ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಮಳೆಗೆ ಮನೆಯ ಗೋಡೆ ಕುಸಿದು ವ್ಯಕ್ತಿ ಸಾವು

By Nayana
|
Google Oneindia Kannada News

ಬೆಂಗಳೂರು, ಜೂನ್ 2: ನಗರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಮಳೆಯಾಗುತ್ತಿದೆ. ಬೇಸಿಗೆಯನ್ನೇ ಮರೆಮಾಚುವಷ್ಟು ಮಳೆಯಾಗಿದೆ. ಇದೀಗ ಮುಂಗಾರು ಆರಂಭವಾಗಿದ್ದು ಶುಕ್ರವಾರ ಎರಡನೇ ಬಾರಿ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗಿದೆ.

ರಾಜಧಾನಿಯಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಬಸವನಗುಡಿಯಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ಮಹಾಂತೇಶ್​ ಎಂದು ಗುರುತಿಸಲಾಗಿದೆ.

ವಿಡಿಯೋ : ಇಂದೋರ್ ಕಟ್ಟಡ ಕುಸಿತ, 10 ಮಂದಿ ದುರ್ಮರಣ ವಿಡಿಯೋ : ಇಂದೋರ್ ಕಟ್ಟಡ ಕುಸಿತ, 10 ಮಂದಿ ದುರ್ಮರಣ

ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಮಹಾಂತೇಶ್​ ಬಸವನಗುಡಿಯ ಐಟಿಐ ಲೇಔಟ್​ನ ಶೆಡ್​ವೊಂದರಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ಮಹಾಂತೇಶ್​ ತೊಡಗಿಸಿಕೊಂಡಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲಿದ್ದಾಗ ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮಹಂತೇಶ್​ ಅವರ ಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Shed collapse: Construction worker dies

ಘಟನೆಯಲ್ಲಿ ಅದೇ ಕುಟುಂಬದ ಶರಣಪ್ಪ, ಶೋಭಾ, ಪಾರ್ವತಿ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A construction worker died aftet a wall of a shed collapsed during heavy rain fall on Friday evening in Basavanagudi. Deceased identified as Mahantesh from Chincholi of Kalaburgi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X