Get Updates
Get notified of breaking news, exclusive insights, and must-see stories!

ಹುತಾತ್ಮರ ಸ್ಮಾರಕ ಸಂರಕ್ಷಣೆಗಾಗಿ ಎಸ್ಎಫ್ ಐನಿಂದ ಪ್ರತಿಭಟನೆ

ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಿ, ಅಭಿವೃದ್ಧಿಪಡಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ) ಹಾಗೂ ಇನ್ನಿತರ ಸಂಘಟನೆಗಳು ಮಾರ್ಚ್ 23ರಂದು ಹಮ್ಮಿಕೊಂಡಿವೆ.

ಬೆಂಗಳೂರು, ಮಾರ್ಚ್ 22: ಹುತಾತ್ಮ ಭಗತ್‌ಸಿಂಗ್ ಮತ್ತು ಆತನ ಸಂಗಾತಿಗಳ ಹುತಾತ್ಮ ದಿನದ ಅಂಗವಾಗಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಿ, ಅಭಿವೃದ್ಧಿಪಡಿಸಲು ಆಗ್ರಹಿಸಿ ಪ್ರತಿಭಟನಾ ಧರಣಿಯನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ) ಹಾಗೂ ಇನ್ನಿತರ ಸಂಘಟನೆಗಳು ಮಾರ್ಚ್ 23ರಂದು ಹಮ್ಮಿಕೊಂಡಿವೆ.

ಭಗತ್‌ಸಿಂಗ್, ರಾಜ್‌ಗುರು ಹಾಗೂ ಸುಖ್‌ದೇವ್‌ರವರನ್ನು ಬ್ರಿಟೀಷರು ಗಲ್ಲಿಗೇರಿಸಿದ ದಿನ ಮಾರ್ಚ್ 23, ಈ ದಿನವನ್ನು ಭಾರತ ವಿದ್ಯಾರ್ಥಿ ಫೆಢರೇಷನ್ (ಎಸ್.ಎಫ್.ಐ), ಭಾರತ ಪ್ರಜಾಸತ್ತಾತ್ಮ್ಮಕ ಯುವಜನ ಫೆಡರೇಷನ್(ಡಿ.ವೈ.ಎಫ್.ಐ) ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ(ಜೆ.ಎಂ.ಎಸ್) ಸಂಘಟನೆಗಳು ಜಂಟಿಯಾಗಿ ದೇಶಾದ್ಯಂತ ಹುತಾತ್ಮರ ಸಂಸ್ಮರಣಾ ಕಾರ್ಯಕ್ರಮವನ್ನು ಆಚರಿಸುತ್ತಿವೆ.

SFI to pay homage to Martyrs Bhagat Singh, Sukhdev and Rajguru

ಇದರ ಭಾಗವಾಗಿ ಬೆಂಗಳೂರಿನಲ್ಲಿ ಈ ಹುತಾತ್ಮರ ಸಂಸ್ಮರಣೆಯ ಅಂಗವಾಗಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಹುತಾತ್ಮರ ಸ್ಮಾರಕವನ್ನು ಸಂರಕ್ಷಿಸಿ ಆಭಿವೃದ್ದಿಪಡಿಸಬೇಕೆಂದು ಆಗ್ರಹಿಸಿ ಅರ್ಥಪೂರ್ಣವಾಗಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಆಗಿರುವ ಡಾ.ಎಚ್.ಎಸ್ ದೊರೆಸ್ವಾಮಿರವರು ಉದ್ಘಾಟನೆ ಮಾಡಿ ಚಾಲನೆ ನೀಡುವರು. ವಿಚಾರವಾದಿಗಳಾಗಿರುವ ಕೆ.ಮರುಳಸಿದ್ದಪ್ಪರವರು ಸೇರಿದಂತೆ ಹಲವು ಸಾಹಿತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು. ಕಾರ್ಯಕ್ರಮದ ವಿವರಗಳು

ದಿನಾಂಕ : 23/03/2017, ಗುರುವಾರ
ಸಮಯ : ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ರವರೆಗೆ
ಸ್ಥಳ : ಮೈಸೂರು ಬ್ಯಾಂಕ್ ವೃತ್ತದ ಬಳಿಯಿರುವ ಹುತಾತ್ಮರ ಸ್ಮಾರಕದ ಹತ್ತಿರ
ಸಂಪರ್ಕಕ್ಕಾಗಿ : 8880031843, 7022700332

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+