Benglauru-Mysuru Highway: ಸರ್ವೀಸ್ ರಸ್ತೆ ಸಮಸ್ಯೆ ಮುಕ್ತಿಗೆ NHAI ಹೊಸ ಪ್ಲಾನ್
ಬೆಂಗಳೂರು, ಡಿಸೆಂಬರ್ 25: ಬೆಂಗಳೂರು-ಮೈಸೂರು ಹೆದ್ದಾರಿಯು ವೇಗದ ಸಂಪರ್ಕ ಕಲ್ಪಿಸುವ ಜೊತೆಗೆ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಬೈಕ್ ಸವಾರರು ಹಾಗೂ ಅಕ್ಕಪಕ್ಕದ ಊರಿನ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿದೆ. ಈ ಕಾರಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರೈಲ್ವೆ ಓವರ್ ಬ್ರಿಡ್ಜ್ (ROB) ನಿರ್ಮಿಸಲು ಮುಂದಾಗಿದೆ. ಇದರಿಂದ ಸರ್ವೀಸ್ ರಸ್ತೆಯಲ್ಲಿನ ಸಂಚಾರ ಕಿರಿ ಕಿರಿ ತಪ್ಪಲಿದೆ.
ಹೆದ್ದಾರಿಯಿಂದ ಸರ್ವಿಸ್ ರಸ್ತೆ ಮಧ್ಯದ ಅಂತರದಿಂದ ಇಲ್ಲಿನ ಊರುಗಳಿಗೆ ತೆರಳುವವರಿಗೆ ತೊಂದರೆ ಉಂಟಾಗುತ್ತಿದೆ. ಕೆಲವು ಪಟ್ಟಣಗಳ ಬಳಿಕ ಈ ರೈಲ್ವೆ ಓವರ್ ಬ್ರಿಡ್ಜ್ ನಿರ್ಮಿಸುವ ಮಾರ್ಗದ ದೀರ್ಘ ಅಂತರವನ್ನು ಕಡಿಮೆ ಮಾಡುವ ಗುರಿ ಪ್ರಾಧಿಕಾರ ಹೊಂದಿದೆ. ಅದಕ್ಕಾಗಿ ಪ್ಲಾನ್ ಮಾಡಿಕೊಳ್ಳಲಾಗಿದೆ. 2023ರ ಮಾರ್ಚ್ ತಿಂಗಳಲ್ಲಿ ಹೆದ್ದಾರಿ ಆರಂಭವಾದಾಗಿನಿಂದ ಸೇವಾ ರಸ್ತೆಯ ಮಧ್ಯದ ಅಂತಗಳು ಅಂತರಗಳು ಪ್ರಯಾಣಿಕರನ್ನು ಇನ್ನಿಲ್ಲದಂತೆ ಹತಾಶಗೊಳಿಸಿದೆ.

ಸರ್ವೀಸ್ ರಸ್ತೆ ಅಪೂರ್ಣ: ನಿತ್ಯ ಕಿರಿ ಕಿರಿ
ಇದೇ ಮಾರ್ಗದಲ್ಲಿ ನಿತ್ಯ ಓಡಾಡುವ ಬೆಂಗಳೂರಿನ ವಾಹನ ಸವಾರರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಹೆದ್ದಾರಿಗೂ ಹಾಗೂ ಸರ್ವೀಸ್ ರಸ್ತೆಯು ಸಮಾನಾಂತರವಾಗಿ ಸಾಗುತ್ತಿಲ್ಲ. ನಡುವೆ ಅಲ್ಲಲ್ಲಿ ಗ್ಯಾಪ್ ಇದೆ. ಈ ಸಮಸ್ಯೆ ಸಮಸ್ಯೆಯನ್ನು ಹೆದ್ದಾರಿ ಪ್ರಾಧಿಕಾರ ಬಗೆಹರಿಸಬೇಕಿದೆ. ಮದ್ದೂರು, ರಾಮನಗರದಲ್ಲಿ ಸರ್ವೀಸ್ ರಸ್ತೆ ಅಪೂರ್ಣವಾಗಿದೆ. ಇದರಿಂದ ಸರ್ವೀಸ್ ರಸ್ತೆಗಳಲ್ಲಿ ಓಡಾಡುವವರಿಗೆ ಕಿರಿ ಕಿರಿ ಆಗುತ್ತಿದೆ.
ಹೆದ್ದಾರಿಯಲ್ಲಿ ಬಿಟ್ಟು ಹೋದ ಕೆಲಸಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ರೈಲ್ವೆ ಓವರ್ ಬ್ರಿಡ್ಜ್ ನಿರ್ಮಿಸುವ ಮುಖೇನ ಅಪೂರ್ಣ ಸರ್ವೀಸ್ ರಸ್ತೆ ಕೆಲಸ ಆರಂಭಿಸಲಿದ್ದೇವೆ. ಈ ಸಂಬಂಧ ROB ನಿರ್ಮಿಸಲು ಮುಂದಾಗಿದ್ದೇವೆ. ನಿರಂತರವಾಗಿ ಕೇಳಿ ಬಂದ ದೂರುಗಳ ಆಧಾರದಲ್ಲಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳೀಯರಿಗೂ ಸಂಚಾರ ಸಮಸ್ಯೆಗೆ ಮುಕ್ತಿ
ಈ ROB ನಿರ್ಮಾಣದಿಂದ ಇಲ್ಲಿ ಸಂಚಾರವು ಮತ್ತಷ್ಟು ಸುಗಮವಾಗುತ್ತದೆ. ದೂರದ ಪ್ರಯಾಣಿಕರಿಗೆ ಸರಾಗ ಸಂಚಾರ ವ್ಯವಸ್ಥೆ ಜೊತೆಗೆ ಅಲ್ಲಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಗೂ ಕಡಿವಾಣ ಹಾಕಲಾಗುತ್ತದೆ. ಸಮಸ್ಯೆ ಎದುರಿಸುತ್ತಿರುವ ಸ್ಥಳೀಯ ನಿವಾಸಿಗಳಿಗೆ ಪ್ರಯೋಜನ ಒದಗಿಸಲಿದೆ. ಈಗಾಗಲೇ ಟೆಂಡರ್ ನೀಡಲಾಗಿದೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಅಧಿಕಾರಿಗಳು ಮೂಲಗಳು ಮಾಹಿತಿ ನೀಡಿವೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications