ಬೆಂಗಳೂರಿನಲ್ಲಿ 4 ವರ್ಷದ ಕಂದನ ಮೇಲೆ ಲೈಂಗಿಕ ದೌರ್ಜನ್ಯ
Recommended Video

ಬೆಂಗಳೂರು, ಸೆಪ್ಟೆಂಬರ್ 13: ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ರಾಜಧಾನಿಯಲ್ಲಿ ಆತಂಕ ಸೃಷ್ಟಿಯಾಗಿದೆ.
ಶಾಲೆಯ ಸೆಕ್ಯುರಿಟಿ ಗಾರ್ಡ್ ಓಬಳೇಶ್(25) ಎಂಬುವವನೇ ಸೆ.12 ರಂದು ಈ ಕೃತ್ಯ ಎಸಗಿದ್ದಾನೆಂಬುದು ಬೆಳಕಿಗೆ ಬಂದಿದ್ದು, ಪೊಲೀಸರು ಆತನನನ್ನು ಬಂಧಿಸಿದ್ದಾರೆ.

ಶಾಲೆಯ ಶೌಚಾಲಯದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಮನೆಗೆ ತೆರಳಿದ ಬಾಲಕಿ ಹೊಟ್ಟೆ ನೋವೆಂದು ಕಿರುಚುತ್ತಿದ್ದಾಗ, ಆಕೆಯನ್ನು ಪಾಲಕರು ವೈದ್ಯರ ಬಳಿ ಕರೆದೊಯ್ದಿದ್ದಾರೆ. ಪರೀಕ್ಷಿಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವೈದ್ಯರು ದೃಢ ಪಡಿಸಿದ್ದಾರೆ. ಆಕ್ರೋಶಗೊಂಡ ಪಾಲಕರು ಪೊಲೀಸರಿಗೆ ದೂರು ನೀಡಿದಾಗ ಸತ್ಯ ಹೊರಬಂದಿದೆ.
ಬಾಲಕಿಯ ತಂದೆ ಬಿಹಾರಿ ಮೂಲದವರಾಗಿದ್ದು, ಶಾಲೆಯಲ್ಲಿ ಇಷ್ಟು ಅಭದ್ರತೆ ಇದ್ದರೆ ಮಕ್ಕಳನ್ನು ಓದುವುದಕ್ಕೆ ಕಳಿಸುವುದು ಹೇಗೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಆರೋಪಿ ಓಬಳೇಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಶಾಲೆಯ ಆವರಣಕ್ಕೆ ಜಮಾಯಿಸಿದ್ದ ಹಲವು ಪಾಲಕರು ಮಕ್ಕಳ ಭದ್ರತೆಯ ಬಗ್ಗೆ ಗಮನ ನೀಡದ ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಫೆಬ್ರವರಿಯಲ್ಲಿಯೂ ಬೆಂಗಳೂರಿನ ಮಾರತಹಳ್ಳಿಯಲ್ಲಿಯೂ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಶಾಲೆಯ ಸಿಬ್ಬಂದಿಯೇ ಈ ಕೆಲಸ ಮಾಡಿದ್ದೆಂದು ದೃಢವಾಗಿತ್ತು.
ಇತ್ತೀಚೆಗಷ್ಟೆ ಗುರುಗ್ರಾಮದಲ್ಲಿ ಏಳು ವರ್ಷದ ಮಗುವನ್ನು ಶೌಚಾಲಯದಲ್ಲಿ ಕೊಲೆ ಮಾಡಲಾಗಿತ್ತು. ಒಟ್ಟಿನಲ್ಲಿ ಮಕ್ಕಳ ಭದ್ರತೆ ಎಂಬುದು ಸರ್ಕಾರಕ್ಕೂ, ಶಾಲೆಗಳಿಗೂ ಒಂದು ಸವಾಲಿನ ವಿಷಯವಾಗಿಯೇ ಉಳಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications