Shivaraj Kumar: ಕಾವೇರಿ ವಿವಾದದ ಬಗ್ಗೆ ಶಿವರಾಜ್ ಕುಮಾರ್ ಏನಂದ್ರು?
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ್ದು, ರಾಜ್ಯಕ್ಕೆ ತೀವ್ರ ಸಂಕಷ್ಟ ಎದುರಾಗಿದೆ. ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಆತಂಕ ಇದೆ.
ತಮಿಳುನಾಡಿಗೆ ನೀರು ಹರಿಸದಂತೆ ವಿವಿಧ ಸಂಘಟನೆಗಳು, ಪಕ್ಷಗಳು ಹೋರಾಟ ನಡೆಸುತ್ತಿವೆ. ಈ ಹೋರಾಟಕ್ಕೆ ಚಿತ್ರರಂಗ ಕೂಡ ಕೈಜೋಡಿಸಬೇಕು ಎಂದು ಹಲವು ಕನ್ನಡಪರ ಸಂಘಟನೆಗಳು ಹೋರಾಟ ಮಾಡಿದ ಬೆನ್ನಲ್ಲೇ ಕನ್ನಡ ಚಿತ್ರರಂಗದ ಪ್ರಮುಖ ನಟರು ಟ್ವೀಟ್ ಮಾಡುವ ತಮ್ಮ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಟ ಸುದೀಪ್ ಟ್ವೀಟ್ ಮಾಡುವ ಮೂಲಕ ಕಾವೇರಿ ವಿವಾದವನ್ನು ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಈಗ ಹಿರಿಯ ನಟ ಶಿವರಾಜ್ ಕುಮಾರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಶಿವರಾಜ್ಕುಮಾರ್ ಹೇಳಿದ್ದೇನು?
"ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ." ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ. pic.twitter.com/FcLbCG0yxi
— DrShivaRajkumar (@NimmaShivanna) September 20, 2023
ದರ್ಶನ್, ಸುದೀಪ್ ಬೆಂಬಲ
"ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ - ಜಲ - ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ." ಎಂದು ಹಿರಿಯ ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, "ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ." ಎಂದು ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications