ಶಿವರಾಮ ಕಾರಂತ ಬಡಾವಣೆ ಕಟ್ಟಡ ಮಾಲೀಕರಿಗೆ ಸಂತಸದ ಸುದ್ದಿ
ಬೆಂಗಳೂರು, ಮೇ 07: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉದ್ದೇಶಿತ ಡಾ. ಶಿವರಾಮ ಕಾರಂತ್ ಬಡಾವಣೆಯ ಸುಮಾರು 2500 ಕಟ್ಟಡಗಳನ್ನು ಸರ್ವೋಚ್ಛ ನ್ಯಾಯಾಲಯವು ಸಕ್ರಮಗೊಳಿಸಿ ಆದೇಶ ಹೊರಡಿಸಿದೆ. ಸಕ್ರಮಗೊಂಡಿರುವ ಕಟ್ಟಡಗಳಿಗೆ ಮೇ. 13 ರಂದು ನ್ಯಾ. ಎ.ವಿ. ಚಂದ್ರಶೇಖರ್ ಕಮಿಟಿ ಸಕ್ರಮ ಸರ್ಟಿಫಿಕೇಟ್ ಗಳನ್ನು ವಿತರಣೆ ಮಾಡಲಿದೆ.
ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ವರದಿಯ ಆಧಾರದ ಮೇಲೆ 2018 ಕ್ಕಿಂತ ಮುಂಚೆ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀಕರು ಸಲ್ಲಿಸಿದ ದಾಖಲೆಗಳ ಮೇಲೆ ಮಾನ್ಯ ಸರ್ವೋಚ್ಛ ನ್ಯಾಯಾಲಯ ಸಕ್ರಮಗೊಳಿಸಿ ಆದೇಶಿಸಿದೆ. ಇದರಿಂದ ಕಟ್ಟಡ ನೆಲಸಮ ಭೀತಿಗೆ ಒಳಗಾಗಿದ್ದ ಕಟ್ಟಡ ಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ.

ನ್ಯಾಯಾಲಯದ ಆದೇಶದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದ್ದು, ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ದಿನಾಂಕ 13.05.2022ರಿಂದ ವಿತರಿಸಲಾಗುವುದು. ಡಾ. ಶಿವರಾಮ ಕಾರಂತ್ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ನೀಡಲಾಗುವುದು ಎಂದು ನ್ಯಾ. ಎ.ವಿ. ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್., ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು. ಎಲ್ಲಾ ಫಲಾನುಭವಿಗಳು ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಹಾಜರಾಗಲು ಹಾಗೂ ನಿಗದಿತ ದಿನಾಂಕ ಮತ್ತು ಸಮಯದ ಬಗ್ಗೆ ಎಸ್.ಎಂ.ಎಸ್. ಅನ್ನು ಕಳುಹಿಸಲಾಗುವುದು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications