ಭಾನುವಾರ ಉತ್ತರಾದಿಮಠದಲ್ಲಿ ಶತಕೋಟಿ ಗಾಯತ್ರಿ ಜಪ
ಬೆಂಗಳೂರು, ಜುಲೈ 24 : ಹತ್ತು ಸಾವಿರಕ್ಕೂ ಹೆಚ್ಚು ಪುರುಷರಿಂದ ಶತಕೋಟಿ ಗಾಯತ್ರಿ ಮಂತ್ರ ಮತ್ತು ಸಹಸ್ರಾರು ಮಹಿಳೆಯರಿಂದ ದಶಲಕ್ಷ ರಾಮಕೃಷ್ಣ ಜಪಕ್ಕೆ ಬೆಂಗಳೂರಿನಲ್ಲಿರುವ ಉತ್ತರಾದಿಮಠ ಅಣಿಯಾಗಿದೆ.
ಆಷಾಢ ಶುದ್ಧ ದಶಮಿ, ಭಾನುವಾರ ಜುಲೈ 26ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದ ಬಳಿಯಿರುವ ಉತ್ತರಾದಿಮಠದಲ್ಲಿ, ಇಂಥದೊಂದು ಧಾರ್ಮಿಕ ಕಾರ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಕಾರ್ಯದೊಂದಿಗೆ ಚಾತುರ್ಮಾಸ್ಯ ಆರಂಭವಾಗಲಿದೆ.
ಉತ್ತರಾದಿಮಠದ ಶ್ರೀಗಳಾದ ಸತ್ಯಾತ್ಮತೀರ್ಥರ ದಿವ್ಯ ಸನ್ನಿಧಿ ಮತ್ತು ಅಧ್ಯಕ್ಷತೆಯಲ್ಲಿ, ಪ್ರಾತಃಕಾಲ 7ರಿಂದ 9ರವರೆಗೆ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವರ ಸನ್ನಿಧಿಯಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಪ್ರತಿ ಪುರುಷ ಸಾವಿರ ಬಾರಿ ಗಾಯತ್ರಿ ಜಪ ಮಾಡಿದರೆ, ಪ್ರತಿ ಮಹಿಳೆ ಸಾವಿರ ಬಾರಿ ರಾಮಕೃಷ್ಣ ಜಪ ಮಾಡಲಿದ್ದಾರೆ.

ಜಪಕ್ಕೆ ಬರುವವರು ಶುದ್ಧವಸ್ತ್ರ ಧರಿಸಿ, ಜಪಕ್ಕೆ ಬೇಕಾಗುವ ಜಪಮಾಲೆ, ಆಚಮನಕ್ಕೆ ಮತ್ತು ಸಂಕಲ್ಪಕ್ಕೆ ಬೇಕಾಗುವ ಪಾತ್ರೆಗಳು, ಬೇಕಿದ್ದರೆ ಕೂಡಲು ಆಸನಗಳನ್ನು ತರಬೇಕಾಗಿ ಉತ್ತರಾದಿಮಠದ ಆಯೋಜಕರು ಭಕ್ತಾದಿಗಳನ್ನು ಕೇಳಿಕೊಂಡಿದ್ದಾರೆ.
ಗಾಯತ್ರಿ ಮಂತ್ರದ ಮಹತ್ವ : ಋಗ್ವೇದದಲ್ಲಿ ಬ್ರಹ್ಮರ್ಷಿ ವಿಶ್ವಾಮಿತ್ರರಿಂದ ಹೊಮ್ಮಿದೆ ಎಂದು ನಂಬಲಾಗಿರುವ ಗಾಯತ್ರಿ ಮಂತ್ರ ಜಪಿಸಿದರೆ ಸಂಕಷ್ಟಗಳೆಲ್ಲ ಪರಿಹಾರವಾಗುತ್ತದೆ ಎಂದು ಆಸ್ತಿಕರು ನಂಬುತ್ತಾರೆ. ಯಾವುದರ ಉಚ್ಚಾರದಿಂದ ಸಂಕಷ್ಟ ತೀರುವುದೋ ಅದೇ ಗಾಯತ್ರಿ ಮಂತ್ರ ಎಂದು ಪ್ರಾಜ್ಞರು ಹೇಳುತ್ತಾರೆ.
ಗಾಯತ್ರಿ ಮಂತ್ರದ ಅರ್ಥ : ಓಂ ಭೂರ್ಭುವಃ ಸ್ವಃ ತತ್ ಸವಿತುರ್ ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೊ ಯೊ ನಃ ಪ್ರಚೋದಯಾತ್. ಇದರ ಅರ್ಥ ಭೂಮಿ ಆಕಾಶ ಮತ್ತು ಅಂತರಿಕ್ಷವನ್ನಾವರಿಸಿದ ತೇಜೋಮಯನಾದ, ದಿವ್ಯ ಸ್ವರೂಪನಾದ, ಪೂಜಿಪನಾದ ಆ ಪರಬ್ರಹ್ಮ(ಸವಿತೃ ಅಥವ ಸೂರ್ಯ)ನಮ್ಮ ಬುದ್ಧಿ ವಿವೇಕಗಳನ್ನು ಬೆಳಕಿನೆಡೆ(ಜ್ಞಾನದ ಬೆಳಕಿನೆಡೆ) ಪ್ರೇರಿಸಲಿ.
ಸೋಮವಾರ ತಪ್ತ ಮುದ್ರಾಧಾರಣೆ : ಮರುದಿನ ಸೋಮವಾರ, ಆಷಾಡ ಶುದ್ಧ ಏಕಾದಶಿಯಂದು ಶ್ರೀ ಸತ್ಯಾತ್ಮತೀರ್ಥರು ಸಹಸ್ರಾರು ಮಧ್ವಮತ ಅನುಯಾಯಿಗಳಿಗೆ ತಪ್ತ ಮುದ್ರೆಯನ್ನು ನೀಡಲಿದ್ದಾರೆ. ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications