್ತವೆ ಎಂಬುದು ಪೊಲೀಸ್ ಆಯುಕ್ತರು ಹೊರಡಿಸುವ ಹೊಸ ಮಾರ್ಗಸೂಚಿಯ ಮೇಲೆ ಅವಲಂಬಿತವಾಗುತ್ತದೆ. ಒಟ್ಟಾರೆ ನೈಟ್ಕರ್ಫ್ಯೂ ಇಲ್ಲ, ಸರ್ಕಾರ ತನ್ನ ಆದಾಯಕ್ಕೆ ಕತ್ತರಿ ಹಾಕಿಕೊಳ್ಳುವುದಿಲ್ಲ. ಹೀಗಾಗಿ ನಾವು ನಮ್ಮ ಪಾರ್ಟಿ ಮಾಡಬಹುದು ಎಂದು ಕೊಂಡಿದ್ದರಿಗೆ ಗೃಹ ಸಚಿವರ ಹೇಳಿಕೆ ಶಾಕ್ ನೀಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications