ಲೈಂಗಿಕ ದೌರ್ಜನ್ಯ ಪ್ರಕರಣ: ಬಾಲ ಮಂಜುನಾಥ್ ಸ್ವಾಮೀಜಿಗೆ ಮನೆ ಊಟಕ್ಕೆ ಹೈಕೋರ್ಟ್ ಅಸ್ತು
ಬೆಂಗಳೂರು, ಮೇ 10: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ತುಮಕೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಬಾಲ ಮಂಜುನಾಥ ಅವರಿಗೆ ಮಠದಿಂದ ಖಾಸಗಿ / ಮನೆ ಊಟ ಹಾಗೂ ಹಾಸಿಗೆ ಪೂರೈಕೆಗೆ ಹೈಕೋರ್ಟ್ ಅನುಮತಿಸಿದೆ.
ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀಮಠದ) ಪೀಠಾಧಿಪತಿ ಬಾಲ ಮಂಜುನಾಥ ಅವರಿಗೆ ಮಠದಿಂದ ಖಾಸಗಿ ಅಥವಾ ಮನೆ ಊಟ ಹಾಗೂ ಹಾಸಿಗೆ ಪೂರೈಕೆ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.

ಹಾಗಾಗಿ ಇನ್ನು ಮುಂದೆ ಸ್ವಾಮೀಜಿಗೆ ಮನೆ ಊಟ ಸಿಗುವುದು ಖಾತ್ರಿ ಆಗಲಿದೆ. ಅದರೆ ನ್ಯಾಯಾಲಯ ಕೆಲವೊಂದು ಷರತ್ತುಗಳನ್ನು ಹಾಕಿದ್ದು, ಅವುಗಳನ್ನು ಪಾಲಿಸಲೇಬೇಕು, ಇಲ್ಲವಾದರೆ ಪೊಲೀಸರು ಆದೇಶ ಮಾರ್ಪಾಡಿಗೆ ಮನವಿ ಸಲ್ಲಿಸಬಹುದಾಗಿದೆ.
ಬಾಲ ಮಂಜುನಾಥ ಸ್ವಾಮೀಜಿ ತಮಗೆ ಮಠದಿಂದ ಖಾಸಗಿ / ಮನೆ ಊಟ ಹಾಗೂ ಹಾಸಿಗೆ ಪೂರೈಕೆಗೆ ಅನುಮತಿ ನೀಡುವಂತೆ ತುಮಕೂರು ಜೈಲು ಅಧೀಕ್ಷಕರಿಗೆ ನಿರ್ದೇಶಿಸಬೇಕು ಎಂದು ಕೋರಿ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ಈ ನಿರ್ದೇಶನ ನೀಡಿದೆ.
ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಅರ್ಜಿದಾರರು ತಮ್ಮ ರಿಸ್ಕ್ನಲ್ಲಿ ಮಠದಿಂದ ಖಾಸಗಿ / ಮನೆ ಊಟವನ್ನು ತರಿಸಿಕೊಳ್ಳಬಹುದು. ಅದನ್ನು ಜೈಲು ಅಧಿಕಾರಿಗಳು ಪರೀಕ್ಷೆ ಮಾಡಬೇಕು. ನಂತರವೇ ಅರ್ಜಿದಾರರು ಸೇವನೆಗೆ ಅವಕಾಶ ಕಲ್ಪಿಸಬೇಕು. ಇನ್ನೂ ಅರ್ಜಿದಾರರ ತಮ್ಮದೇ ಆದ ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ತುಮಕೂರು ಕಾರಾಗೃಹ ಅಧೀಕ್ಷಕರಿಗೆ ನ್ಯಾಯಪೀಠ ಸೂಚಿಸಿದೆ. ಜತೆಗೆ, ಅಗತ್ಯವಿದ್ದರೆ ಈ ಆದೇಶ ಮಾರ್ಪಾಡಿಗೆ ಜೈಲು ಅಧಿಕಾರಿಗಳು ನ್ಯಾಯಾಲಯವನ್ನು ಕೋರಬಹುದು ಎಂದು ಆದೇಶಿಸಿದೆ.
ಏನಿದು ಪ್ರಕರಣ?
ಬಾಲ ಮಂಜುನಾಥ ಸ್ವಾಮೀಜಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತೆಯೊಬ್ಬರು 2024ರ ಮಾರಚ್ 7 ರಂದು ಹುಲಿಯೂರುದುರ್ಗ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಸ್ವಾಮೀಜಿಯನ್ನು ಬಂಧಿಸಿದ್ದರು. ವಿಚಾರಣಾ ನ್ಯಾಯಾಲಯವು ಸ್ವಾಮೀಜಿಯನ್ನು ಮಾರ್ಚ್ 14ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಸದ್ಯ ತುಮಕೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಸ್ವಾಮೀಜಿ, ಜೈಲಿನಲ್ಲಿ ಪೂರೈಸುವ ಊಟ ತಮಗೆ ಸರಿಹೊಂದುತ್ತಿಲ್ಲ. ಇದರಿಂದ ಮಠದಿಂದ ಖಾಸಗಿ / ಮನೆ ಊಟ, ಹಾಸಿಗೆ ತರಿಸಿಕೊಳ್ಳಲು ತಮಗೆ ಅನುಮತಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರಿದ್ದರು. ಅದಕ್ಕೆ ಜೈಲಾಧಿಕಾರಿಗಳು ಸಮ್ಮಿತಿಸದಕ್ಕೆ ಸ್ವಾಮೀಜಿ ಹೈಕೋರ್ಟ್ ಮೊರೆ ಹೋಗಿದ್ದರು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications