ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ: ವಜುಭಾಯಿ ವಾಲಾ
ಬೆಂಗಳೂರು, ಡಿಸೆಂಬರ್ 16: ಭಯೋತ್ಪಾದಕ ಕಸಬ್ ನ ಮರಣ ವರ್ಷಾಚರಣೆ ಆಚರಿಸುತ್ತಿರುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಕರ್ನಾಟಕ ರಾಜ್ಯ ರಾಜ್ಯಪಾಲ ವಜುಭಾಯಿ ವಾಲಾ ಹೇಳಿದ್ದಾರೆ.
ನಗರದಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ದೇಶದ್ರೋಹಿಯ ಬಗ್ಗೆ ಕರುಣೆ ತೋರುವವರು, ದೇಶದ್ರೋಹಿಗಳನ್ನು ಆದರ್ಶವಾಗಿ ಪರಿಗಣಿಸುವವರೂ ಕೂಡ ದೇಶದ್ರೋಹಿಗಳೇ ಎಂದರು.

ಕೆಲವು ಮಂದಿ, ಭಯೋತ್ಪಾದಕ ಕಸಬ್ ನ ಮರಣದಿನದ ವರ್ಷಾಚರಣೆಯಲ್ಲಿ ತೊಡಗಿದ್ದಾರೆ, ಇಂತಹಾ ಹೀನ ಕೃತ್ಯವನ್ನು ಸಹಿಸಲು ಅಸಾಧ್ಯ, ದೇಶದ್ರೋಹಿಗಳನ್ನು ಬೆಂಬಲಿಸುವವರನ್ನೂ ದೇಶದ್ರೋಹಿಗಳೆಂದೇ ಪರಿಗಣಿಸಿ ಕೊಂದುಬಿಡುವುದು ಉತ್ತಮ ಎಂದು ಅವರು ಕೋಪೋದ್ರಿಕ್ತರಾಗಿ ಮಾತನಾಡಿದ್ದಾರೆ.
ಸಂಸತ್ ಮೇಲಾದ ಭಯೋತ್ಪಾದಕರ ದಾಳಿಯ ಪ್ರಮುಖ ಆರೋಪಿ ಅಫ್ಜಲ್ ಗುರು ವಿಷಯದಲ್ಲೂ ಹೀಗೆಯೇ ಆಗಿತ್ತು, ಆತನ ಮರಣ ದಂಡಣೆ ವಿರೋಧಿಸಿ ಪ್ರತಿಭಟನೆಯನ್ನೂ ಮಾಡಿದ್ದರು ಎಂದ ಅವರು ದೇಶದ್ರೋಹಿಗಳನ್ನು ಮೂರೇ ದಿನದಲ್ಲಿ ಗಲ್ಲಿಗೆ ಹಾಕಿಬಿಡಬೇಕು, ನಮ್ಮ ನ್ಯಾಯಾಂಗ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಅದು ಕಡಿಮೆಯಾಗಬೇಕು ಎಂದರು.
ದೇಶಪ್ರೇಮದ ಬಗ್ಗೆ ಇಸ್ರೇಲ್ ರಾಷ್ಟ್ರವನ್ನು ಉದಾಹರಣೆಯಾಗಿ ನೀಡಿದ ಅವರು, ಆ ದೇಶದ ಮಹಿಳೆಯರೂ, ಪುರುಷರು ಖಡ್ಡಾಯವಾಗಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಾರೆ, ಅವರಿಗೆ ದೇಶದ ಬಗ್ಗೆ ಉತ್ಕಟವಾದ ಪ್ರೇಮವಿದೆ ಅದೇ ರೀತಿಯ ದೇಶಪ್ರೇಮ ಭಾರತದಲ್ಲೂ ಕಾಣಬೇಕು ಎಂದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications