ಡಿ.28ರಿಂದ ಮೂರು ದಿನಗಳ ಕಾಲ ಶರಣ ಸಂಸ್ಕೃತಿ ಉತ್ಸವ
ಬೆಂಗಳೂರು, ಡಿಸೆಂಬರ್ 25: ಬೆಂಗಳೂರು ಬಸವ ಕೇಂದ್ರವು ಮೂರು ದಿನಗಳ ಕಾಲ ಶರಣ ಸಂಸ್ಕೃತಿ ಉತ್ಸವವನ್ನು ವಿಜಯನಗರದಲ್ಲಿ ಹಮ್ಮಿಕೊಂಡಿದೆ.
ಶರಣ ಸಂಸ್ಕೃತಿ ಉತ್ಸವವು ಡಿಸೆಂಬರ್ 28 ರಿಂದ 30ರವರೆಗೆ ವಿಜಯನಗರದ ಬಸವೇಶ್ವರನಗರ ಸುಜ್ಞಾನ ಮಂಟಪದಲ್ಲಿ ನಡೆಯಲಿದೆ. ಬೆಳಗ್ಗೆ 7.30ಕ್ಕೆ ಸಹಜ ಶಿವಯೋಗ ಪ್ರತಿದಿನ ಸಂಜೆ 6.30ಕ್ಕೆ ಚಿಂತನಗೋಷ್ಠಿ ನಡೆಯಲಿದೆ. ಜಮುರಾ ಕಲಾತಂಡದಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ.
ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವ ತಿರಸ್ಕರಿಸಿದ ಕೇಂದ್ರದ ವಿರುದ್ಧ ಪ್ರತಿಭಟನೆ
28ರಂದು ಶುಕ್ರವಾರ ಸಂಜೆ 6.30ಕ್ಕೆ ಬಸವಾದಿ ಶರಣರ ಜೀವಪರ ಕಾಳಜಿ ವಿಷಯ ಕುರಿತು ಚಿಂತನಾ ಗೋಷ್ಠಿ ನಡೆಯಲಿದೆ. ಮುರುಘಾಮಠದ ಶೂನ್ಯಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆವಹಿಸಲಿದ್ದಾರೆ.
ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ ಸಾನಿಧ್ಯವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಚಿವ ಎಚ್ಡಿ ರೇವಣ್ಣ, ಶಾಸಕ ವಿ ಸೋಮಣ್ಣ ಆಗಮಿಸಲಿದ್ದಾರೆ. ಡಿಸೆಂಬರ್ 29ರಂದು ಬದುಕು ಮತ್ತು ಧನ್ಯತೆಯ ಮಾರ್ಗ ಕುರಿತು ಚಿಂತನ ಗೋಷ್ಠಿ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಸಚಿವ ಡಿಕೆ ಶಿವಕುಮಾರ್ , ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಆಗಮಿಸಲಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?
ಡಿಸೆಂಬರ್ 30ರಂದು ಯುವ ಜನಾಂಗ ಮತ್ತು ಬಹುಮುಖಿ ಕೌಶನ್ಯಾಭಿವೃದ್ಧಿ ವಿಷಯದ ಬಗ್ಗೆ ಚಿಂತನಾಗೋಷ್ಠಿ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದಾರೆ.