ದರೋಡೆಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಅಮಾನತು !
ಬೆಂಗಳೂರು, ಡಿಸೆಂಬರ್ 08: ಪೊಲೀಸರ ಸೋಗಿನಲ್ಲಿ ದಾಳಿ ನಡೆಸಿ ಕೂಲಿ ಕಾರ್ಮಿಕರಿಂದ ದರೋಡೆ ಮಾಡಿದ್ದ ಆರೋಪಿಗಳ ಜತೆ ಶಾಮೀಲಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪೂರ್ವ ವಿಭಾಗದ ಡಿಸಿಡಿ ಡಾ. ಎಸ್.ಡಿ. ಶರಣಪ್ಪ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯ ಟೇಬಲ್ ಸಯ್ಯದ್ ಸಮೀವುಲ್ಲಾ ಅಮಾನತು ಆದ ಪೊಲೀಸ್ ಕಾನ್ಸ್ಟೇಬಲ್. ಈತನನ್ನು ವರ್ತೂರು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರು ಶೆಡ್ ಹಾಕಿಕೊಂಡು ವಾಸವಾಗಿದ್ದರು. ನಾವು ಪೊಲೀಸರು ಎಂದು ಹೇಳಿಕೊಂಡು ಶೆಡ್ ಗಳ ಮೇಲೆ ದಾಳಿ ನಡೆಸಿದ್ದ ಗ್ಯಾಂಗ್ ಕೂಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಬಳಿಕ ಅವರ ಬಳಿಯಿದ್ದ ಬಿಡಿಗಾಸು ದೋಚಿ ಪರಾರಿಯಾಗಿದ್ದರು.
ಹಣ ಕಳೆದುಕೊಂಡು ಹಲ್ಲೆಗೆ ಒಳಗಾಗಿದ್ದ ಕೂಲಿ ಕಾರ್ಮಿಕರು ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ವರ್ತೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಶಿವಾಜಿನಗರ ಪೊಲೀಸ್ ಠಾಣೆಯ ಮುಖ್ಯ ಪೇದೆ ಟೇಬಲ್ ಸಯ್ಯದ ಸಮೀವುಲ್ಲಾ ಸೂಚನೆ ಮೇರೆಗೆ ದರೋಡೆ ಮಾಡಿ ಹಲ್ಲೆ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಪೊಲೀಸ್ ಕಾನ್ಸ್ಟೇಬಲ್ ಆರೋಪಿಗಳಿಗೆ ಸಹಕರಿಸಿ ದರೋಡೆ ಮಾಡಿದ ಆರೋಪ ಕುರಿತು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಿ. ದೇವರಾಜು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಅವರಿಗೆ ವರದಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ ಇಂದು ಸಯ್ಯದ್ ಸಮೀವುಲ್ಲ ಆವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಅಮಾನತಿಗೆ ಒಳಗಾದ ಪೊಲೀಸ್ ಕಾನ್ಸ್ಟೇಬಲ್ ನನ್ನು ವಿಚಾರಣೆಗೆ ಒಳಪಡಿಸುವುದಾಗಿ ಪೊಲೀಸರು ತಿಳಿಸಿದ್ದರು.
ಡ್ರಗ್ ಜಾಲದ ಆರೋಪಿಗಳಿಗೆ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯ ಹೆಲ್ ಕಾನ್ಸ್ಟೇಬಲ್ ನನ್ನು ಅಮಾನತು ಮಾಡಲಾಗಿತ್ತು. ಇದಾದ ಬಳಿಕ ಅಸಲಿ ಪೊಲೀಸರ ಸಹಕಾರದೊಂದಿಗೆ ನಕಲಿ ಪೊಲೀಸರು ದಾಳಿ ನಡೆಸಿ ಚಿನ್ನಾಭರಣ ಅಂಗಡಿ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಆಗಿದ್ದರು. ಇದಕ್ಕೂ ಮೊದಲು ಲಾಡ್ಜ್ ನಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಪೊಲೀಸ್ ಪೇದೆಗಳು ಸಿಕ್ಕಿಬಿದ್ದು ಅವರೂ ಸಹ ಅಮಾನತು ಆಗಿದ್ದನ್ನು ಸ್ಮರಿಸಬಹುದು.
Recommended Video
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications