ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಕ್ ಕೊಟ್ಟ ಶಾಸಕ ಎನ್.ಎ. ಹ್ಯಾರಿಸ್!
ಬೆಂಗಳೂರು, ಸೆ. 15: ಇದೇ ಸೆ. 21 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ. ಕೊರೊನಾ ವೈರಸ್, ಲಾಕ್ಡೌನ್, ವೈದ್ಯಕೀಯ ಸಲಕರಣೆಗಳ ಖರೀದಿ, ಕೋವಿಡ್ ಕೇರ್ ಕೇಂದ್ರಗಳ ಅವ್ಯವಹಾರ ಆರೋಪ, ಡ್ರಗ್ಸ್, ಲಾಕ್ಡೌನ್ ಸಂದರ್ಭದಲ್ಲಿ ಹಲವು ಸುಗ್ರೀವಾಜ್ಞೆಗಳ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅ ವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಇವತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿತ್ತು.
ಆ ಸಭೆಯಲ್ಲಿ ಕಾಂಗ್ರೆಸ್ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರು ಅಕ್ಷರಶಃ ಕಾಂಗ್ರೆಸ್ ಉಳಿದ ಶಾಸಕರಿಗೆ ಶಾಕ್ ಕೊಟ್ಟಿದ್ದಾರೆ. ಅದಕ್ಕೆ ಕಾರಣ ಮತ್ತದೆ ಕೊರೊನಾ ವೈರಸ್. ಅನುಮಾನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಂದು ಬೆಳಿಗ್ಗೆ ಶಾಸಕ ಎನ್.ಎ. ಹ್ಯಾರೀಸ್ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರಂತೆ. ಕೋವಿಡ್ ಪರೀಕ್ಷೆ ಫಲಿತಾಂಶ ಬರುವುದು ತಡವಾಗಲಿದೆ ಎಂದಿದ್ದಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಬಂದಿದ್ದರು. ಖಾಸಗಿ ಹೊಟೆಲ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಮಧ್ಯಾಹ್ನ ಊಟ ಮಾಡುವ ಸಮಯದಲ್ಲಿ ಹ್ಯಾರೀಸ್ ಮೊಬೈಲ್ಗೆ ಮಸೇಜ್ ಒಂದು ಬಂದಿದೆ. ಆ ಮೇಸೆಜ್ ನೀಡಿದ ಹ್ಯಾರಿಸ್ ಅವರು ತಕ್ಷಣ ಅಲ್ಲಿಂದ ಹೊರಟಿದ್ದಾರೆ. ಅವರಿಗೆ ಕೋವಿಡ್ ಇರುವುದು ದೃಢಪಟ್ಟಿರುವ ಬಗ್ಗೆ ಮೇಸೆಜ್ ಬಂದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣ ಅಲ್ಲಿಂದ ಶಾಸಕ ಹ್ಯಾರಿಸ್ ಅವರು ಮನೆಗೆ ಹೋಗಿ ಹೋಮ್ ಐಸೋಲೇಶನ್ ಆಗಿದ್ದಾರೆ ಎನ್ನಲಾಗಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಹ್ಯಾರಿಸ್ ಅವರೊಂದಿಗೆ ಊಟ ಮಾಡಿದ್ದರು. ಈಗ ಅವರೆಲ್ಲರಿಗೂ ಆತಂಕ ಶುರುವಾಗಿದೆ ಎನ್ನಲಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications