ಪೌರತ್ವ: ಬೆಂಗಳೂರಿನಲ್ಲಿ ಮುಸ್ಲಿಮರ ಬೃಹತ್ ಸಭೆಯಿಂದ ಶಾಸಕ ಹ್ಯಾರೀಸ್ ಹೊರಕ್ಕೆ
ಬೆಂಗಳೂರು, ಡಿ 23: ಬೆಂಗಳೂರಿನ ಕಂಟೋನ್ಮೆಂಟ್ ಭಾಗದ, ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಮುಸ್ಲಿಂ ಮುಖಂಡರು ನಡೆಸುತ್ತಿದ್ದ ಬೃಹತ್ ಪ್ರತಿಭಟನಾ ಸಭೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಜಾರಿಗೊಳಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೇಂದ್ರಕ್ಕೆ, ಪ್ರತಿಭಟನಾ ಸಭೆಯಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ.
ಈ ನಡುವೆ, ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ, ಬೆಂಗಳೂರು, ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರೀಸ್ ಅವರನ್ನು, ಕಾರ್ಯಕ್ರಮದ ಆಯೋಜಕರು ವಾಪಸ್ ಕಳುಹಿಸಿದ ಘಟನೆ ವರದಿಯಾಗಿದೆ.

ವೇದಿಕೆ ಏರಲು ಆಗಮಿಸುತ್ತಿದ್ದ ಹ್ಯಾರೀಸ್ ಅವರನ್ನು "ಇದೊಂದು ರಾಜಕೀಯೇತರ ಸಭೆ. ವೇದಿಕೆಗೆ ನೀವು ಬಂದರೆ, ಅದು ಬೇರೆ ಸಂದೇಶ ರವಾನಿಸಿದಂತಾಗುತ್ತದೆ" ಎಂದು, ಆಯೋಜಕರು, ಹ್ಯಾರೀಸ್ ಅವರನ್ನು ವಾಪಸ್ ಕಳುಹಿಸಿದ್ದಾರೆ.
ಶಾಂತಿಯುತವಾಗಿ ನಡೆಯುತ್ತಿರುವ ಸಭೆಗೆ ರಾಜಕೀಯ ಲೇಪನ ಹಚ್ಚುವುದು ಬೇಡ ಎನ್ನುವ ಕಾರಣಕ್ಕಾಗಿ ಹ್ಯಾರೀಸ್ ಮತ್ತು ಇನ್ನೋರ್ವ ಕಾಂಗ್ರೆಸ್ ಮುಖಂಡ ಅಬ್ದುಲ್ ವಾಜೀದ್ ಅವರನ್ನೂ ವೇದಿಕೆ ಏರಲು ಆಯೋಜಕರು ಅವಕಾಶ ನೀಡಲಿಲ್ಲ.
ಈ ಸಭೆಯಲ್ಲಿ ರಾಜಕೀಯ ಮುಖಂಡರು ಹೊರತಾಗಿ, ಎಲ್ಲಾ ರಂಗದವರು ಭಾಗವಹಿಸಿದ್ದರು. ಹ್ಯಾರೀಸ್ ಮತ್ತು ವಾಜೀದ್ ಅವರಿಗೆ ಭಾಷಣ ಮಾಡಲು ಅವಕಾಶ ನೀಡಿದ್ದರೆ, ಅದೊಂದು ಕಾಂಗ್ರೆಸ್ ಸಭೆಯೆಂದು ಪರಿಗಣಿತವಾಗುತ್ತಿತ್ತು, ಹಾಗಾಗಿ, ಆಯೋಜಕರ ಕ್ರಮಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದರು ಎಂದು ಹೇಳಲಾಗುತ್ತಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications