ಕೂಲಿನಗರ ಬ್ರಿಡ್ಜ್ ಬಳಿ ದರೋಡೆಕೋರನ ಕಾಲಿಗೆ ಗುಂಡು
ಬೆಂಗಳೂರು, ಡಿಸೆಂಬರ್ 1: ಲಾರಿ ಚಾಲಕನಿಗೆ ಡ್ರಾಗರ್ ನಿಂದ ಇರಿದು ದರೋಡೆ ಮಾಡಿದ್ದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ನಂದಿನಿ ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ಹತ್ತು ದಿನದಲ್ಲಿ ಹತ್ತಕ್ಕೂ ಹೆಚ್ಚು ಕಡೆ ದರೋಡೆ ಮಾಡಿದ್ದ ಈತನಿಗೆ ಮೊಬೈಲ್ ಟಾರ್ಗೆಟ್. ರೋಡ್ ನಲ್ಲಿ ಹೋಗುವರನ್ನು ಹಿಂಬಾಲಿಸಿ ಚಾಕುವಿನಿಂದ ಇರಿದು ದೋಚುತ್ತಿದ್ದ. ಮಂಗಳವಾರ ಬೆಳಗ್ಗೆ ಲಗ್ಗೆರೆ ಕೂಲಿ ನಗರ ಬ್ರಿಡ್ಜ್ ಬಳಿ ಇರುವ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಲು ಯತ್ನಿಸಿದಾಗ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಪಿಎಸ್ ಐ ಜೋಗಾನಂದ್ ಗುಂಡು ಹಾರಿಸಿ ಆರೋಪಿ ಅನ್ಬನ್ ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್ಟೇಬಲ್ ಅಭಿಷೇಕ್ ಗಾಯಗೊಂಡಿದ್ದುಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲ ದಿನಗಳ ಹಿಂದೆ ನಂದಿನಿ ಬಡಾವಣೆ ಸಮೀಪ ಲಾರಿ ಚಾಲಕನಿಗೆ ಡ್ರಾಗರ್ ನಿಂದ ಇರಿದು ಮೂವತ್ತು ಸಾವಿರ ನಗದು ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದರು. ಚಾಲಕನ ತಲೆಗೆ ಗಂಭೀರ ಪೆಟ್ಟಾಗಿತ್ತು. ನಂದಿನಿ ಬಡಾವಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ಮಾಡಿದವರ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಎರಡನೇ ಆರೋಪಿ ಅನ್ವರ್ ಎಂಬುವನ್ನು ಬಂಧಿಸಿದ್ದರು. ಈತ ನೀಡಿದ ಮಾಹಿತಿ ಮೇರೆಗೆ ಮೊದಲನೇ ಆರೋಪಿ ಅನ್ಬನ್ ಇರುವ ಮಾಹಿತಿ ಆಧರಿಸಿ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಕಾನ್ಸ್ಟೇಬಲ್ ಅಭಿಷೇಕ್ ಆರೋಪಿ ಬಂಧನಕ್ಕೆ ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆರೋಪಿಗೆ ಶರಣಾಗಲು ಪೊಲೀಸರು ಸೂಚಿಸಿದ್ರೂ ಪ್ರಯೋಜನ ಆಗಿಲ್ಲ. ದಾಳಿ ನಡೆಸಲು ಮುಂದಾದ ಆರೋಪಿ ಕಾಲಿಗೆ ಪಿಎಸ್ ಐ ಜೋಗಾನಂದ್ ಗುಂಡು ಹಾರಿಸಿದ್ದು, ಅದು ಕಾಲಿಗೆ ಬಿದ್ದಿದೆ. ಪೊಲೀಸ್ ಕಾನ್ಸ್ ಟೇಬಲ್ ಅಭಿಷೇಕ್ ಗಾಯಗೊಂಡಿದ್ದು, ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮೊಬೈಲ್ ದರೋಡೆ ಮಾಡುವುದೇ ಕಾಯಕ ಮಾಡಿಕೊಂಡಿರುವ ಅನ್ಬನ್ ಆರ್ಎಂಸಿ ಯಾರ್ಡ್ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ. ಒಂದು ತಿಂಗಳ ಗಿಂದೆ ಜೈಲಿನಿಂದ ಬಿಡುಗಡೆ ಆಗಿದ್ದ. ಈತನ ವಿರುದ್ಧ ಮಾಗಡಿ ರಸ್ತೆ , ಯಶವಂತಪುರ, ಮಹಾಲಕ್ಷ್ಮೀ ಬಡಾವಣೆ ನಂದಿನಿ ಬಡಾವಣೆ ಠಾಣೆಗಳಲ್ಲಿ ಹಲವು ಕೇಸು ದಾಖಲಾಗಿವೆ. ವಾರದ ಹಿಂದೆ ಲಾರಿ ಚಾಲಕನಿಗೆ ಇರಿದು ದರೋಡೆ ಮಾಡಿದ್ದ. ಹತ್ತು ದಿನದಲ್ಲಿ ಹತ್ತಕ್ಕೂಹೆಚ್ಚು ಕಡೆ ದರೋಡೆ ಮಾಡಿದ್ದ. ಲಾರಿ ಚಾಲಕನ ಬಳಿ ದರೋಡೆ ಮಾಡಿದ್ದ ಪ್ರಕರಣದ ಬೆನ್ನಟ್ಟಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications