ವಿಧಾನಸಭಾ ಚುನಾವಣೆ: ಶಿವಾಜಿನಗರದಲ್ಲಿ ಅಲ್ಪಸಂಖ್ಯಾತ ಮತದಾರರ ಹೆಸರು ಡಿಲೀಟ್; ದೂರು ನೀಡಿದ ಶಾಸಕ
ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಅನೇಕ ಬದಲಾವಣೆಗಳು ಕಂಡುಬರುತ್ತವೆ. ಪಟ್ಟಿಯಿಂದ ಕೆಲವರನ್ನು ತೆಗೆಯುವುದು, ಮತ್ತೆ ಹೊಸ ಮತದಾರರನ್ನು ಸೇರಿಸುವುದು ನಡೆಯುತ್ತದೆ. ಆದರೆ, ಶಿವಾಜಿನಗರದಲ್ಲಿ ಹೊಸ ಆರೋಪ ಕೇಳಿ ಬಂದಿದೆ. ಏನೆಂದು ಮುಂದೆ ಓದಿ..
ಬೆಂಗಳೂರು, ಜನವರಿ. 31: ಇನ್ನೇನು ರಾಜ್ಯ ಚುನಾವಣೆ ಹತ್ತಿರ ಬರುತ್ತಿದೆ. ಈ ಹಿನ್ನೆಲೆ ಚುನಾವಣಾ ಆಯೋಗ ಹಲವು ಬದಲಾವಣೆಗಳನ್ನು ಮಾಡುತ್ತದೆ. ಮೃತಪಟ್ಟವರು, ವಿಳಾಸ ಬದಲಾದವರ ಹೆಸರು ತೆಗೆಯುವುದು ಮತ್ತು ಹೊಸ ಮತದಾರರನ್ನು ಸೇರಿಸುವುದು ನಡೆಯುತ್ತದೆ. ಇಂತಹ ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ಹಲವು ಮತದಾರರನ್ನು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ.
ಶಿವಾಜಿನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಶಿವಾಜಿ ನಗರ ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮಾಡಿದ್ದಾರೆ.

8000 ಅಲ್ಪಸಂಖ್ಯಾತ ಮತದಾರರು ಪಟ್ಟಿಯಿಂದ ಔಟ್!
ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಮ್ಮ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 9,195 ಮತದಾರರನ್ನು, ಅದರಲ್ಲೂ8000 ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಮರು ಪರಿಶೀಲಿಸುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಜನವರಿ 15 ರಂದು ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ 9,195 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ತಯಾರಿ ನಡೆಸಲಾಗುತ್ತಿದೆ ಎಂದು ಜನವರಿ 30 ರಂದು ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಅಂತಿಮ ಮತದಾರರ ಪಟ್ಟಿಯನ್ನು ಘೋಷಿಸಿದ ನಂತರವೂ ಮತ್ತೆ 9,195 ಮತದಾರರನ್ನು ಪಟ್ಟಿಯಿಂದ ಕೈಬಿಡಲು ನೋಟಿಸ್ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮತದಾರರ ಹೆಸರು ಟಾರ್ಗೆಟ್!
ಪಟ್ಟಿಯಿಂದ ತೆಗೆಯಲು ಯೋಜಿಸಿರುವ 9, 195 ಮತಗಳಲ್ಲಿ ಸುಮಾರು 8000 ಮತಗಳು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿವೆ. ಕ್ಷೇತ್ರದ 193 ಮತಗಟ್ಟೆಗಳ ಪೈಕಿ 91 ಮತಗಟ್ಟೆಗಳಲ್ಲಿ ಮಾತ್ರ ಈ ಕಸರತ್ತು ಮಾಡಲಾಗಿದೆ ಎಂದು ರಿಜ್ವಾನ್ ಅರ್ಷದ್ ಅವರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ (ಸಿಇಒ) ಪತ್ರ ಬರೆದಿದ್ದಾರೆ.
"ಇದು ಅಲ್ಪಸಂಖ್ಯಾತರಿಗೆ ಮತ ಚಲಾಯಿಸುವ ಮೂಲಭೂತ ಹಕ್ಕನ್ನು ನಿರಾಕರಿಸುವ ಮತ್ತು ಮುಂಬರುವ ಚುನಾವಣೆಯ ಫಲಿತಾಂಶಗಳನ್ನು ತಿರುಗಿಸಲು ಮಾಡಿರುವ ದುರಾಲೋಚನೆಯ ಉದ್ದೇಶದಿಂದ ಪೂರ್ವಾಗ್ರಹ ಪೀಡಿತ ಕ್ರಮವಾಗಿದೆ" ಎಂದು ರಿಜ್ವಾನ್ ಅರ್ಷದ್ ಸಿಇಒಗೆ ಬರೆದ ಪತ್ರದಲ್ಲಿ ಸೇರಿಸಿದ್ದಾರೆ.

ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ
ಚುನಾವಣಾ ಆಯೋಗವು ಜನವರಿ 15 ರಂದು ಬೆಂಗಳೂರಿನ ಶಿವಾಜಿನಗರ, ಮಹದೇವಪುರ ಮತ್ತು ಚಿಕ್ಕಪೇಟೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನವೆಂಬರ್ 2022 ರಲ್ಲಿ ಖಾಸಗಿ ಕಂಪನಿಯೊಂದು ದೊಡ್ಡ ಪ್ರಮಾಣದ ಮತದಾರರ ಮಾಹಿತಿ ಕಳ್ಳತನ ಪ್ರಕರಣ ವರದಿಯಾಗಿತ್ತು. ಬಳಿಕ ಈ ಮೂರು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ವಿಳಂಬವಾಗಿದೆ.
ಶಿವಾಜಿನಗರದಲ್ಲಿ ಈಗಾಗಲೇ ಅಂತಿಮ ಮತಪಟ್ಟಿ ಪರಿಷ್ಕರಣೆ ಆಗಿದೆ. 17,000 ಮತದಾರರನ್ನ ಮತಪಟ್ಟಿಯಿಂದ ತೆಗೆದು ಹಾಕಲಾಗಿದೆ. ಆದಾದ ಬಳಿಕವೂ 9,195 ಮತದಾರರನ್ನು ಪಟ್ಟಿಯಿಂದ ಕೈಬಿಡಲು ನೊಟೀಸ್ ನೀಡಲಾಗಿದೆ.

ಮತದಾರರ ಪಟ್ಟಿ ಪರಿಶಿಲಿಸುವಂತೆ ಆಯೋಗಕ್ಕೆ ದೂರು
ಈ ಹಿಂದೆ, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೋಷಗಳಿವೆ ಎಂದು ಅಕ್ಟೋಬರ್ 2022 ರಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು.
ಬೆಂಗಳೂರಿನ ನಿವಾಸಿಗಳಾದ ಅಫ್ಸರ್ ಪಾಷಾ, ಭಾಸ್ಕರ್ ಡಿ, ಗಿರೀಶಂ ಎನ್, ಶ್ರೀಕಾಂತ್ ಎಸ್, ಮಹಮ್ಮದ್ ಇನಾಯತ್, ಶೇಖ್ ದಾವೂದ್ ಮತ್ತು ಅನ್ವರ್ ಬಾಷಾ ಎಂಬ ಏಳು ಮಂದಿ ಸಲ್ಲಿಸಿದ ದೂರಿನಲ್ಲಿ ಕ್ಷೇತ್ರದ ಮತದಾರರ ಪಟ್ಟಿಯನ್ನು ಮರುಪರಿಶೀಲಿಸುವಂತೆ ಕೋರಲಾಗಿದೆ.
ದೂರುದಾರರಲ್ಲಿ ಒಬ್ಬರಾದ ಬಿಜೆಪಿ ಕಾರ್ಯಕರ್ತ ಗಿರೀಶಂ ಫೆಬ್ರವರಿ 2022 ರಲ್ಲಿ ಕ್ಷೇತ್ರದಲ್ಲಿ ತಮ್ಮದೇ ಆದ ಸಮೀಕ್ಷೆಯನ್ನು ನಡೆಸಿದ್ದು, ಸಾವಿರಾರು ಮತದಾರರು ನಕಲಿಯಾಗಿದ್ದಾರೆ ಅಥವಾ ಕ್ಷೇತ್ರದಲ್ಲಿ ವಾಸಿಸುತ್ತಿಲ್ಲ ಎಂದು ತಿಳಿಸಿದ್ದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು?











Click it and Unblock the Notifications