ಇನ್ನೂ ಪತ್ತೆಯಾಗಿಲ್ಲ ರಾಜಾಕಾಲುವೆಯಲ್ಲಿ ಕೊಚ್ಚಿಹೋದ ಶಾಂತಕುಮಾರ್
ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ತಿಗಳರಪಾಳ್ಯ ನಿವಾಸಿ ಶಾಂತಕುಮಾರ್, ಶನಿವಾರ ಸಂಜೆ ಚರಂಡಿಯೊಂದರ ದುರಸ್ಥಿ ಕಾರ್ಯದ ಮೇಲ್ವಿಚಾರಣೆ ಮಾಡುತ್ತಿದ್ದಾಗ ಅಚಾನಕ್ಕಾಗಿ ಚರಂಡಿಯಲ್ಲಿ ಬಿದ್ದಿದ್ದರು. ಆದರೆ ಅವರ ಪತ್ತೆ ಮಾತ್ರ ಇನ್ನೂ ಸಾಧ್ಯವಾಗಿಲ್ಲ
ಬೆಂಗಳೂರು, ಮೇ 22: ರಾಜಧಾನಿ ಬೆಂಗಳೂರಿನ ತಿಗಳರಪಾಳ್ಯ ರಾಜಾಕಾಲುವೆಯಲ್ಲಿ ಬಿದ್ದು, ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ಬಿಬಿಎಂಪಿ ಕಾರ್ಮಿಕ ಶಾಂತಕುಮಾರ್ (24) ಇನ್ನೂ ಪತ್ತೆಯಾಗಿಲ್ಲ. ಚರಂಡಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ತಿಗಳರಪಾಳ್ಯ ನಿವಾಸಿ ಶಾಂತಕುಮಾರ್, ಶನಿವಾರ (ಮೇ 20) ಸಂಜೆ ಚರಂಡಿಯೊಂದರ ದುರಸ್ಥಿ ಕಾರ್ಯದ ಮೇಲ್ವಿಚಾರಣೆ ಮಾಡುತ್ತಿದ್ದಾಗ ಅಚಾನಕ್ಕಾಗಿ ಚರಂಡಿಯಲ್ಲಿ ಬಿದ್ದಿದ್ದರು.
ತಕ್ಷಣವೇ ಅವರನ್ನು ಮೇಲೆತ್ತುವುದಕ್ಕೆ ಅವರೊಂದಿಗಿದ್ದ ಮೂವರು ಕಾರ್ಮಿಕರು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ನಂತರ ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣಾ ಪಡೆಯ ನೆರವಿನಿಂದ ಅವರ ರಕ್ಷಣಾ ಕಾರ್ಯ ನಡೆಯಿತಾದರೂ ಅವರ ಪತ್ತೆ ಮಾತ್ರ ಇದುವರೆಗೂ ಸಾಧ್ಯವಾಗಿಲ್ಲ. ಕುರುಬರಹಳ್ಳಿ ಪೈಪ್ ಲೈನ್ ಬ್ರಿಡ್ಜ್, ಸುಮ್ಮನಹಳ್ಳಿ ಬ್ರಿಡ್ಜ್ ಬಳಿಯೂ ಶೋಧ ಕಾರ್ಯ ನಡೆದಿದ್ದು, ಅರ್ಥ್ ಮೂವಿಂಗ್ ಮಶಿನ್ ಗಳ ಮೂಲಕ ಚರಂಡಿಯೊಳಗೆ ಸುಮಾರು 2-3 ಕಿ.ಮೀ.ವರೆಗೂ ಶೋಧ ಕಾರ್ಯ ನಡೆದಿದೆ.[ಧಾರಾಕಾರ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಬಿಬಿಎಂಪಿ ಕಾರ್ಮಿಕ]

ಶನಿವಾರ ರಾತ್ರಿ ರಾಜಧಾನಿಯಲ್ಲಿ ಭಾರೀ ಮಳೆಯಾಗಿರುವುದರಿಂದ ಶಾಂತಕುಮಾರ್ ಪತ್ತೆ ಜಟಿಲ ಎನ್ನಿಸಿಸದೆ. ನಾವು ಅವರು ಬಿದ್ದ ರಾಜಾ ಕಾಲುವೆ ಸಾಗುವ ದಾರಿಯಲ್ಲೆಲ್ಲ ಹುಡುಕಿದ್ದೇವೆ. ಆದರೂ ಅವರಾಗಲೀ, ಅವರ ದೇಹವಾಗಲೀ ಪತ್ತೆಯಾಗಿಲ್ಲ. ಆದ್ದರಿಂದ ಮತ್ತೆ ಸೋಮವಾರವೂ ಶೋಧ ಕಾರ್ಯ ಮುಂದುವರಿಸುತ್ತೇವೆ ಎಂದು ಬಿಬಿಎಂಪಿ ಕಮಿಷನರ್ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಶನಿವಾರ ಸಂಜೆ ಬೆಂಗಳೂರಿನಲ್ಲಿ 40.8 ಮಿ.ಮೀ. ಮಳೆಯಾಗಿದ್ದು, ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಿ ಹಲವು ಅವಘಡಗಳಿಗೆ ಕಾರಣವಾಗಿದೆ. ನಗರದಲ್ಲಿ ಶನಿವಾರ 100ಕ್ಕೂ ಹೆಚ್ಚು ಬೃಹತ್ ಮರಗಳು ಧರೆಗುರುಳಿವೆ.
{promotion-urls}
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications