ಈಜಿಪುರದಲ್ಲಿ ಸಂಪ್ ಗೆ ಬಿದ್ದು ಬಾಲಕ ಸಾವು
ಬೆಂಗಳೂರು, ಸೆ.23 : ಬಿಲ್ಡರ್ ಸಂಸ್ಥೆಯ ಯಡವಟ್ಟಿನಿಂದಾಗಿ ಆರು ವರ್ಷದ ಬಾಲಕನೊಬ್ಬ ಸಂಪ್ ಗೆ ಬಿದ್ದು ಮೃತಪಟ್ಟಿರುವ ಘಟನೆ ಆಡುಗೋಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ.
ಈಜಿಪುರ ಕೊಳೆಗೇರಿಯಲ್ಲಿ ಕಟ್ಟಡ ನಿರ್ಮಾಣ ಮಾಡುವ ಗುತ್ತಿಗೆಯನ್ನು ಪಡೆದುಕೊಂಡಿರುವ ಮೆವರಿಕ್ ಹೋಲ್ಡಿಂಗ್ಸ್ ಬಿಲ್ಡರ್ ಸಂಸ್ಥೆ ಕಾಮಗಾರಿಗಾಗಿ ಕಟ್ಟಡದ ಸುತ್ತಾ ಮೂರು ಕಡೆ 15 ಅಡಿ ಆಳದ ಗುಂಡಿ ತೋಡಿತ್ತು.

ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸಂಪ್ ನಲ್ಲಿ ನೀರು ತುಂಬಿಕೊಂಡಿತ್ತು. ಭಾನುವಾರ ಸಂಜೆ ಲಕ್ಷ್ನಣನಗರ 1ನೇ ಕ್ರಾಸ್ ನಿವಾಸಿ ಪ್ರಶಾಂತ್ (6) ಆಟ ಆಡುವಾಗ ಮನೆ ಸಮೀಪವೇ ಇದ್ದ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಬಾಲಕ ಸಂಪ್ ಗೆ ಬಿದ್ದಿರುವ ವಿಷಯ ತಿಳಿದ ಸ್ಥಳೀಯರು ತಕ್ಷಣ ಆತನನ್ನು ಹೊರ ತೆಗೆದು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಆಸ್ಪತ್ರೆ ತಲುಪುವ ವೇಳೆಗಾಗಲೇ ಪ್ರಶಾಂತ್ ಮೃತಪಟ್ಟಿದ್ದ.
ಅಕ್ರಮ ಕಾಮಗಾರಿ : ಈ ಕಟ್ಟಡ ನಿರ್ಮಾಣ ಕಾಮಗಾರಿಗೆ ಕಾನೂನು ತೊಡಕುಗಳು ಎದುರಾಗಿವೆ. ಆದರೆ, ಅದನ್ನು ಲೆಕ್ಕಿಸದೇ ಬಿಲ್ಡರ್ ಗಳು ಕಾಮಗಾರಿ ಮುಂದುವರೆಸಿದ್ದಾರೆ. ಸಂಪ್ ತೋಡಿ ಅದನ್ನು ಮುಚ್ಚದೆ ಬಿಟ್ಟಿದ್ದರಿಂದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ವಸತಿ ಸಮುಚ್ಛಯ ನಿರ್ಮಿಸುವ ಸಂಬಂಧ ಬಿಲ್ಡರ್ ಸಂಸ್ಥೆ ನಿರ್ಮಿಸುವ ಯೋಜನಾ ನಕ್ಷೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಇನ್ನೂ ಅನುಮತಿ ನೀಡಿಲ್ಲ. ಈ ಕಟ್ಟಡ ನಿರ್ಮಾಣ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ.
ಬಿಡಿಎ ಅನುಮತಿ ದೊರೆಯುವವರೆಗೂ ಯಾವುದೇ ಕಾಮಗಾರಿ ಕೈಗೊಳ್ಳುವಂತಿಲ್ಲ. ಆದರೆ, ಬಿಲ್ಡರ್ ಗಳು ಕಟ್ಟಡದ ಕಾಮಗಾರಿ ಮುಂದುವರೆಸಿದ್ದಾರೆ. ಈ ಸ್ಥಳದಲ್ಲಿ ಮಾಲ್ ಮತ್ತು ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಯ ಭಾಗವಾಗಿ 15 ಅಡಿ ಗುಂಡಿಗಳನ್ನು ತೋಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. (2013ರಲ್ಲಿ ಸಂಪ್ ಗೆ ಬಿದ್ದ ಪ್ರಕರಣಗಳು)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications