ಶಾದಿ ಭಾಗ್ಯಕ್ಕೆ ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಶ್ಲಾಘನೆ
ಬೆಂಗಳೂರು, ಡಿ. 15: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಾದಿ ಭಾಗ್ಯ ಯೋಜನೆಯನ್ನು ಸ್ಥಳೀಯ ಬಿಜೆಪಿ ಮುಖಂಡರು ಟೀಕಿಸಿದ್ದರು. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಪ್ರೋತ್ಸಾಹಿಸಿದೆ. ಇದರಿಂದ ರಾಜ್ಯ ಬಿಜೆಪಿಗೆ ಮುಖಭಂಗವಾದಂತಾಗಿದೆ.
ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವೆ ನಜ್ಮಾ ಹೆಪ್ತುಲ್ಲಾ ಶಾದಿ ಭಾಗ್ಯ ಯೋಜನೆಯನ್ನು ಶ್ಲಾಘಿಸಿದ್ದಾರೆ. ಕರ್ನಾಟಕ ಜಾರಿಗೆ ತಂದಿರುವ ಈ ಯೋಜನೆ ಎಲ್ಲ ರಾಜ್ಯಗಳಿಗೆ ಮಾದರಿ ಎಂದು ಹೇಳುವ ಮೂಲಕ ಬಹಿರಂಗ ಬೆಂಬಲ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ತಿಳಿಸಿರುವ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಕಮರುಲ್ಲಾ ಇಸ್ಲಾಂ, "ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಕರೆ ಮಾಡಿ ಶಾದಿ ಭಾಗ್ಯ ಯೋಜನೆಯನ್ನು ಶ್ಲಾಘಿಸಿದ್ದಾರೆ" ಎಂದು ತಿಳಿಸಿದ್ದಾರೆ. [ಹಿಂದೂಗಳಿಗೆ ಶಾದಿ ಭಾಗ್ಯ ಇಲ್ಲ]
ಈ ನಿಟ್ಟಿನಲ್ಲಿ ಈಗಾಗಲೇ ಆಂದ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮುಂದಡಿ ಇಟ್ಟಿದ್ದಾರೆ. ಶಾದಿ ಭಾಗ್ಯ ಯೋಜನೆಯ ಅಧ್ಯಯನಕ್ಕಾಗಿ ಕರ್ನಾಟಕಕ್ಕೆ ನಿಯೋಗ ಕಳುಹಿಸಲು ತೀರ್ಮಾನಿಸಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಶಾದಿ ಭಾಗ್ಯ ಯೋಜನೆ ಜಾರಿಗೆ ತಂದಿದೆ. ಮುಸ್ಲಿಂ ಸಮುದಾಯದ ವಧುಗಳಿಗೆ ಮಾತ್ರ ನೀಡಲಾಗುತ್ತಿದ್ದ ಸಹಾಯಧನವನ್ನು ಬಿಜೆಪಿ ಒತ್ತಡದ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನರು ಮತ್ತು ಬೌದ್ಧರಿಗೂ ಅನ್ವಯಿಸಲಾಗುತ್ತಿದೆ.[ಎಲ್ಲ ಬಡವರಿಗೂ ಶಾದಿ ಭಾಗ್ಯ ಚಿಂತನೆ]
ಏನಿದು ಶಾದಿಭಾಗ್ಯ: ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಧುಗಳಿಗೆ 50 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗೆ ವಿಧಿಸಿರುವ ಷರತ್ತುಗಳೆಂದರೆ ವಧುವಿಗೆ 18 ವರ್ಷಕ್ಕಿಂತ ಹೆಚ್ಚು ವಯಸ್ಸಾಗಿರಬೇಕು. ವಧುವಿನ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷಕ್ಕಿಂತ ಕಡಿಮೆ ಇರಬೇಕು. [ಶಾದಿ ಭಾಗ್ಯ: ಬಿಜೆಪಿ ಕಿಡಿ]
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications