ನೆಲಮಂಗಲ ಸಮೀಪ ಸರಣಿ ಅಪಘಾತ: ಮೂರು ಲಾರಿ ಸೇರಿ 9 ವಾಹನ ಜಖಂ
ಬೆಂಗಳೂರು, ಡಿ. 30: ರಸ್ತೆಗೆ ಅಡ್ಡ ಬಂದ ಪಾದಚಾರಿಯನ್ನು ರಕ್ಷಿಸಲು ಹೋಗಿ ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂಭತ್ತು ವಾಹನಗಳು ಜಖಂ ಆಗಿವೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಆಗಿರುವ ಬಗ್ಗೆ ವರದಿಯಾಗಿಲ್ಲ. ಬೆಳಗ್ಗೆ ರಸ್ತೆಯಲ್ಲಿ ಮಂಜು ಕವಿದಿದ್ದರಿಂದ ಈ ಸರಣಿ ಅಪಘಾತ ಸಂಭವಿಸಿದೆ.
ಈಚರ್ ವಾಹನ ಚಾಲಕ ಮತ್ತು ಪಶ್ಚಿಮ ಬಂಗಾಳ ಮೂಲದ ಮಹಿಳೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ನೆಲಮಂಗಲದ ಟಿ. ಬೇಗೂರು ಸಮೀಪ ಗುರುವಾರ ಬೆಳಗ್ಗೆ ಈ ಅವಘಡ ನಡೆದದೆ. ಈ ಸರಣಿ ಅಫಘಾತದಲ್ಲಿ ಮೂರು ಲಾರಿ, ಎರಡು ಬಸ್ ಹಾಗೂ ಒಂದು ಬೊಲೆರೋ , ಈಚರ್ ಸೇರಿದಂತೆ ಒಟ್ಟು 9 ವಾಹನ ಜಖಂ ಆಗಿವೆ. ಕ್ರೇನ್ ತರಿಸಿ ಅಪಘಾತಕ್ಕೆ ಒಳಗಾಗಿದ್ದ ವಾಹನಗಳನ್ನು ತೆರವುಗೊಳಿಸಲಾಗಿದೆ.
ಈ ಅವಘಡದಿಂದ ಸುಮಾರು ನಾಲ್ಕು ಕಿ.ಮೀ.ವರೆಗೂ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ವಾಹನಗಳು ಗಂಟೆಗಟ್ಟಲೇ ರಸ್ತೆ ಮೇಲೆ ಸರದಿ ಸಾಲಲ್ಲಿ ನಿಂತಿವೆ. ನೆಲಮಂಗಲ ಸಂಚಾರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ವಾಹನಗಳ ತೆರವು ಕಾರ್ಯಾಚರಣೆ ಮಾಡಿದ್ದಾರೆ.

ಸರಣಿ ಅಪಘಾತದಲ್ಲಿ ಪಶ್ಚಿಮ ಬಂಗಾಳ ಮೂಲದ ರಾಧಿಕಾ ಎಂಬಾಕೆ ಗಂಭೀರ ಗಾಯಗೊಂಡಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರೀತಿ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಿನ ಜಾವ ನಡೆದಿದ್ದೇನು?
ಗುರುವಾರ ಬೆಳಗಿನ ಜಾವ ಮಂಜು ಕವಿದಿದ್ದರಿಂದ ರಸ್ತೆ ಕಾಣುತ್ತಿರಲಿಲ್ಲ. ಈ ವೇಳೆ ಪಾದಚಾರಿಯೊಬ್ಬ ಲಾರಿಗೆ ಅಡ್ಡ ಬಂದಿದ್ದು, ಅದನ್ನು ತಪ್ಪಿಸುವ ಸಲುವಾಗಿ ಲಾರಿ ಚಾಲಕ ಯತ್ನಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಸುಮಾರು 9 ವಾಹನ ಜಖಂಗೊಂಡಿವೆ. ಲಾರಿಯೊಳಗೆ ಖಾಸಗಿ ಬಸ್ ತೂರಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಒಂದಕ್ಕೊಂದು ಜಖಂಗೊಂಡಿದ್ದ ವಾಹನಗಳ್ನು ಕ್ರೇನ್ ಮೂಲಕ ಬಿಡಿಸಲಾಗಿದೆ. ಈ ಘಟನೆ ವೇಳೆ ಈರುಳ್ಳಿ ಲಾರಿಯ ಅಪ್ಪಳಿಸಿ ಬಿದ್ದಿದೆ. ಈಚರ್ ವಾಹನದ ಚಾಲಕ ದುರ್ಗಪ್ಪ ಕಾಲಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ. ಯಲ್ಲಾಪುರದ ಮೂಕಾಂಬಿಕಾ, ಜಾರ್ಖಂಡ್ ಮೂಲದ ಶಿವನಾಥ್ ಮಾಥುರ್ಗೆ ಸಣ್ಣಪುಟ್ಟ ಪುಟ್ಟ ಗಾಯಗಳಾಗಿವೆ.

ಜನರ ಪರದಾಟ:
ಇನ್ನು ಸುಮಾರು ನಾಲ್ಕು ತಾಸು ಟ್ರಾಫಿಕ್ ಜಾಮ್ ಅಗಿತ್ತು. ಕೆಲಸಕ್ಕೆ ತೆರಳುವರು ರಸ್ತೆಯಲ್ಲಿಯೇ ಪರದಾಡುವಂತಾಗಿದೆ. ಮಂಜು ಕವಿದಿದ್ದ ಕಾರಣ ರಸ್ತೆಯಲ್ಲಿ ಏನೂ ಕಾಣುತ್ತಿರಲಿಲ್ಲ. ಈ ವೇಳೆ ಲಾರಿ ಚಾಲಕ ಪಾದಚಾರಿ ತಪ್ಪಿಸಲು ಹೋಗಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಆ ನಂತರ ಸರಣಿ ಅಪಘಾತ ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications