ಬೆಂಗಳೂರಿನಲ್ಲಿ ಶ್ರೀಗಳ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು, ನ. 17 : ಮೂಢ ನಂಬಿಕೆ ನಿಷೇಧಿಸುವ ಕಾನೂನು ಜಾರಿ ಮಾಡಬೇಕು ಮತ್ತು ಸಾಮಾಜಿಕ ತಾರತಮ್ಯ ನಿವಾರಣೆ ಮಾಡಬೇಕೆಂದು ಒತ್ತಾಯಿಸಿ ನಿಡುಮಾಮಿಡಿ ಮಹಾಸಂಸ್ಥಾನ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದಲ್ಲಿ ನೂರಾರು ಮಠಾಧೀಶರು ಮೂರು ದಿನಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಸೋಮವಾರ ಪ್ರಗತಿಪರ ಮಠಾಧೀಶರ ವೇದಿಕೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅವರು, 13 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿರಶನ ನಡೆಸಲಾಗುತ್ತಿದೆ ಎಂದರು.

ನ.25, 29 ಹಾಗೂ 30ರಂದು ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ಮಡೆಸ್ನಾನ, ಎಡೆಸ್ನಾನ ನಡೆಯುವ ಸಾಧ್ಯತೆ ಇದೆ. ಈ ಕಂದಾಚಾರಗಳನ್ನು ತಡೆಯುವಂತೆ ಸರ್ಕಾರದ ಗಮನ ಸೆಳೆಯಲು ಈ ಉಪವಾಸ ಹಮ್ಮಿಕೊಂಡಿದ್ದೇವೆ ಎಂದು ಶ್ರೀಗಳು ಹೇಳಿದರು. [ಮಡೆಸ್ನಾನ ವಿರೋಧಿಸಿ ನಿಡುಮಾಮಿಡಿ ಶ್ರೀ ಉಪವಾಸ]
ಮೂಢನಂಬಿಕೆ ನಿಷೇಧ ಸೇರಿದಂತೆ 13 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ನಿರಶನ ನಡೆಸಲಾಗುತ್ತಿದೆ. ಮುಖ್ಯಮಂತ್ರಿಗಳು ಅಥವ ಜನಪ್ರತಿನಿಧಿಗಳು ಬಂದು ಭರವಸೆ ನೀಡುವ ತನಕ ನಿರಶನವನ್ನು ಹಿಂಪಡೆಯುವುದಿಲ್ಲ ಎಂದು ಶ್ರೀಗಳು ತಿಳಿಸಿದರು.
ವಿಶ್ವವಿದ್ಯಾಲಯಗಳಲ್ಲಿ ಸಮಾಜದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಗಳ ಸಂಸ್ಕೃತಿಯ ಸಂಶೋಧನೆಗಾಗಿ ಅಧ್ಯಯನ ಪೀಠ ಸ್ಥಾಪಿಸಬೇಕು. ಬಾಲ್ಯ ವಿವಾಹ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಜೀತಪದ್ಧತಿ, ಋತುಮತಿಯಾದ ಮಹಿಳೆಯನ್ನು ಗ್ರಾಮದಿಂದ ಬಹಿಷ್ಕರಿಸುವ ಅನಿಷ್ಠ ಪದ್ಧತಿಗಳು ತೊಲಗಬೇಕು ಎಂದು ಶ್ರೀಗಳು ಒತ್ತಾಯಿಸಿದರು.
ಮೂರು ದಿನಗಳ ನಿರಶನದಲ್ಲಿ ಯಡಿಯೂರು ಶ್ರೀ ತೋಂಟದ ಸಿದ್ದಲಿಂಗಸ್ವಾಮೀಜಿ, ಕಲ್ಬುರ್ಗಿಯ ಶ್ರೀ ಶರಣಬಸವ ಸ್ವಾಮೀಜಿ, ಹುಕ್ಕೇರಿಯ ಶ್ರೀ ಪಂಚಮ ಶಿವಲಿಂಗಸ್ವಾಮೀಜಿ, ಸಾಣೆಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಮುಂತಾದವರು ಪಾಲ್ಗೊಂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications