ಬಸವಣ್ಣ, ಅಲ್ಲಮನಂಥ ಮಹಾನ್ ಚೇತನ ಶಿವಕುಮಾರಸ್ವಾಮಿ: ಚಿ.ಮೂ.
ಬೆಂಗಳೂರು, ಜನವರಿ 21: ಬಸವಣ್ಣ, ಅಲ್ಲಮರಂಥ ಮಹಾನ್ ಚೇತನ ಶಿವಕುಮಾರ ಸ್ವಾಮಿಗಳು. ಇನ್ನು ಮುಂದೆ ಜನರು ಅದೇ ರೀತಿ ಮಾತನಾಡಿಕೊಳ್ಳುವಂತಾಗುತ್ತದೆ ಎಂದರು ಹಿರಿಯ ಸಂಶೋಧಕರಾದ ಡಾ.ಎಂ.ಚಿದಾನಂದ ಮೂರ್ತಿ. ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳು ಶಿವೈಕ್ಯರಾದ ಸುದ್ದಿ ತಿಳಿದ ಕೆಲವೇ ಕ್ಷಣಗಳಲ್ಲಿ ಒನ್ ಇಂಡಿಯಾ ಕನ್ನಡ ಜತೆ ಅವರು ಮಾತನಾಡಿದರು.
"ನಾನು ತುಮಕೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದೆ. ಆಗ ಸಿದ್ದಗಂಗಾ ಮಠಕ್ಕೆ ಹೋಗುತ್ತಿದ್ದೆ. ಮಠದಲ್ಲಿ ನಡೆಯುತ್ತಿದ್ದ ಧಾರ್ಮಿಕ ಚಿಂತನೆಗಳಲ್ಲಿ ಪಾಲ್ಗೊಳ್ಳುತ್ತಿದ್ದೆ" ಎಂದು ಸಿದ್ದಗಂಗಾ ಮಠದ ಜತೆಗಿನ ತಮ್ಮ ನಂಟನ್ನು ತೆರೆದಿಟ್ಟರು.
ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತದ ಧಾರ್ಮಿಕ ಪರಂಪರೆಯಷ್ಟೇ ಅಲ್ಲ, ಜಗತ್ತಿನ ನಾನಾ ಧರ್ಮಗಳ ಬಗ್ಗೆ ಅರಿವಿತ್ತು. ಆದರೆ ಅವರು ಹೆಚ್ಚು ಮಾತನಾಡುತ್ತಿದ್ದವರಲ್ಲ. ಮಕ್ಕಳ ಓದಿಗಾಗಿ, ಅವರ ಏಳ್ಗೆಗಾಗಿ ಸ್ವಾಮೀಜಿ ಮಾಡಿದ ಕೆಲಸವನ್ನು ಬರೀ ಮಾತುಗಳಲ್ಲಿ ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಪುಸ್ತಕವೊಂದರ ರಚನೆ ವೇಳೆ, ಸಿದ್ದಗಂಗಾ ಮಠದಲ್ಲೇ ಉಳಿದುಕೊಳ್ಳಲು ಅವಕಾಶ ನೀಡಿದ ಶಿವಕುಮಾರ ಸ್ವಾಮೀಜಿಯನ್ನು ನೆನಪಿಸಿಕೊಂಡ ಚಿದಾನಂದ ಮೂರ್ತಿ, ಕೃತಿ ರಚನೆ ಮಾಡಲು ಬೆಂಗಳೂರಿನ ಗದ್ದಲದಲ್ಲಿ ಸಾಧ್ಯವಿಲ್ಲ ಎನಿಸಿದಾಗ, ಸಿದ್ದಗಂಗಾ ಮಠದ ಅತಿಥಿ ಗೃಹದಲ್ಲಿ ಉಳಿಯಲು ಅವಕಾಶ ನೀಡಿದ್ದರು. ದಿನದಲ್ಲಿ ತಿಂಡಿ-ಊಟಕ್ಕೆ ಕೂಡ ವ್ಯವಸ್ಥೆ ಆಗಿತ್ತು. ಈ ದಿನ ಎಲ್ಲವೂ ನೆನಪಾಗುತ್ತಿದೆ ಎಂದು ಅವರು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications