ಮಾಟ, ಮಂತ್ರದ ಆಕರ್ಷಣೆ; ಬೆಂಗಳೂರಿನ ಯುವತಿ 2 ತಿಂಗಳಿಂದ ನಾಪತ್ತೆ!
ಬೆಂಗಳೂರು, ಡಿಸೆಂಬರ್ 30; ಬೆಂಗಳೂರು ಮೂಲದ 17 ವರ್ಷದ ಯುವತಿಯೊಬ್ಬಳು ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ. ಯುವತಿ ಮಾಟ ಮಂತ್ರದ ಆಕರ್ಷಣೆಗೆ ಒಳಗಾಗಿದ್ದಾಳೆ ಎಂದು ಕುಟುಂಬ ಮೂಲದವರು ಶಂಕಿಸಿದ್ದಾರೆ.
ಅನುಷ್ಕಾ (17) ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ. ಸಾಮಾಜಿಕ ಜಾಲತಾಣದ ಮೂಲಕ ಪುತ್ರಿಗಾಗಿ ಅಭಿಷೇಕ್ ಮತ್ತು ಅರ್ಚನಾ ದಂಪತಿ ಹುಡುಕಾಟ ನಡೆಸುತ್ತಿದ್ದಾರೆ.
Shamanism (ಆತ್ಮಗಳ ಜೊತೆ ಸಂಭಾಷಣೆ) ಮಾದರಿಯನ್ನು ಕಲಿಯಲು ಅನುಷ್ಕಾ ಬಯಸಿದ್ದಳು. ಆದರೆ ಪೋಷಕರು ಮನೆಯಲ್ಲಿಯೇ ಕಲಿಯುವಂತೆ ಹೇಳಿದ್ದರು. ಆದರೆ ಎರಡು ತಿಂಗಳಿನಿಂದ ಆಕೆ ನಾಪತ್ತೆಯಾಗಿದ್ದು ಇದರ ಹಿಂದೆ Shamanism ಆಕರ್ಷಣೆ ಇರಬಹುದು ಎಂದು ಶಂಕಿಸಲಾಗಿದೆ.

ಅನುಷ್ಕಾ ತಂದೆ ಅಭಿಷೇಕ್ ಈ ಕುರಿತು ಮಾತನಾಡಿದ್ದಾರೆ, "ಯಾರೋ ಆಕೆಯ ಮೇಲೆ ಪ್ರಭಾವ ಬೀರಿದ್ದಾರೆ. ಆಕೆ ಮನೆ ಬಿಟ್ಟು ಬೇರೆಲ್ಲೂ ಒಬ್ಬಳೇ ಹೋದವಳಲ್ಲ. ಸಾಮಾಜಿಕ ಜಾಲತಾಣದ ಮೂಲಕ ಆಕೆಯನ್ನು ಹುಡುಕಲು ಪ್ರಯತ್ನ ನಡೆಸುತ್ತಿದ್ದೇನೆ" ಎಂದು ಹೇಳಿದ್ದಾರೆ.
ಅಕ್ಟೋಬರ್ 31 ರಂದು ಮನೆಯಿಂದ ಎರಡು ಜೊತೆ ಬಟ್ಟೆ ಮತ್ತು 2,500 ರೂ.ಗಳ ಜೊತೆ ಅನುಷ್ಕಾ ಹೊರಟಿದ್ದಳು. ಎರಡು ತಿಂಗಳು ಕಳೆದರೂ ಆಕೆ ಪತ್ತೆಯಾಗಿಲ್ಲ. ಆನ್ಲೈನ್ ಮೂಲಕ ಓದುವಾಗ ಆಕೆ Shamanism ನತ್ತ ಆಕರ್ಷಿತಳಾಗಿದ್ದಳು.
Karnataka: Family members of a minor girl, missing for the last 2 months from Bengaluru, suspect a 'shamanism' connection to her disappearance
— ANI (@ANI) December 30, 2021
"She told us that she wanted to do shamanism type of meditation. We told her to learn it at home only," says her mother Archana (1/2) pic.twitter.com/3su6RpuGDP
ಸೆಪ್ಟೆಂಬರ್ನಲ್ಲಿಯೇ ಅನುಷ್ಕಾ ವರ್ತನೆಯಲ್ಲಿ ಬದಲಾವಣೆಗಳಾಗಿದ್ದವು. ಯಾರೊಂದಿಗೂ ಬೆರೆಯಲು ಇಷ್ಟಪಡದಿದ್ದ ಆಕೆ ಸದಾ ಏಕಾಂಗಿಯಾಗಿ ಇರುತ್ತಿದ್ದಳು. ಇದನ್ನು ಗಮನಿಸಿದ್ದ ತಂದೆ-ತಾಯಿ ಕೌನ್ಸಿಲಿಂಗ್ ಸಹ ಮಾಡಿಸಿದ್ದರು.
ಆನ್ಲೈನ್ನಲ್ಲಿ ಮಾಟ ಮಂತ್ರದ ಬಗ್ಗೆ ಹೆಚ್ಚಿನ ವಿಡಿಯೋ ನೋಡುತ್ತಿದ್ದಳು. ಇದರ ಕುರಿತು ಹಲವಾರು ವಿಚಾರಗಳನ್ನು ಓದುತ್ತಿದ್ದಳು. ಅಕ್ಟೋಬರ್ 31ರಂದು ಆಕೆ ಮನೆ ಬಿಟ್ಟು ಹೋಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿದೆ.
ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಅನುಷ್ಕಾ ಪತ್ತೆಗಾಗಿ ಹುಡುಕಾಟವನ್ನು ನಡೆಸುತ್ತಿದ್ದಾರೆ.
ಅನುಷ್ಕಾ ಪತ್ತೆಗೆ ಜನರು ಸಹ ಸಹಕಾರ ನೀಡಬೇಕು ಎಂದು ಪೋಷಕರು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications