ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಯೋಜನೆ ವಿಳಂಬಕ್ಕೆ ಕಾರಣ
ಬೆಂಗಳೂರು, ಫೆಬ್ರವರಿ 11: ನಮ್ಮ ಮೆಟ್ರೋ ಎರಡನೇ ಹಂತದ ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಯೋಜನೆ ವಿಳಂಬವಾಗುತ್ತಿದೆ ಎನ್ನುವ ಕೂಗು ಕೇಳಿಬರುತ್ತಿದೆ ಆದರೆ ಅದಕ್ಕೆ ಕಾರಣವೇನೆಂಬುದು ಇದೀಗ ಬಹಿರಂಗವಾಗಿದೆ.
ಒಟ್ಟು 8.74 ಕಿ.ಮೀ ಉದ್ದದ ಮಾರ್ಗದಲ್ಲಿ 18 ತಿರುವುಗಳಿವೆ. ಇದರಿಂದಾಗಿ ಮೆಟ್ರೋ ರೈಲಿನ ವೇಗ ಸರಾಸರಿ 40-50 ಕಿ.ಮೀನಿಂದ 15-20ಕ್ಕೆ ಇಳಿಕೆಯಾಗಲಿದೆ.

ಮೆಟ್ರೋ ಮೊದಲನೇ ಹಂತದಲ್ಲಿದ್ದ ತಿರುವುಗಳು
ಮೆಟ್ರೋ ಮೊದಲನೇ ಹಂತದಲ್ಲಿ ರಾಜಾಜಿನಗರ, ಬನಶಂಕರಿ, ಶ್ರೀರಾಂಪುರ, ಲಾಲ್ಬಾಗ್ ಹಾಗೂ ಹಲಸೂರು ಬಳಿ ಸಂಕೀರ್ಣ ತಿರುವುಗಳಿವೆ.

ಕಾಮಗಾರಿಯೂ ಒಂದು ಸವಾಲು
ನಾಯಂಡಹಳ್ಳಿಯಿಂದ ಪಟ್ಟಣಗೆರೆವರೆಗೆ 3.94 ಕಿ.ಮೀ ಮಾರ್ಗದ ಗುತ್ತಿಗೆಯನ್ನು ಐಎಲ್ ಅಂಡ್ ಎಫ್ಎಸ್ ಕಂಪನಿಗೆ ನೀಡಲಾಗಿದೆ. ಪಟ್ಟಣಗೆರೆಯಿಂದ ಚಲ್ಲಘಟ್ಟ ಡಿಪೋದವರೆಗೆ 4.8 ಕಿ.ಮೀ ಮಾರ್ಗದ ಗುತ್ತಿಗೆಯನ್ನು ಸೋಮಾ ಎಂಟರ್ಪ್ರೈಸಸ್ ಗೆ ನೀಡಲಾಗಿದೆ.

2015ರ ಏಪ್ರಿಲ್ನಲ್ಲಿ ಕಾಮಗಾರಿ ಆರಂಭವಾಗಬೇಕಿತ್ತು
2015ರ ಏಪ್ರಿಲ್ನಲ್ಲಿ ಈ ಮಾರ್ಗದ ಕಾಮಗಾರಿ ಆರಂಭವಾಗಿತ್ತು. 2017ರ ಜುಲೈಗೆ ಸಿವಿಲ್ ಕಾಮಗಾರಿ ಪೂರ್ಣಕ್ಕೆ ನಿಗಮ ಗಡುವು ನೀಡಿತ್ತು. ಹಲವು ಕಾರಣಗಳಿಂದ ಕಂಪನಿಗಳು ಈ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಲು ವಿಫಲವಾಗಿದೆ. ಪ್ರಸ್ತುತ ವರ್ಷಾಂತ್ಯಕ್ಕೆ ಈ ಮಾರ್ಗ ಪೂರ್ಣಗೊಳಿಸಬೇಕು ಎಂದು ನಿರ್ಧರಿಸಲಾಗಿದೆ. ಹೆಚ್ಚಿನ ತುರುವುಗಳೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ.

ಅಂತಿಮ ಹಂತದಲ್ಲಿ ಕಾಮಗಾರಿ
ಲಾಂಚ್ ಗ್ರಿಡ್ಡರ್ ಸಹಾಯದಿಂದ ಒಂದು ಕಂಬದಿಂದ ಇನ್ನೊಂದು ಕಂಬಕ್ಕೆ ಸಾಗುವ ಮಾರ್ಗದ ನಿರ್ಮಾಣ ಮಾಡಲಾಗುತ್ತಿದೆ. ಹೆಚ್ಚಿನ ತಿರುವುಗಳು ಇದ್ದ ಕಾರಣ ಲಾಂಚ್ ಗ್ರಿಡ್ಡರ್ಗಳನ್ನೂ ಜಾಗರೂಕತೆಯಿಂದ ಮುಂದುವರೆಸಬೇಕಾಗಿತ್ತು.
-
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications