Rain deficit in Bengaluru: ಬೆಂಗಳೂರಿನಲ್ಲಿ ತೀವ್ರ ಮಳೆ ಕೊರತೆ- ಏರಿದ ತಾಪಮಾನ, ಮಾಹಿತಿ, ವಿವರ
ಬೆಂಗಳೂರು, ಆಗಸ್ಟ್ 17: ಬೆಂಗಳೂರು ಮಹಾನಗರದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಈ ಕಾರಣ, ತಾಪಮಾನದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಇದು ಸಾಮಾನ್ಯಕ್ಕಿಂತ 3.7 ಡಿಗ್ರಿ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಬುಧವಾರ ಗರಿಷ್ಠ ತಾಪಮಾನವು 31.8 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಬೆಂಗಳೂರಿನಲ್ಲಿ ಈ ಹಿಂದೆ 1899 ರಲ್ಲಿ, ಆಗಸ್ಟ್ ತಿಂಗಳು 33.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು, ಇದು ಆಗಸ್ಟ್ ತಿಂಗಳ ದಾಖಲೆಯಲ್ಲಿಯೇ ಗರಿಷ್ಠವಾಗಿತ್ತು ಎಂದು ವರದಿಯೊಂದು ತಿಳಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ( ಕೆಎಸ್ಎನ್ಡಿಎಂಸಿ ) ನೀಡಿರುವ ಮಾಹಿತಿ ಪ್ರಕಾರ, ರಾಜ್ಯಾದ್ಯಂತ ಸರಾಸರಿ ಗರಿಷ್ಠ ತಾಪಮಾನವು ಯಾದಗಿರಿ ಜಿಲ್ಲೆಯಲ್ಲಿ 35.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿಸಿದೆ.
ರಾಜ್ಯದ ಭೌಗೋಳಿಕ ಪ್ರದೇಶದ ಸುಮಾರು ಶೇ 85 ರಷ್ಟು ಗರಿಷ್ಠ ತಾಪಮಾನವು 30 ರಿಂದ 36 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ. ಕಲಬುರಗಿ, ಕೋಲಾರ, ಬೆಳಗಾವಿ, ಕೊಪ್ಪಳ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಕೆಲವೆಡೆ 35 ರಿಂದ 37 ಡಿಗ್ರಿ ಸೆಲ್ಸಿಯಸ್ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಕೇಂದ್ರ ತಿಳಿಸಿದೆ.
ಕೆಎಸ್ಎನ್ಡಿಎಂಸಿ ಜೂನ್ 1 ರಿಂದ ಆಗಸ್ಟ್ 16 ರ ವರೆಗಿನ ಅಂಕಿಅಂಶಗಳನ್ನು ವಿಶ್ಲೇಷಿಸಿದೆ. ದಕ್ಷಿಣ ಕರ್ನಾಟಕದ 14 ಜಿಲ್ಲೆಗಳಲ್ಲಿ ಶೇ.20 ರಿಂದ 44 ರಷ್ಟು ಮಳೆ ಕೊರತೆಯಾಗಿದೆ. ಅಂದರೆ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆ ಕೊರತೆ ಎದ್ದು ಕಾಣುತ್ತಿದೆ.
ಆಗಸ್ಟ್ 1 ರಿಂದ ಆಗಸ್ಟ್ 16 ರ ವರೆಗಿನ ವಿಶ್ಲೇಷಣೆ ಪ್ರಕಾರ, 'ಒಟ್ಟು 31 ಜಿಲ್ಲೆಗಳಲ್ಲಿ 27 ಜಿಲ್ಲೆಗಳು ದೊಡ್ಡ ಕೊರತೆ ಅನುಭವಿಸುತ್ತಿವೆ ಎಂದು ಕೇಂದ್ರವು ಹೇಳಿದೆ. ಆದರೆ, ಇನ್ನುಳಿದ ಮೂರು ಕೊರತೆ ಕಾಣುತ್ತಿದೆ. ಒಂದು ಜಿಲ್ಲೆಯಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಮಳೆ ಬೀಳುತ್ತಿದೆ. ರಾಜ್ಯದಾದ್ಯಂತ ಮಳೆಯ ತೀವ್ರತೆ ಮತ್ತು ಆವರ್ತನವು ಈ ತಿಂಗಳು ಶಾಂತವಾಗಿದೆ. ರಾಜ್ಯದಾದ್ಯಂತ ಮಾನ್ಸೂನ್ ಚಟುವಟಿಕೆ ದುರ್ಬಲಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾದ ಮೂರು ಸ್ಥಳಗಳೆಂದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ಲೆ ( 43 ಮಿ.ಮೀ ಮಳೆ ), ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸಾಸ್ವಿಹಳ್ಳಿ ( 37 ಮಿ.ಮೀ ಮಳೆ ) ಮತ್ತು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುಳಗೋಡು ಅಣೆಕಟ್ಟು ( 34.5. ಮಿಮೀ ಮಳೆ ) ಪ್ರದೇಶದಲ್ಲಿ ಮಳೆಯಾಗಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications