ಸಿದ್ದಗಂಗಾ ಶ್ರೀ ಲಿಂಗೈಕ್ಯ : ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಮಂಗಳವಾರ ರಜಾ ಘೋಷಣೆ
ಬೆಂಗಳೂರು, ಜನವರಿ 21 : ಸೋಮವಾರ ಜನವರಿ 21ರಂದು ಬೆಳಿಗ್ಗೆ 11.44ಕ್ಕೆ ಅಗಲಿದ ಶ್ರೀ ಶಿವಕುಮಾರ ಸ್ವಾಮೀಜಿ (111) ಅವರ ಗೌರವಾರ್ಥವಾಗಿ ಬೆಂಗಳೂರಿನ ಖಾಸಗಿ ಶಾಲೆಗಳು ಕೂಡ ಜನವರಿ 22, ಮಂಗಳವಾರದಂದು ರಜಾ ಘೋಷಣೆ ಮಾಡಿವೆ.
ಜನವರಿ 22, ಮಂಗಳವಾರದಂದು ಸಿದ್ದಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿ ಅವರು ಅಂತ್ಯ ಸಂಸ್ಕಾರ ತುಮಕೂರಿನ ಮಠದಲ್ಲಿಯ ಆವರಣದಲ್ಲಿಯೇ ನೆರವೇರಲಿದೆ. ಸಂಜೆ 4.30ಕ್ಕೆ ಅಂತ್ಯ ಸಂಸ್ಕಾರ ನೆರವೇರಲಿದ್ದರೆ, ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.
ಶಿವಕುಮಾರ ಶ್ರೀಗಳಿಗೆ ಮಕ್ಕಳೆಂದರೆ ಅಪಾರ ಪ್ರೀತಿ. ನಿತ್ಯ ವಿದ್ಯಾರ್ಜನೆ ಮಾಡುವ ಮಕ್ಕಳೊಂದಿಗೆ ಶ್ರೀಗಳು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಅದನ್ನು ನೋಡುವುದೇ ಒಂದು ಆನಂದದಾಯಕ ಸಂಗತಿಯಾಗಿರುತ್ತಿತ್ತು. ಇದೀಗ ಲಕ್ಷಾಂತರ ಮಕ್ಕಳು ನಡೆದಾಡುವ ದೇವರಿಲ್ಲದೆ ಅನಾಥರಾಗಿದ್ದಾರೆ. ಆದರೆ, ಈ ಮಕ್ಕಳನ್ನು ಶ್ರೀಗಳು ಸನ್ಮಾರ್ಗದಲ್ಲಿ ಎಂದಿಗೂ ನಡೆಸುತ್ತಿರುತ್ತಾರೆ.

ಸಿದ್ದಗಂಗಾಶ್ರೀಗಳ ನಿಧನವಾರ್ತೆ ತಡವಾಗಿ ಘೋಷಿಸಿದ ಕಾರಣ ಬಹಿರಂಗ!
ಅಚ್ಚರಿಯ ಸಂಗತಿಯೆಂದರೆ, ಈ ಮಕ್ಕಳ ಅನ್ನ ದಾಸೋಹಕ್ಕೆ ಅಡ್ಡಿಯಾಗಬಾರದೆಂದು, ಒಂದು ವೇಳೆ ತಾವು ಲಿಂಗೈಕ್ಯರಾದರೂ ಅದರ ಪ್ರಕಟಣೆಯನ್ನ ಅನ್ನ ದಾಸೋಹದ ನಂತರವೇ ಪ್ರಕಟಿಸಬೇಕೆಂದು ಕಿರಿಯ ಶ್ರೀಗಳಿಗೆ ತಿಳಿಸಿದ್ದರು. ಶ್ರೀಗಳ ಅಂತಿಮ ಇಚ್ಛೆಯಂತೆ ಮಕ್ಕಳ ಅನ್ನ ದಾಸೋಹದ ನಂತರವೇ ಶ್ರೀಗಳ ನಿಧನದ ಸುದ್ದಿಯನ್ನು ಪ್ರಕಟಿಸಲಾಯಿತು. ಶ್ರೀಗಳು ಸಾಯುವಾಗಲೂ ಮಾನವೀಯತೆ ಮೆರೆದಿದ್ದಾರೆ.
ಇಂತಹ ತ್ರಿವಿಧ ದಾಸೋಹಿ(ಅನ್ನ, ಅಕ್ಷರ, ಜ್ಞಾನ)ಯ ಗೌರವಾರ್ಥವಾಗಿ ಮಂಗಳವಾರ ರಾಜ್ಯದ ಎಲ್ಲ ಸರಕಾರಿ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಎರಡು ದಿನಗಳ ರಜಾ ಘೋಷಿಸಲಾಗಿದೆ. ಬೆಂಗಳೂರಿನ ಖಾಸಗಿ ಶಾಲೆಗಳು ಕೂಡ ಮಂಗಳವಾರ ಶಾಲೆಗೆ ರಜಾ ನೀಡುವುದಾಗಿ ಪ್ರಕಟಿಸುತ್ತಿವೆ. ಖಾಸಗಿ ಶಾಲಾ ಸಂಘಟನೆಯಾದ ಕುಸ್ಮಾ, ಬೆಂಗಳೂರಿನಲ್ಲಿ ಎಲ್ಲ ಖಾಸಗಿ ಶಾಲೆಗಳಿಗೆ ರಜಾ ನೀಡುವುದಾಗಿ ಪ್ರಕಟಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications