ಬೆಳಗಾವಿಯಲ್ಲಿ ಆರಂಭವಾಗಲಿದೆಯೇ ಐಫೋನ್ ಬಿಡಿಭಾಗಗಳ ತಯಾರಿಕಾ ಘಟಕ?: 250 ಕೋಟಿ ರೂ.ಹೂಡಿಕೆಗೆ ಪ್ರಸ್ತಾವ
ಬೆಳಗಾವಿ, ಜುಲೈ. 03: ಆಪಲ್ ಇನ್ಕಾರ್ಪೊರೇಟೆಡ್ನ ಐಫೋನ್ಗಳ ಬಿಡಿಭಾಗಗಳನ್ನು ತಯಾರಿಸಲು ಕಾರ್ಖಾನೆಯನ್ನು ಸ್ಥಾಪಿಸಲು ಬೆಳಗಾವಿಯಲ್ಲಿ ಸುಮಾರು 30 ಎಕರೆ ಭೂಮಿಯನ್ನು ನೀಡುವಂತೆ ಮಾಡುವಂತೆ ಬೆಂಗಳೂರು ಮೂಲದ ಎಲೆಕ್ಟ್ರಾನಿಕ್ಸ್ ಘಟಕ ತಯಾರಿಕಾ ಕಂಪನಿಯಾದ ಎಸ್ಎಫ್ಎಸ್ ಇಂಡಸ್ಟ್ರೀಸ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ್ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಬಿಡುಗಡೆಯಾಗಿದ್ದು, ಎಸ್ಎಫ್ಎಸ್ ಮೀಸಲಿಟ್ಟ ಘಟಕದಲ್ಲಿ 250 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಇದು ಎಸ್ಟಿಇಎಂ (STEM) ಪದವೀಧರರಿಗೆ 500 ನೇರ ಉದ್ಯೋಗಗಳನ್ನು ಮತ್ತು ಇನ್ನೂ ಹಲವಾರು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.

"ಆಪಲ್ ಐಫೋನ್ ಉತ್ಪಾದಿಸುವ ಫಾಕ್ಸ್ಕಾನ್ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿಕೊಡುವ ಎಸ್ಎಫ್ಎಸ್ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದೆ. ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್ ಶಾ ನೇತೃತ್ವದ ನಿಯೋಗ ಬೆಳಗಾವಿಯಲ್ಲಿ ಘಟಕ ಸ್ಥಾಪಿಸಲು ಭೂಮಿ ಕೋರಿದ್ದು ಈ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದೆ" ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಎಸ್ಎಫ್ಎಸ್ ಬೆಳಗಾವಿಯಲ್ಲಿ ಏರೋಸ್ಪೇಸ್ ಬಿಡಿಭಾಗಗಳನ್ನು ತಯಾರಿಸುವ ಘಟಕದಲ್ಲಿ ಹೂಡಿಕೆ ಮಾಡಿದೆ. ಇದು ಆಪಲ್ ಮತ್ತು ಇತರ ಕಂಪನಿಗಳಿಗೆ ಮೊಬೈಲ್ ಬಿಡಿಭಾಗಗಳ ತಯಾರಿಕೆಯನ್ನು ಮಾಡುತ್ತದೆ. ಕಂಪನಿಯ ಸಿಎಫ್ಒ ಫರಾಸ್ ಶಾ ನೇತೃತ್ವದ ಕಂಪನಿ ಅಧಿಕಾರಿಗಳ ತಂಡವು ಇತ್ತೀಚೆಗೆ ಬೆಂಗಳೂರಿನಲ್ಲಿ ಸಚಿವ ಎಂಬಿ ಪಾಟೀಲ್ ಅವರನ್ನು ಭೇಟಿ ಮಾಡಿ ಯೋಜನೆಯ ಬಗ್ಗೆ ಮಾಹಿತಿ ನೀಡಿದೆ. ಎಸ್ ಎಫ್ ಎಸ್ ನಿರ್ದೇಶಕ ಪ್ರಶಾಂತ್ ಕೋರೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತ ಗುಂಜನ್ ಕೃಷ್ಣ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications