ಹುತಾತ್ಮರ ಸ್ಮಾರಕ ಸಂರಕ್ಷಣೆಗಾಗಿ ಎಸ್ಎಫ್ ಐನಿಂದ ಪ್ರತಿಭಟನೆ
ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಿ, ಅಭಿವೃದ್ಧಿಪಡಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ) ಹಾಗೂ ಇನ್ನಿತರ ಸಂಘಟನೆಗಳು ಮಾರ್ಚ್ 23ರಂದು ಹಮ್ಮಿಕೊಂಡಿವೆ.
ಬೆಂಗಳೂರು, ಮಾರ್ಚ್ 22: ಹುತಾತ್ಮ ಭಗತ್ಸಿಂಗ್ ಮತ್ತು ಆತನ ಸಂಗಾತಿಗಳ ಹುತಾತ್ಮ ದಿನದ ಅಂಗವಾಗಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಿ, ಅಭಿವೃದ್ಧಿಪಡಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ) ಹಾಗೂ ಇನ್ನಿತರ ಸಂಘಟನೆಗಳು ಮಾರ್ಚ್ 23ರಂದು ಹಮ್ಮಿಕೊಂಡಿವೆ.
ಭಗತ್ಸಿಂಗ್, ರಾಜ್ಗುರು ಹಾಗೂ ಸುಖ್ದೇವ್ರವರನ್ನು ಬ್ರಿಟೀಷರು ಗಲ್ಲಿಗೇರಿಸಿದ ದಿನ ಮಾರ್ಚ್ 23, ಈ ದಿನವನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ), ಭಾರತ ಪ್ರಜಾಸತ್ತಾತ್ಮ್ಮಕ ಯುವಜನ ಫೆಡರೇಷನ್(ಡಿ.ವೈ.ಎಫ್.ಐ) ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ(ಜೆ.ಎಂ.ಎಸ್) ಸಂಘಟನೆಗಳು ಜಂಟಿಯಾಗಿ ದೇಶಾದ್ಯಂತ ಹುತಾತ್ಮರ ಸಂಸ್ಮರಣಾ ಕಾರ್ಯಕ್ರಮವನ್ನು ಆಚರಿಸುತ್ತಿವೆ.

ಇದರ ಭಾಗವಾಗಿ ಬೆಂಗಳೂರಿನಲ್ಲಿ ಈ ಹುತಾತ್ಮರ ಸಂಸ್ಮರಣೆಯ ಅಂಗವಾಗಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮರ ಸ್ಮಾರಕವನ್ನು ಸಂರಕ್ಷಿಸಿ ಆಭಿವೃದ್ದಿಪಡಿಸಬೇಕೆಂದು ಆಗ್ರಹಿಸಿ ಅರ್ಥಪೂರ್ಣವಾಗಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಆಗಿರುವ ಡಾ.ಎಚ್.ಎಸ್ ದೊರೆಸ್ವಾಮಿರವರು ಉದ್ಘಾಟನೆ ಮಾಡಿ ಚಾಲನೆ ನೀಡುವರು. ವಿಚಾರವಾದಿಗಳಾಗಿರುವ ಕೆ.ಮರುಳಸಿದ್ದಪ್ಪರವರು ಸೇರಿದಂತೆ ಹಲವು ಸಾಹಿತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು. ಕಾರ್ಯಕ್ರಮದ ವಿವರಗಳು
ದಿನಾಂಕ : 23/03/2017, ಗುರುವಾರ
ಸಮಯ : ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ರವರೆಗೆ
ಸ್ಥಳ : ಮೈಸೂರು ಬ್ಯಾಂಕ್ ವೃತ್ತದ ಬಳಿಯಿರುವ ಹುತಾತ್ಮರ ಸ್ಮಾರಕದ ಹತ್ತಿರ
ಸಂಪರ್ಕಕ್ಕಾಗಿ : 8880031843, 7022700332
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications