ಎಸ್.ಬಂಗಾರಪ್ಪ ಪತ್ನಿ ಶಕುಂತಲಾ ಬಂಗಾರಪ್ಪ ವಿಧಿವಶ
ಬೆಂಗಳೂರು, ಏ. 22 : ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದಿ.ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ವಿಧಿವಶರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.
ಹಲವು ದಿನಗಳಿಂದ ಶಕುಂತಲಾ ಬಂಗಾರಪ್ಪ (70) ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮಂಗಳವಾರ ಅವರನ್ನು ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ 3.40ರ ಸುಮಾರಿಗೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪುತ್ರರಾದ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ, ಪುತ್ರಿ ಗೀತಾ ಶಿವರಾಜ್ ಕುಮಾರ್ ಮುಂತಾದ ಕುಟುಂಬ ಸದಸ್ಯರನ್ನು ಶಕುಂತಲಾ ಬಂಗಾರಪ್ಪ ಅಗಲಿದ್ದಾರೆ. ಶಿವಮೊಗ್ಗ ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಶಕುಂತಲಾ ಬಂಗಾರಪ್ಪ ಏ.11ರಂದು ಪ್ರಚಾರ ನಡೆಸಿದ್ದರು. [ಗೀತಾ ಶಿವರಾಜ್ ಕುಮಾರ್ ಸಂದರ್ಶನ ಓದಿ]
ಮಲ್ಯ ಆಸ್ಪತ್ರೆಗೆ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ಗುರುದತ್ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಆಸ್ಪತ್ರೆಗೆ ಆಗಮಿಸಿದ್ದಾರೆ.
ಮಂಗಳವಾರ ಸಂಜೆ ಸದಾಶಿವನಗರದಲ್ಲಿರುವ ಎಸ್.ಬಂಗಾರಪ್ಪ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಶಿವಮೊಗ್ಗ ಜಿಲ್ಲೆಯ ಸೊರಬದ ಬಂಗಾರಧಾಮದಲ್ಲಿ ಶಕುಂತಲಾ ಬಂಗಾರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ಎಸ್.ಬಂಗಾರಪ್ಪ ಅವರ ಅಂತ್ಯಕ್ರಿಯೆಯು ಇಲ್ಲಿಯೇ ನಡೆದಿತ್ತು.
ಅಂತಿಮ ದರ್ಶನ ಪಡೆದ ಕುಮಾರ್ ಬಂಗಾರಪ್ಪ : ಶಕುಂತಲಾ ಬಂಗಾರಪ್ಪ ಅವರ ಪುತ್ರ ಕುಮಾರ್ ಬಂಗಾರಪ್ಪ ಸದಾಶಿವನಗರದಲ್ಲಿನ ನಿವಾಸಕ್ಕೆ ಆಗಮಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು. ಶಕುಂತಲಾ ಬಂಗಾರಪ್ಪ ಅಳಿಯ ಶಿವರಾಜ್ ಕುಮಾರ್, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
ಚುನವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದರು : ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಶಕುಂತಲಾ ಬಂಗಾರಪ್ಪ ಅವರನ್ನು ನಿಲ್ಲಿಸಲು ಪಕ್ಷ ನಿರ್ಧರಿಸಿತ್ತು. ಈ ಕುರಿತು ಅವರೊಂದಿಗೆ ಮಾತುಕತೆಯನ್ನು ನಡೆಸಿತ್ತು. ಆದರೆ, ಅನಾರೋಗ್ಯದ ಕಾರಣ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶಕುಂತಲಾ ಬಂಗಾರಪ್ಪ ಹೇಳಿದ್ದರು.
ಬಂಗಾರಪ್ಪ ಕುಟುಂಟ ಸದಸ್ಯರಿಗೆ ಲೋಕಸಭೆ ಚುನಾವಣೆ ಟಿಕೆಟ್ ಎಂದು ಘೋಷಿಸಿದ್ದ ಜೆಡಿಎಸ್ ಪಕ್ಷ ಬಂಗಾರಪ್ಪ ಪುತ್ರ ಮತ್ತು ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮವಾಗಿ ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಟಿಕೆಟ್ ನೀಡಿ, ಚುನಾವಣೆ ಅಖಾಡಕ್ಕೆ ಇಳಿಸಿತ್ತು. ಏ.11ರಂದು ಗೀತಾ ಪರವಾಗಿ ಸೊರಬದಲ್ಲಿ ಪ್ರಚಾರ ನಡೆಸಿದ್ದ ಶಕುಂತಲಾ ಬಂಗಾರಪ್ಪ "ನನ್ನ ಮಗಳನ್ನು ಗೆಲ್ಲಿಸಿ" ಎಂದು ಜನರಿಗೆ ಮನವಿ ಮಾಡಿದ್ದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications