ಪೌರತ್ವ: ಬೆಂಗಳೂರಿನಲ್ಲಿ ಮುಸ್ಲಿಮರ ಬೃಹತ್ ಸಭೆಯಿಂದ ಶಾಸಕ ಹ್ಯಾರೀಸ್ ಹೊರಕ್ಕೆ
ಬೆಂಗಳೂರು, ಡಿ 23: ಬೆಂಗಳೂರಿನ ಕಂಟೋನ್ಮೆಂಟ್ ಭಾಗದ, ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಮುಸ್ಲಿಂ ಮುಖಂಡರು ನಡೆಸುತ್ತಿದ್ದ ಬೃಹತ್ ಪ್ರತಿಭಟನಾ ಸಭೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಜಾರಿಗೊಳಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೇಂದ್ರಕ್ಕೆ, ಪ್ರತಿಭಟನಾ ಸಭೆಯಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ.
ಈ ನಡುವೆ, ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ, ಬೆಂಗಳೂರು, ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರೀಸ್ ಅವರನ್ನು, ಕಾರ್ಯಕ್ರಮದ ಆಯೋಜಕರು ವಾಪಸ್ ಕಳುಹಿಸಿದ ಘಟನೆ ವರದಿಯಾಗಿದೆ.

ವೇದಿಕೆ ಏರಲು ಆಗಮಿಸುತ್ತಿದ್ದ ಹ್ಯಾರೀಸ್ ಅವರನ್ನು "ಇದೊಂದು ರಾಜಕೀಯೇತರ ಸಭೆ. ವೇದಿಕೆಗೆ ನೀವು ಬಂದರೆ, ಅದು ಬೇರೆ ಸಂದೇಶ ರವಾನಿಸಿದಂತಾಗುತ್ತದೆ" ಎಂದು, ಆಯೋಜಕರು, ಹ್ಯಾರೀಸ್ ಅವರನ್ನು ವಾಪಸ್ ಕಳುಹಿಸಿದ್ದಾರೆ.
ಶಾಂತಿಯುತವಾಗಿ ನಡೆಯುತ್ತಿರುವ ಸಭೆಗೆ ರಾಜಕೀಯ ಲೇಪನ ಹಚ್ಚುವುದು ಬೇಡ ಎನ್ನುವ ಕಾರಣಕ್ಕಾಗಿ ಹ್ಯಾರೀಸ್ ಮತ್ತು ಇನ್ನೋರ್ವ ಕಾಂಗ್ರೆಸ್ ಮುಖಂಡ ಅಬ್ದುಲ್ ವಾಜೀದ್ ಅವರನ್ನೂ ವೇದಿಕೆ ಏರಲು ಆಯೋಜಕರು ಅವಕಾಶ ನೀಡಲಿಲ್ಲ.
ಈ ಸಭೆಯಲ್ಲಿ ರಾಜಕೀಯ ಮುಖಂಡರು ಹೊರತಾಗಿ, ಎಲ್ಲಾ ರಂಗದವರು ಭಾಗವಹಿಸಿದ್ದರು. ಹ್ಯಾರೀಸ್ ಮತ್ತು ವಾಜೀದ್ ಅವರಿಗೆ ಭಾಷಣ ಮಾಡಲು ಅವಕಾಶ ನೀಡಿದ್ದರೆ, ಅದೊಂದು ಕಾಂಗ್ರೆಸ್ ಸಭೆಯೆಂದು ಪರಿಗಣಿತವಾಗುತ್ತಿತ್ತು, ಹಾಗಾಗಿ, ಆಯೋಜಕರ ಕ್ರಮಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದರು ಎಂದು ಹೇಳಲಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications