ಶಮಿವಿಟ್ನೆಸ್ ಸಂಪರ್ಕ ಹೊಂದಿದ ಎಲ್ಲರ ವಿಚಾರಣೆ
ಬೆಂಗಳೂರು, ಡಿ. 18: ನಗರದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಐಎಸ್ಐಎಸ್ ಪರ ಉಗ್ರ ಮೆಹದಿ ಮಸ್ರೂರ್ ಬಿಸ್ವಾಸ್ ಪ್ರಕರಣದಲ್ಲಿ ಅತ್ಯಂತ ಆಳದ ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.
ಮೆಹದಿ ಈವರೆಗೆ ಮಾಡಿರುವ ಎಲ್ಲ 1.30 ಲಕ್ಷ ಟ್ವೀಟ್ಗಳ ಪರಿಶೀಲನೆಗೆ ಪೊಲೀಸರು ನಿರ್ಧರಿಸಿದ್ದಾರೆ. ಅಲ್ಲದೆ, ಆತನೊಂದಿಗೆ ಸಂವಹನ ನಡೆಸಿದ ಪ್ರತಿ ಇ ಮೇಲ್ ಹಾಗೂ ಟ್ವಿಟ್ಟರ್ ಖಾತೆಯನ್ನು ತನಿಖೆಗೊಳಪಡಿಸಲು ಪೊಲೀಸರು ಉದ್ಯುಕ್ತರಾಗಿದ್ದಾರೆಂದು ಓರ್ವ ಅಧಿಕಾರಿ ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ. [ಇವರೇ ಮುಗ್ಧ ಮಕ್ಕಳನ್ನು ಕೊಂದ ರಕ್ಕಸರು]
ಮೆಹದಿ ಬಿಸ್ವಾಸ್ ಭಾರತದಲ್ಲಿ ಯಾರೊಂದಿಗೂ ಸಂಪರ್ಕ ಹೊಂದಿರಲಿಲ್ಲ ಎನ್ನಲಾಗಿದೆ. ಆದರೂ, ಮೆಹದಿಯೊಂದಿಗೆ ಯಾವುದೇ ರೀತಿಯಲ್ಲಿ ಒಡನಾಟ ಹೊಂದಿರುವ ಪ್ರತಿಯೊಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಮೈಸೂರಿನಲ್ಲಿ ಇಬ್ಬರು ಯುವಕರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಎಟಿಎಸ್ ಮೂವರನ್ನು ವಿಚಾರಣೆಗೊಳಪಡಿಸಿದೆ. ಇವರಲ್ಲಿ ಇಬ್ಬರು ಕರ್ನಾಟಕದ ಧಾರವಾಡ ಮೂಲದವರು. [ಭಾರತದಲ್ಲಿ ರಕ್ತದ ಹೊಳೆ ಹರಿಸುತ್ತೇನೆ]
ವಿಚಾರಣೆಗೊಳಪಟ್ಟ ಇವರೆಲ್ಲ ಮೆಹದಿ ಬಿಸ್ವಾಸ್ ಜೊತೆ ಒಂದಲ್ಲ ಒಂದು ರೀತಿಯಲ್ಲಿ ಟ್ವಿಟ್ಟರ್ನಲ್ಲಿ ಸಂವಾದ ನಡೆಸಿದವರು. ಆದರೆ, ಐಎಸ್ಐಎಸ್ಗೆ ನೇಮಕಾತಿ ನಡೆದ ಕುರಿತು ಯಾವುದೇ ಸಾಕ್ಷಿ ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಂಡುತನ ಬಿಡದ ಮೆಹದಿ : ಈ ಮಧ್ಯೆ ತಾನಿನ್ನೂ ಯಾವುದೇ ತಪ್ಪು ಮಾಡಿಲ್ಲ ಎಂದೇ ಮೆಹದಿ ಬಿಸ್ವಾಸ್ ವಾದಿಸುತ್ತಿದ್ದಾನೆ. ವೆಬ್ನಲ್ಲಿ ಸಿಕ್ಕ ಟ್ವೀಟ್ಗಳನ್ನು ತಾನು ಕೇವಲ ರಿಟ್ವೀಟ್ ಮಾಡಿದ್ದೇನೆಂದು ಸಮರ್ಥಿಸಿಕೊಳ್ಳುತ್ತಿದ್ದಾನೆ. [ಜಾಣ ಮೆಹದಿ ಗುಪ್ತದಳದ ಕಣ್ಣು ತಪ್ಪಿಸಿದ್ದು ಹೇಗೆ]
"ನಿಮಗೆ ಏನು ಬೇಕೋ ಕೇಳಿ ಮತ್ತು ನಿಮಗೆ ಬೇಕಾದ್ದು ಪರೀಕ್ಷಿಸಿಕೊಳ್ಳಿ" ಎಂದು ಪೊಲೀಸರಿಗೆ ಬಿಸ್ವಾಸ್ ಹೇಳುತ್ತಿದ್ದಾನೆ. [ಮೆಹದಿ ವಿರುದ್ಧ ಕಠಿಣ ಪ್ರಕರಣ]
"ನಾನು ತಪ್ಪು ಮಾಡಿದ್ದರೆ ಓಡಿಹೋಗಬಹುದಿತ್ತು. ವಿಷಯ ಬಹಿರಂಗವಾದ ಮೇಲೆಯೂ ನಾನು ಮನೆಯಲ್ಲಿಯೇ ಇದ್ದೆ. ಓಡಿ ತಪ್ಪಿಸಿಕೊಳ್ಳುವ ಯಾವ ಯೋಚನೆಯನ್ನೂ ಹೊಂದಿರಲಿಲ್ಲ" ಎಂದು ಬಿಸ್ವಾಸ್ ವಿಶ್ವಾಸದಿಂದ ಪೊಲೀಸರಿಗೆ ಹೇಳುತ್ತಿದ್ದಾನೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications