ಲೈಂಗಿಕ ದೌರ್ಜನ್ಯ ಪ್ರಕರಣ: ಬಾಲ ಮಂಜುನಾಥ್ ಸ್ವಾಮೀಜಿಗೆ ಮನೆ ಊಟಕ್ಕೆ ಹೈಕೋರ್ಟ್ ಅಸ್ತು
ಬೆಂಗಳೂರು, ಮೇ 10: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ತುಮಕೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಬಾಲ ಮಂಜುನಾಥ ಅವರಿಗೆ ಮಠದಿಂದ ಖಾಸಗಿ / ಮನೆ ಊಟ ಹಾಗೂ ಹಾಸಿಗೆ ಪೂರೈಕೆಗೆ ಹೈಕೋರ್ಟ್ ಅನುಮತಿಸಿದೆ.
ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀಮಠದ) ಪೀಠಾಧಿಪತಿ ಬಾಲ ಮಂಜುನಾಥ ಅವರಿಗೆ ಮಠದಿಂದ ಖಾಸಗಿ ಅಥವಾ ಮನೆ ಊಟ ಹಾಗೂ ಹಾಸಿಗೆ ಪೂರೈಕೆ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.

ಹಾಗಾಗಿ ಇನ್ನು ಮುಂದೆ ಸ್ವಾಮೀಜಿಗೆ ಮನೆ ಊಟ ಸಿಗುವುದು ಖಾತ್ರಿ ಆಗಲಿದೆ. ಅದರೆ ನ್ಯಾಯಾಲಯ ಕೆಲವೊಂದು ಷರತ್ತುಗಳನ್ನು ಹಾಕಿದ್ದು, ಅವುಗಳನ್ನು ಪಾಲಿಸಲೇಬೇಕು, ಇಲ್ಲವಾದರೆ ಪೊಲೀಸರು ಆದೇಶ ಮಾರ್ಪಾಡಿಗೆ ಮನವಿ ಸಲ್ಲಿಸಬಹುದಾಗಿದೆ.
ಬಾಲ ಮಂಜುನಾಥ ಸ್ವಾಮೀಜಿ ತಮಗೆ ಮಠದಿಂದ ಖಾಸಗಿ / ಮನೆ ಊಟ ಹಾಗೂ ಹಾಸಿಗೆ ಪೂರೈಕೆಗೆ ಅನುಮತಿ ನೀಡುವಂತೆ ತುಮಕೂರು ಜೈಲು ಅಧೀಕ್ಷಕರಿಗೆ ನಿರ್ದೇಶಿಸಬೇಕು ಎಂದು ಕೋರಿ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ಈ ನಿರ್ದೇಶನ ನೀಡಿದೆ.
ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಅರ್ಜಿದಾರರು ತಮ್ಮ ರಿಸ್ಕ್ನಲ್ಲಿ ಮಠದಿಂದ ಖಾಸಗಿ / ಮನೆ ಊಟವನ್ನು ತರಿಸಿಕೊಳ್ಳಬಹುದು. ಅದನ್ನು ಜೈಲು ಅಧಿಕಾರಿಗಳು ಪರೀಕ್ಷೆ ಮಾಡಬೇಕು. ನಂತರವೇ ಅರ್ಜಿದಾರರು ಸೇವನೆಗೆ ಅವಕಾಶ ಕಲ್ಪಿಸಬೇಕು. ಇನ್ನೂ ಅರ್ಜಿದಾರರ ತಮ್ಮದೇ ಆದ ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ತುಮಕೂರು ಕಾರಾಗೃಹ ಅಧೀಕ್ಷಕರಿಗೆ ನ್ಯಾಯಪೀಠ ಸೂಚಿಸಿದೆ. ಜತೆಗೆ, ಅಗತ್ಯವಿದ್ದರೆ ಈ ಆದೇಶ ಮಾರ್ಪಾಡಿಗೆ ಜೈಲು ಅಧಿಕಾರಿಗಳು ನ್ಯಾಯಾಲಯವನ್ನು ಕೋರಬಹುದು ಎಂದು ಆದೇಶಿಸಿದೆ.
ಏನಿದು ಪ್ರಕರಣ?
ಬಾಲ ಮಂಜುನಾಥ ಸ್ವಾಮೀಜಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತೆಯೊಬ್ಬರು 2024ರ ಮಾರಚ್ 7 ರಂದು ಹುಲಿಯೂರುದುರ್ಗ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಸ್ವಾಮೀಜಿಯನ್ನು ಬಂಧಿಸಿದ್ದರು. ವಿಚಾರಣಾ ನ್ಯಾಯಾಲಯವು ಸ್ವಾಮೀಜಿಯನ್ನು ಮಾರ್ಚ್ 14ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಸದ್ಯ ತುಮಕೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಸ್ವಾಮೀಜಿ, ಜೈಲಿನಲ್ಲಿ ಪೂರೈಸುವ ಊಟ ತಮಗೆ ಸರಿಹೊಂದುತ್ತಿಲ್ಲ. ಇದರಿಂದ ಮಠದಿಂದ ಖಾಸಗಿ / ಮನೆ ಊಟ, ಹಾಸಿಗೆ ತರಿಸಿಕೊಳ್ಳಲು ತಮಗೆ ಅನುಮತಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರಿದ್ದರು. ಅದಕ್ಕೆ ಜೈಲಾಧಿಕಾರಿಗಳು ಸಮ್ಮಿತಿಸದಕ್ಕೆ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದರು.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications