ಮಕ್ಕಳ ಸುರಕ್ಷತೆಗೆ ಸರ್ಕಾರದ ಮಾರ್ಗಸೂಚಿ
ಬೆಂಗಳೂರು, ಜು.21: ಕರ್ನಾಟಕದ ಮಕ್ಕಳ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಈಗ ದೇಶದೆಲ್ಲೆಡೆ ಸುದ್ದಿಯಾಗುತ್ತಿದ್ದಂತೆ ರಾಜ್ಯ ಪೊಲೀಸ್ ಇಲಾಖೆ ಇದೀಗ ನಿಧಾನವಾಗಿ ಎಚ್ಚೆತ್ತುಕೊಂಡಿದೆ. ಆರಂಭದ ಹಂತವಾಗಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಗೃಹ ಇಲಾಖೆ ಮಾರ್ಗ ಸೂಚಿಯನ್ನು ಸಿದ್ದಪಡಿಸಿದ್ದು, ಕರಡು ಪ್ರತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ರಾಜ್ಯ ಪೊಲೀಸ್ ಇಲಾಖೆಗೆ ರವಾನಿಸಿದೆ.[ವಿಬ್ ಗಯಾರ್ ಪ್ರಕರಣ : ಆರೋಪಿ ಮುಸ್ತಫಾ ಬಂಧನ]
ಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಜವಾಬ್ದಾರಿ ಆ ಶಾಲೆಗಳಿಗೆ ಸೇರಿದ್ದು, ಅಲ್ಲಿ ನಡೆಯುವ ಅಪರಾಧ ಚಟುವಟಿಕೆಗಳಿಗೆ ಶಾಲಾ ಮುಖ್ಯಸ್ಥರು ಹೊಣೆಯಾಗುತ್ತಾರೆ. ಹೀಗಾಗಿ ಶಿಕ್ಷಣ ಹಾಗೂ ಸುರಕ್ಷತೆ ಶಾಲೆಯ ಜವಾಬ್ದಾರಿ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಮುಂದಿನ ಪುಟದಲ್ಲಿ ಗೃಹ ಇಲಾಖೆ ಸಿದ್ದಪಡಿಸಿದ ಮಾರ್ಗಸೂಚಿಯಲ್ಲಿರುವ ಅಂಶಗಳನ್ನು ನೀಡಲಾಗಿದೆ.[ಪೋಷಕರ ಕೂಗಿಗೆ, ಹಾರ್ಲೆ ಗುಡುಗಿಗೆ ಏಳುವುದೇ ಸರ್ಕಾರ?]

ಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯ
*ಶಾಲೆಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು,
*ಶಾಲೆಗೆ ಹೊರಗಿನವರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕು.

ಪೊಲೀಸ್ ಠಾಣೆಗೆ ಮಾಹಿತಿ ನೀಡಿ:
* ಸಮೀಪದ ಪೊಲೀಸ್ ಠಾಣೆಗೆ ಶಾಲಾ ಸಿಬ್ಬಂದಿಗಳ ವಿವರ ಶಾಲೆಯ ಮುಖ್ಯಸ್ಥರು ಸಲ್ಲಿಸಬೇಕು.
*ತಿಂಗಳಿಗೊಮ್ಮೆ ಶಾಲೆಗಳಿಗೆ ಪೊಲೀಸರು ಕಡ್ಡಾಯವಾಗಿ ಭೇಟಿನೀಡಬೇಕು.
*ಶಾಲೆಗಳಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆಯನ್ನು ಪ್ರಕಟಿಸಬೇಕು.

ಶಾಲಾ ಮುಖ್ಯಸ್ಥರೇ ಹೊಣೆ:
*ಮಕ್ಕಳ ಮೇಲೆ ಯಾವುದೇ ಬಗೆಯ ದೌರ್ಜನ್ಯಗಳಾದರೆ ಅದರ ಹೊಣೆಯನ್ನು ಶಾಲಾ ಮುಖ್ಯಸ್ಥರೇ ಹೊರಬೇಕು.
*ಶಾಲೆಗಳಲ್ಲಿ ಮಕ್ಕಳಿಗೆ ಗಂಭೀರ ಶಿಕ್ಷೆ ನೀಡಬಾರದು.

ಮಕ್ಕಳ ಹಕ್ಕು ಸುರಕ್ಷತೆಗೆ ಕ್ರಮ
*ಮಕ್ಕಳ ಹಕ್ಕುಗಳು ಹಾಗೂ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ಲೋಪವಾಗಬಾರದು.
* ಹೊಸದಾಗಿ ಉದ್ಯೋಗಿಯನ್ನು ನೇಮಕ ಮಾಡುವಾಗ ಉದ್ಯೋಗಿಯ ಪೂರ್ವಾಪರ ಮಾಹಿತಿಯನ್ನು ಪರಿಶೀಲಿಸಿ ನೇಮಕ ಮಾಡಿಕೊಳ್ಳಬೇಕು.

ಮಕ್ಕಳ ಕ್ಲಬ್ ಸ್ಥಾಪಿಸುವುದು:
*ಈ ಎಲ್ಲ ಮಾರ್ಗಸೂಚಿಗಳು ಅನಾಥಾಲಯಗಳಿಗೂ ಅನ್ವಯಿಸುತ್ತದೆ.
*ಖಾಸಗಿ, ಅನುದಾನಿತ, ಸರಕಾರಿ ಶಾಲೆಗಳಲ್ಲಿ ಮಕ್ಕಳ ಕ್ಲಬ್ ಸ್ಥಾಪಿಸುವುದು.

ಮಾರ್ಗಸೂಚಿ ಸೋಮವಾರ ಬಿಡುಗಡೆ:
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಾಲೆ ಅನುಸರಿಸಬೇಕಾದ ಭದ್ರತಾ ಕ್ರಮಗಳ ಕುರಿತು ಮಾರ್ಗಸೂಚಿ ಈಗಾಗಲೇ ಸಿದ್ಧಗೊಂಡಿದ್ದು, ಸೋಮವಾರ ಅಧಿಕೃತವಾಗಿ ಬೆಂಗಳೂರು ನಗರದ ಎಲ್ಲ ಡಿಸಿಪಿಗಳಿಗೆ ಇದನ್ನು ಬಿಡುಗಡೆ ಮಾಡಲಾಗುವುದು. ಇದೇ ರೀತಿ ರಾಜ್ಯದ ಎಲ್ಲೆಡೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇಲ್ಲವೇ ಶಾಲೆಯ ಆಡಳಿತ ಮಂಡಳಿ ಹಾಗೂ ಶಾಲೆ ಮುಖ್ಯಸ್ಥರ ಸಭೆ ನಡೆಸಿ ಮಾರ್ಗಸೂಚಿಯ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಔರಾದ್ಕರ್ ಹೇಳಿದ್ದಾರೆ.

ಗೂಂಡಾ ಕಾಯ್ದೆಯಡಿ ಶಿಕ್ಷೆ:
"ರಾಜ್ಯದಲ್ಲಿ ಇನ್ನು ಮುಂದೆ ಅತ್ಯಾಚಾರ, ದೌರ್ಜನ್ಯ ಎಸಗಿದ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಶಿಕ್ಷಿಸಲಾಗುವುದು.ಈ ವಿಚಾರವನ್ನು ರಾಜಕೀಯ ಮಾಡುವುದು ಸರಿಯಲ್ಲ. ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ನೀಡಲು ಸರಕಾರ ಹಿಂದೆ ಮುಂದೆ ನೋಡುವುದಿಲ್ಲ. ಪೊಲೀಸರು ಕಟ್ಟು ನಿಟ್ಟಿನ ಕ್ರಮ ಜರುಗಿಸುತ್ತಾರೆ"
ಸಿದ್ದರಾಮಯ್ಯ, ಮುಖ್ಯಮಂತ್ರಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications