ಸರ್ವ ಧರ್ಮದವರ ಪರ ನಿಂತ ಶಿವಾಜಿ ಹೆಸರಲ್ಲಿ ರಾಜಕೀಯ ಸರಿಯಲ್ಲ: ಶಿವರಾಜ್ ತಂಗಡಗಿ
ಬೆಂಗಳೂರು: ಛತ್ರಪತಿ ಶಿವಾಜಿ ಮಹಾರಾಜರ ಅವರ ಆಡಳಿತ ಅವಧಿಯಲ್ಲಿ ಎಲ್ಲಾ ಧರ್ಮದವರಿಗೂ ಧಾರ್ಮಿಕ ಸ್ವಾತಂತ್ರ್ಯ ಇತ್ತು. ರಾಜರಾಗಿ ಅವರು ಎಲ್ಲಾ ಧರ್ಮಗಳ ಪರ ನಿಂತಿದ್ದರು. ಅಂಥಹ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿತವಾದವರಲ್ಲ. ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿವಾಜಿ ಮಹಾರಾಜರ ಅವರ ಆಡಳಿತ ಅವಧಿಯಲ್ಲಿ ಎಲ್ಲಾ ಧರ್ಮದವರಿಗೂ ಧಾರ್ಮಿಕ ಸ್ವಾತಂತ್ರ್ಯ ಇತ್ತು. ಸರ್ವ- ಧರ್ಮ ಸಹಿಷ್ಣುತೆಗೆ ಶಿವಾಜಿಯ ಆಡಳಿತ ಮಾದರಿಯಾಗಿತ್ತು. ಎಲ್ಲಾ ಸಮುದಾಯದ ಗೌರವಾನ್ವಿತ ವ್ಯಕ್ತಿಗಳಿಗೆ ಅವರು ತಮ್ಮ ಆಡಳಿತ ವ್ಯವಸ್ಥೆಯಲ್ಲಿ ತೊಡಗಿಸಿದ್ದರು. ಇಂದು ಅವರ ಹೆಸರನ್ನು ಕೇಸರಿಕರಣಗೊಳಿಸುತ್ತಿದ್ದು, ಅದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಪ್ರತಿಯೊಬ್ಬರು ಶಿವಾಜಿ ಅವರ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಇಡೀ ದೇಶದಲ್ಲಿ ಶಿವಾಜಿ ಮಹಾರಾಜರು ತನ್ನದೇ ಆದ ಇತಿಹಾಸವನ್ನು ಸೃಷ್ಟಿ ಮಾಡಿದ್ದರು. ಶಿವಾಜಿ ಅವರು ಕರ್ನಾಟಕ ಭಾಷೆ ಹಾಗೂ ರಾಜ್ಯದ ಮೇಲೆ ಅಪಾರವಾದ ಪ್ರೇಮವನ್ನಿರಿಸಿಕೊಂಡಿದ್ದರು. ವಿಜಯನಗರ ಸಾಮ್ರಾಜ್ಯ ಪತನವೇಳೆ ಅದರ ಅವಶೇಷಗಳನ್ನು ಕಂಡು, ಔರಂಗಜೇಬನ ವಿರುದ್ಧ ಧಿಕ್ಕಾರ ಕೂಗಿದ್ದರು ಎಂದು ಸ್ಮರಿಸಿದರು.
ವಿದೇಶಿ ವ್ಯಾಸಂಗದ ಮೊತ್ತು 50 ಲಕ್ಷ ರೂ.ಗೆ ಹೆಚ್ಚಳ
ಇಂದಿನ ಸಂದರ್ಭದಲ್ಲಿ ಸಾಹು ಮಹಾರಾಜರನ್ನು ನಾವು ನೆನೆಯುವ ಅಗತ್ಯವಿದೆ. ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿಯನ್ನು ಜಾರಿಗೆ ತಂದವರು ಸಾಹು ಮಹಾರಾಜರು. ತುಳಿತಕ್ಕೆ ಒಳಗಾದ ಸಮಾಜವನ್ನು ಮೇಲೆತ್ತಿದ್ದ ಮೊಟ್ಟ ಮೊದಲ ರಾಜ ಸಾಹು ಮಹಾರಾಜರು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ವಿದೇಶಿ ವ್ಯಾಸಂಗ ಮಾಡಲು ನೆರವು ನೀಡಿದ್ದರು. ಹೀಗಾಗಿ ಬಡವರ ಮಕ್ಕಳು ವಿದೇಶಿ ವ್ಯಾಸಂಗಕ್ಕೆ ಮಾಡಲು ನೀಡಲಾಗುತ್ತಿದ್ದ ಮೊತ್ತವನ್ನು ರೂ. 25 ಲಕ್ಷದಿಂದ ರೂ. 50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
ಸಾಂಬಾಜಿ ಅವರ ಸಮಾಧಿ ನಾನು ಪ್ರತಿನಿಧಿಸುವ ಕನಕಗಿರಿ ಕ್ಷೇತ್ರದಲ್ಲಿ ಇದೆ ಎಂಬುದನ್ನು ನನ್ನ ಗಮನಕ್ಕೆ ಬಂದಿದೆ. ಖಾಸಗಿ ಸ್ಥಳದಲ್ಲಿ ಸಾಂಬಾಜಿ ಅವರ ಸಮಾಧಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನು ತೊಡಕ್ಕನ್ನು ಬಗೆಹರಿಸಿಕೊಂಡು ಸಮಾಧಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications