ಅನರ್ಹ ಶಾಸಕರ ಕಷ್ಟ ಬಿಚ್ಚಿಟ್ಟ ಶಿವರಾಜ್ ತಂಗಡಗಿ
ಬೆಂಗಳೂರು, ಆಗಸ್ಟ್ 23: ಅನರ್ಹರಾದ ಬಳಿಕ ಶಾಸಕರ ಕಷ್ಟ ಏನು ಎಂದು ನನಗೆ ಗೊತ್ತಿದೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿದ ಬಳಿಕ ಅನರ್ಹ ಆದ ಮೇಲೆ ಆಗುವ ಕಷ್ಟ ಏನು ಎಂದು ನನಗೆ ತಿಳಿದಿದೆ. ಈ ಹಿಂದೆ ಆ ಕಷ್ಟವನ್ನು ನಾನೂ ಕೂಡ ಅನುಭವಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಯಾರೂ ಕೂಡ ಬಿಜೆಪಿಯವರು ಮಾತನ್ನು ನಂಬಬೇಡಿ ಎಂದು ನಾನು ಈ ಹಿಂದೆ ಹೇಳಿದ್ದೆ. ಈಗ ಅನರ್ಹ ಶಾಸಕರ ಕಿವಿಗೆ ಬಿಜೆಪಿ ಸರಿಯಾಗಿಯೇ ಹೂ ಇಟ್ಟಿದೆ. ಅವರಿಗೆ ಏನೇನೋ ಭರವಸೆ ಕೊಟ್ಟು ಕೊನೆಗೆ ಬೀದಿಗೆ ತಂದು ನಿಲ್ಲಿಸಿದ್ದಾರೆ. ದಯಮಾಡಿ ಯಾರು ಬಿಜೆಪಿಯವರ ಆಶ್ವಾಸನೆ ನಂಬಬೇಡಿ. ಯಾಕೆಂದರೆ ಅವರು ಸಿಎಂ ಸ್ಥಾನ ಬಿಟ್ಟು ಉಳಿದೆಲ್ಲಾ ಸ್ಥಾನ ಕೊಡ್ತೀನಿ ಅಂತಾರೆ.
Recommended Video

ಹಣಕಾಸು, ಗೃಹ, ಲೋಕೋಪಯೋಗಿ ಸೇರಿದಂತೆ ಎಲ್ಲವೂ ಕೊಡ್ತೇವಿ ಅಂತಾರೆ ಆದರೆ ಕೊಡಲ್ಲ ಎಂದು ವ್ಯಂಗ್ಯವಾಡಿದರು.
ಅನರ್ಹ ಶಾಸಕರು ಅಂದುಕೊಂಡಂತೆ ಬಿಜೆಪಿ ಹೈಕಮಾಂಡ್ ನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಮೊದಲಿನಂತೆ ಬಿಜೆಪಿಯ ಹೈಕಮಾಂಡ್ ಈಗ ಇಲ್ಲ ಎಂದು ಹೇಳಿದರು. ಈ ಹಿಂದೇ ನನಗೆ ಬಂದ ಕಷ್ಟ, ಈಗ ನಮ್ಮ ಸ್ನೇಹಿತರು ಅನುಭವಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನಲ್ಲಿ ಅವರು ಅಷ್ಟು ಸುಲಭವಾಗಿ ಕೇಸ್ ಗೆದ್ದು ಬಂದು ಮಂತ್ರಿ ಆಗೋಕೆ ಸಾಧ್ಯ ಇಲ್ಲ ಎಂದು ಹೇಳಿದರು.
ಬಿಜೆಪಿಯವರು ಕೊಟ್ಟ ಭರವಸೆಯನ್ನು ಈಡೇರಿಸುವುದಿಲ್ಲ. ಯಾರು ತಮಗೆ ಬೆಂಬಲಿಸಿದ್ದಾರೋ ಅವರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಕ್ರಮೇಣ ಇದು ಅನರ್ಹ ಶಾಸಕರಿಗೂ ಮನವರಿಕೆಯಾಗುತ್ತದೆ ಎಂದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications