ದರೋಡೆಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಅಮಾನತು !
ಬೆಂಗಳೂರು, ಡಿಸೆಂಬರ್ 08: ಪೊಲೀಸರ ಸೋಗಿನಲ್ಲಿ ದಾಳಿ ನಡೆಸಿ ಕೂಲಿ ಕಾರ್ಮಿಕರಿಂದ ದರೋಡೆ ಮಾಡಿದ್ದ ಆರೋಪಿಗಳ ಜತೆ ಶಾಮೀಲಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪೂರ್ವ ವಿಭಾಗದ ಡಿಸಿಡಿ ಡಾ. ಎಸ್.ಡಿ. ಶರಣಪ್ಪ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯ ಟೇಬಲ್ ಸಯ್ಯದ್ ಸಮೀವುಲ್ಲಾ ಅಮಾನತು ಆದ ಪೊಲೀಸ್ ಕಾನ್ಸ್ಟೇಬಲ್. ಈತನನ್ನು ವರ್ತೂರು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರು ಶೆಡ್ ಹಾಕಿಕೊಂಡು ವಾಸವಾಗಿದ್ದರು. ನಾವು ಪೊಲೀಸರು ಎಂದು ಹೇಳಿಕೊಂಡು ಶೆಡ್ ಗಳ ಮೇಲೆ ದಾಳಿ ನಡೆಸಿದ್ದ ಗ್ಯಾಂಗ್ ಕೂಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಬಳಿಕ ಅವರ ಬಳಿಯಿದ್ದ ಬಿಡಿಗಾಸು ದೋಚಿ ಪರಾರಿಯಾಗಿದ್ದರು.
ಹಣ ಕಳೆದುಕೊಂಡು ಹಲ್ಲೆಗೆ ಒಳಗಾಗಿದ್ದ ಕೂಲಿ ಕಾರ್ಮಿಕರು ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ವರ್ತೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಶಿವಾಜಿನಗರ ಪೊಲೀಸ್ ಠಾಣೆಯ ಮುಖ್ಯ ಪೇದೆ ಟೇಬಲ್ ಸಯ್ಯದ ಸಮೀವುಲ್ಲಾ ಸೂಚನೆ ಮೇರೆಗೆ ದರೋಡೆ ಮಾಡಿ ಹಲ್ಲೆ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಪೊಲೀಸ್ ಕಾನ್ಸ್ಟೇಬಲ್ ಆರೋಪಿಗಳಿಗೆ ಸಹಕರಿಸಿ ದರೋಡೆ ಮಾಡಿದ ಆರೋಪ ಕುರಿತು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಿ. ದೇವರಾಜು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಅವರಿಗೆ ವರದಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ ಇಂದು ಸಯ್ಯದ್ ಸಮೀವುಲ್ಲ ಆವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಅಮಾನತಿಗೆ ಒಳಗಾದ ಪೊಲೀಸ್ ಕಾನ್ಸ್ಟೇಬಲ್ ನನ್ನು ವಿಚಾರಣೆಗೆ ಒಳಪಡಿಸುವುದಾಗಿ ಪೊಲೀಸರು ತಿಳಿಸಿದ್ದರು.
ಡ್ರಗ್ ಜಾಲದ ಆರೋಪಿಗಳಿಗೆ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯ ಹೆಲ್ ಕಾನ್ಸ್ಟೇಬಲ್ ನನ್ನು ಅಮಾನತು ಮಾಡಲಾಗಿತ್ತು. ಇದಾದ ಬಳಿಕ ಅಸಲಿ ಪೊಲೀಸರ ಸಹಕಾರದೊಂದಿಗೆ ನಕಲಿ ಪೊಲೀಸರು ದಾಳಿ ನಡೆಸಿ ಚಿನ್ನಾಭರಣ ಅಂಗಡಿ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಆಗಿದ್ದರು. ಇದಕ್ಕೂ ಮೊದಲು ಲಾಡ್ಜ್ ನಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಪೊಲೀಸ್ ಪೇದೆಗಳು ಸಿಕ್ಕಿಬಿದ್ದು ಅವರೂ ಸಹ ಅಮಾನತು ಆಗಿದ್ದನ್ನು ಸ್ಮರಿಸಬಹುದು.
Recommended Video
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Cat: ಬೆಂಗಳೂರಲ್ಲಿ ಬೆಕ್ಕುಗಳ ಪ್ರೇಮ ಪ್ರಕರಣ - ಇತ್ಯರ್ಥಕ್ಕೆ ಪೊಲೀಸರೇ ಬರಬೇಕಾಯ್ತು, ವೈರಲ್ ಸುದ್ದಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications