ಶೀಘ್ರ ಕರಾವಳಿ ಪ್ರತ್ಯೇಕ ಮರಳು ನೀತಿ: ಮರುಗೇಶ್ ನಿರಾಣಿ
ಬೆಂಗಳೂರು,ಜನವರಿ 29: ಶೀಘ್ರ ಕರಾವಳಿಗೆ ಪ್ರತ್ಯೇಕ ಮರಳು ನೀತಿ ಪ್ರಕಟಿಸಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಅನ್ವಯವಾಗುವಂತೆ ಈ ಮರಳು ನೀತಿಯನ್ನು ಪ್ರಕಟಿಸಲಿದ್ದೇವೆ. ಇದರಿಂದಾಗಿ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕರಾವಳಿ ಭಾಗಗಳಲ್ಲಿ ಮರಳು ಗಣಿಗಾರಿಕೆ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಅತಿ ಶೀಘ್ರದಲ್ಲೇ ಕರಾವಳಿ ಪ್ರತ್ಯೇಕ ಮರಳು ನೀತಿಯನ್ನು ಸರ್ಕಾರ ಪ್ರಕಟಿಸಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಯವರು ಇಂದು ಘೋಷಿಸಿದರು.
ಕೆಲವು ಸಂದರ್ಭದಲ್ಲಿ ಆಶ್ರಯ ಮನೆ, ಸಣ್ಣಪುಟ್ಟ ಮನೆಗಳ ನಿರ್ಮಾಣಕ್ಕಾಗಿ ಮರಳನ್ನು ಎತ್ತಿನಗಾಡಿ, ದ್ವಿಚಕ್ರ ವಾಹನ ಮತ್ತಿತರ ವಾಹನಗಳಲ್ಲಿ ಸರಬರಾಜು ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ನಾವು ಯಾರಿಗೂ ದಂಡ ವಿಧಿಸಲು ಸಾಧ್ಯವಿಲ್ಲ. ಹೀಗಾಗಿ ನಿಯಮಗಳ ಸರಳೀಣಕರಣದ ಅಗತ್ಯವಿದೆ ಎಂದರು.
ನಮ್ಮ ಸರ್ಕಾರ ಮರಳನ್ನು ಪ್ರತಿಯೊಬ್ಬರಿಗೂ ಮಾರುಕಟ್ಟೆ ದರದಲ್ಲೇ ತಲುಪಿಸಲು ಬದ್ಧವಾಗಿದೆ. ಗುಣಮಟ್ಟದ ಮರಳನ್ನು ಸುಲಭವಾಗಿ ತಲುಪಿಸುವುದು ನಮ್ಮ ಪ್ರಮುಖ ಆದ್ಯತೆಗಳಾಗಿವೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಜೆಡ್ ವ್ಯಾಪ್ತಿಯಲ್ಲಿನ ನದಿಪಾತ್ರಗಳಲ್ಲಿ 2020-21 ಸಾಲಿನಲ್ಲಿ ಒಟ್ಟು 13 ಮರಳು ದಿಬ್ಬಗಳನ್ನು ತೆರವುಗೊಳಿಸಲು ಕರಾವಳಿ ವಲಯ ನಿರ್ವಹಣ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.
13 ಮರಳು ದಿಬ್ಬಗಳಲ್ಲಿ ಮರಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿತವಾಗಿರುವ ಏಳು ಸದಸ್ಯರ ಸಮಿತಿಯಿಂದ ಒಟ್ಟು 104 ಸಾಂಪ್ರದಾಯಿಕ ಮರಳು ತೆಗೆಯುವ ವ್ಯಕ್ತಿಗಳಿಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಪರವಾನಗಿಗಳನ್ನು ನೀಡಲಾಗಿದೆ ಎಂದರು.

ಯುಟಿ ಖಾದರ್ ಪ್ರಶ್ನೆಗೆ ಉತ್ತರ
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್ ಪ್ರಶ್ನೆಗೆ ಉತ್ತರಿಸಿದ ಅವರು, ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ. ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಜಿಲ್ಲಾ ಮತ್ತು ರಾಜ್ಯಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿದ್ದೇನೆ.

ಜನರು ಎದುರಿಸುತ್ತಿರುವ ಸಂಕಷ್ಟ
ಮರಳಿನ ಬಗ್ಗೆ ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಅರಿವಿದೆ. ಪದೇ ಪದೇ ಸಭೆ ನಡೆಸುವುದು , ಮುಂದೂಡುವುದರಲ್ಲಿ ಅರ್ಥವಿಲ್ಲ. ಜನರಿಗೆ ಸುಲಭವಾಗಿ ಮರಳು ಲಭ್ಯವಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಆಶ್ವಾಸನೆ ನೀಡಿದರು.

ರಾಜ್ಯದಲ್ಲಿ ಮರಳಿನ ಅಭಾವ
ರಾಜ್ಯದಲ್ಲಿ ಮರಳಿನ ಅಭಾವದ ಬಗ್ಗೆ ಸಚಿವ ಗಮನಸೆಳೆದ, ಸದಸ್ಯರಾದ ರಘುಪತಿಭಟ್, ನಾಡಗೌಡ, ಕುಮಾರ್ ಬಂಗಾರಪ್ಪ ಮತ್ತಿತರರು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜನರಿಗೆ ಸುಲಭವಾಗಿ ಮರಳು ಲಭ್ಯವಾಗುತ್ತಿಲ್ಲ. ಪ್ರತಿ ಕೆಡಿಪಿ ಸಭೆಯಲ್ಲೂ ಇದು ಪ್ರಸ್ತಾಪವಾಗುತ್ತದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಲ್ಲರಿಗೂ ಸುಲಭವಾಗಿ ಮರಳು ದೊರೆಯುವಂಥಾ ನೀತಿ
ಸದಸ್ಯರ ಮನವಿ ಆಲಿಸಿದ ಸಚಿವ ನಿರಾಣಿ ಅವರು, ನಮ್ಮ ಸರ್ಕಾರ ಪ್ರತಿಯೊಬ್ಬರಿಗೂ ಸುಲಭವಾಗಿ ಮರಳು ದೊರೆಯುವಂತೆ ನೋಡಿಕೊಳ್ಳಲಿದೆ. ಕಾನೂನಿನ ವ್ಯಾಪ್ತಿಯಲ್ಲೇ ನಿಯಮಗಳಿಗೆ ಒಳಪಟ್ಟೇ ಮರಳು ಹರಾಜು ಪ್ರಕ್ರಿಯೆ ನಡೆಯಲಿದೆ. ಮರಳು ಎಲ್ಲರಿಗೂ ಸಿಕ್ಕರೆ ಮಾತ್ರ ಸುಲಭವಾಗಿ ಕಾಮಗಾರಿಗಳು ನಡೆಯುತ್ತವೆ ಎಂದರು.
-
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications