Advocate General of Karnataka: ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ
ಬೆಂಗಳೂರು, ಮೇ 20: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಶಿಕಿರಣ ಶೆಟ್ಟಿ ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಪುತ್ರ. ಕಾಂಗ್ರೆಸ್ ಶಾಸಕರ ಅನರ್ಹತೆ ಪ್ರಕರಣ ಸೇರಿದಂತೆ ಹಲವು ಮಹತ್ವದ ಪ್ರಕರಣಗಳನ್ನು ಅವರು ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿ ಮುಗಿದ ನಂತರ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಸ್ಥಾನಕ್ಕೆ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಎಜಿ ನೇಮಕ ಮಾಡಲು ಸಂಪುಟ ಸಭೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ನೇಮಕಾತಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಶಶಿಕಿರಣ ಶೆಟ್ಟಿ, ತಮ್ಮನ್ನು ನೇಮಕ ಮಾಡಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ನ್ಯಾಯಾಲಯದ ಕೆಲಸ ನಿರ್ವಹಣೆಯನ್ನು ಉತ್ತಮಗೊಳಿಸುವು ನಮ್ಮ ಆದ್ಯತೆಯಾಗಿದೆ. ಬಾಕಿ ಉಳಿದಿರುವ ಮತ್ತು ಕ್ಷುಲ್ಲಕ ಪ್ರಕರಣಗಳಲ್ಲಿ ಆದಷ್ಟು ಬೇಗ ಇತ್ಯರ್ಥಗೊಳಿಸುವುದು ಹಾಗೂ ಕಾನೂನು ಇಲಾಖೆಯನ್ನು ಬಲಪಡಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ.
ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ
ಇನ್ನು ರಾಜ್ಯಸರ್ಕಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿ ಇಂದು ಆದೇಶ ಹೊರಡಿಸಿದೆ. ಡಿಜಿ ಐಜಿಪಿ ಆಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದ ಬಳಿಕ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ನೇಮಕವಾಗಿದೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications