ವೃತ್ತಿ ಶಿಕ್ಷಣ ಶುಲ್ಕ ಹೆಚ್ಚಳದ ವಿರುದ್ಧ ಪ್ರತಿಭಟನೆ
ಬೆಂಗಳೂರು, ಮೇ 28 : ವೃತ್ತಿ ಶಿಕ್ಷಣ ಶುಲ್ಕವನ್ನು ಶೇ.40 ರಷ್ಟು ಹೆಚ್ಚಳ ಮಾಡಿರುವ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಸ್ಎಫ್ಐ ಕಾರ್ಯಕರ್ತರು ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ ನಡೆಸಿ, ಶುಲ್ಕ ಕಡಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ವೃತ್ತಿ ಶಿಕ್ಷಣವನ್ನು ಮಾರಾಟದ ಸರಕಾಗಿ ಮಾಡಿದೆ. ಇಂಜಿನಿಯರಿಂಗ್ ಶುಲ್ಕವನ್ನು ಶೇ.40 ರಷ್ಟು ಹೆಚ್ಚಿಸಿದೆ ಮತ್ತು ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಶುಲ್ಕವನ್ನು ಶೇ.25 ರಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ. ಇದರಿಂದ ಹಣ ಉಳ್ಳವರಿಗೆ ಮಾತ್ರ ಉನ್ನತ ಶಿಕ್ಷಣ ಲಭ್ಯವಾಗುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು. [ಇಂಜಿನಿಯರಿಂಗ್, ವೈದ್ಯ ಶಿಕ್ಷಣ ಶುಲ್ಕ ದುಬಾರಿ]
ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿತ ಕಾಯಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, 33 ಸಾವಿರದವರೆಗೆ ಇದ್ದ ಸರ್ಕಾರಿ ಕೋಟಾ ಸೀಟು 45 ಸಾವಿರ ಆಗಲಿದೆ. 37 ಸಾವಿರ ಇದ್ದ ಬೋಧನಾ ಶುಲ್ಕ 50 ಸಾವಿರವಾಗಲಿದೆ. ಈ ಶುಲ್ಕವನ್ನು ಎಲ್ಲರೂ ಕಟ್ಟಲು ಸಾಧ್ಯವಿಲ್ಲ. ಆದ್ದರಿಂದ ಶುಲ್ಕ ಕಡಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಭಾರತ ವಿದ್ಯಾರ್ಥಿ ಒಕ್ಕೂಟದ ಪ್ರತಿಭಟನೆ
ವೃತ್ತಿ ಶಿಕ್ಷಣ ಶುಲ್ಕವನ್ನು ಶೇ.40 ರಷ್ಟು ಹೆಚ್ಚಳ ಮಾಡಿರುವ ಸರ್ಕಾರದ ಕ್ರಮವನ್ನು ಎಸ್ಎಫ್ಐ ಕಾರ್ಯಕರ್ತರು ಖಂಡಿಸಿದ್ದಾರೆ. ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಪ್ರತಿಭಟನೆ ನಡೆಸಿ, ಶುಲ್ಕ ಕಡಿತಗೊಳಿಸಬೇಕು ಎಂದು ನೂರಾರು ಕಾರ್ಯಕರ್ತರು ಒತ್ತಾಯಿಸಿದರು.

ಬಡವರು ಶುಲ್ಕ ಕಟ್ಟಲು ಸಾಧ್ಯವಿಲ್ಲ
ಶುಲ್ಕ ಹೆಚ್ಚಳವಾದ್ದರಿಂದ ಬಡವರು ಉನ್ನತ ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆ ಇದೆ. ಸರ್ಕಾರ ಶುಲ್ಕ ಹೆಚ್ಚಳ ಮಾಡುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿತ ಕಾಯಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಶುಲ್ಕ ಇಳಿಕೆ ಭರವಸೆ
ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಸುಷಮಾ ಗೋಡಬೋಲೆ ಅವರು ಮನವಿ ಸ್ವೀಕರಿಸಿ ಶುಲ್ಕ ಇಳಿಕೆ ಮಾಡುವ ಭರವಸೆ ನೀಡಿದರು. ಶುಲ್ಕ ಇಳಿಕೆ ಮಾಡದಿದ್ದರೆ ರಾಜ್ಯವ್ಯಾಪಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನಾಕಾರರ ಬೇಡಿಕೆಗಳು
* ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆ 2006ನ್ನು ತಿರಸ್ಕರಿಸಬೇಕು
* ಏರಿಕೆ ಮಾಡಿರುವ ಶುಲ್ಕಗಳನ್ನು ತಕ್ಷಣ ಎಲ್ಲಾ ವಿದ್ಯಾರ್ಥಿಗಳ ಕೈಗೆಟುಕುವಂತೆ ನಿಗದಿಗೊಳಿಸಬೇಕು.
* ಕಾಮೆಡ್-ಕೆ ಪರಿಕ್ಷೆಗಳನ್ನು ರದ್ದು ಪಡಿಸಬೇಕು ಮಂತಾದವು

ಶುಲ್ಕ ಎಷ್ಟು ಹೆಚ್ಚಳವಾಗಿದೆ?
ಹಳೆ ಶುಲ್ಕ ಎಷ್ಟಿತ್ತು? ಇಂಜಿನಿಯರಿಂಗ್ - 38,090 ವೈದ್ಯಕೀಯ - 46,000 ದಂತ ವೈದ್ಯ - 28,590.
ಪರಿಷ್ಕೃತ ಶುಲ್ಕಗಳು ಇಂಜಿನಿಯರಿಂಗ್ - 45,000 ವೈದ್ಯಕೀಯ - 55,000 ದಂತ ವೈದ್ಯ - 38,000
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications