ರಾಬರ್ಟ್ ಸಿನಿಮಾ ನಿರ್ಮಾಪಕನ ಸಹೋದರನ ಕೊಲೆಗೆ ಸ್ಕೆಚ್ ಹಾಕಿದ್ದ ಆರೋಪಿಗಳು ವಶಕ್ಕೆ
ಬೆಂಗಳೂರು, ಡಿಸೆಂಬರ್ 20: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, "ರಾಬರ್ಟ್' ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ಸಹೋದರ ದೀಪಕ್ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನರನ್ನು ಬೆಂಗಳೂರಿನ ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ ಮಂಜುನಾಥ್ ಹಾಗೂ ಅವನ ಸಹಚರರು ಸ್ಕೆಚ್ ಹಾಕುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕ ಸಂದರ್ಭದಲ್ಲಿ ಜಯನಗರ ಪೊಲೀಸರು ದಾಳಿ ಮಾಡಿದ್ದರು. ಸದ್ಯ ಏಳು ಜನರನ್ನು ಬಂಧಿಸಿ, ವಿಚಾರಣೆ ಮಾಡುತ್ತಿದ್ದಾರೆ.
ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅಣ್ಣನಿಗೆ ಘಟನೆ ಬಗ್ಗೆ ಜಯನಗರ ಪೊಲೀಸರು ಮಾಹಿತಿ ನೀಡಿದ್ದು, ರೌಡಿ ಶೀಟರ್ ಪಳನಿ ಗ್ಯಾಂಗ್ ನ ಮಂಜುನಾಥ್ ನಿಂದ ಕೃತ್ಯಕ್ಕೆ ಪ್ಲಾನ್ ನಡೆಸಲಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಯಾವ ಕಾರಣಕ್ಕೆ ಕೊಲೆ ಪ್ಲಾನ್ ಮಾಡಲಾಗುತ್ತಿತ್ತು ಎಂಬುದರ ಬಗ್ಗೆ ನೀಲಸಂಧ್ರ ಏರಿಯಾದ ಮಂಜುನಾಥ್ ನನ್ನು ತನಿಖೆ ಮಾಡಲಾಗುತ್ತಿದೆ ಎಂದು ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ಮಾಹಿತಿ ನೀಡಿದ್ದಾರೆ.
ಒಬ್ಬರಲ್ಲ, ಇಬ್ಬರಲ್ಲ ನಾಲ್ವರ ಕೊಲೆಗೆ ಸ್ಕೆಚ್ ಹಾಕಿದ್ದು, ನಾಲ್ವರಲ್ಲಿ ಯಾರೇ ಬಂದರೂ ಕೊಲೆ ಮಾಡ್ಲೇಬೇಕು ಎಂದು ಪ್ಲಾನ್ ಮಾಡಲಾಗಿತ್ತು ಎನ್ನಲಾಗಿದೆ. ನಾಲ್ವರ ಕೊಲೆಗೆ ಸ್ಕೆಚ್ ಹಾಕಿ ಮಾರಕಾಸ್ತ್ರ ಹಿಡಿದು ನಟೋರಿಯಸ್ ಗ್ಯಾಂಗ್ ಕುಳಿತ್ತಿತ್ತು ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ.
ಕುಖ್ಯಾತ ರೌಡಿಶೀಟರ್ ಸೈಕಲ್ ರವಿ, ಸಹಚರ ಬೇಕರಿ ರಘು, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ದೀಪಕ್ ಕೊಲೆಗೆ ಸ್ಕೆಚ್ ಹಾಕಿದ್ದು, ನ್ಯಾಷನಲ್ ಕಾಲೇಜು ಬಳಿ ರಜತಾದ್ರಿ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಗ್ಯಾಂಗ್ ಹೊಂಚು ಹಾಕುತ್ತಿತ್ತು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಶನಿವಾರ ರಾತ್ರಿ 8 ಗಂಟೆಗೆ ಸಿನಿಮೀಯ ಶೈಲಿಯಲ್ಲಿ ಜಯನಗರ ಪೊಲೀಸರು ದಾಳಿ ಮಾಡಿದ್ದರು. ಟೆಂಪೋ ಟ್ರಾವಲರ್ ನಲ್ಲಿ ಮಾರಕಾಸ್ತ್ರಗಳನ್ನು ತಂದಿದ್ದರು. ಈ ವೇಳೆ ರೌಡಿ ಶೀಟರ್ ಭರತ್ ಕುಮಾರ್ ಸೇರಿ ಏಳು ಮಂದಿ ಬಂಧಿಸಲಾಗಿದೆ.
ಕೆಲವರು ಪೊಲೀಸರು ದಾಳಿ ಮಾಡುತ್ತಿದ್ದಂತೆ ಕಾಲ್ಕಿತ್ತಿದ್ದು, ಪ್ರಕರಣ ಸಂಬಂಧ ಜಯನಗರ ಪೊಲೀಸರಿಂದ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸ್ ಇನ್ಸ್ ಪೆಕ್ಟರ್ ಸುದರ್ಶನ್ ಅವರಿಂದ ಸುಮೋಟೋ ಕೇಸ್ ಹಾಕಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ವ್ಯವಹಾರದ ಹಿನ್ನೆಲೆ ಕೊಲೆಗೆ ಪ್ಲಾನ್ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications