ಡ್ಯುಯೆಟ್ ಬಾರ್ ಮುಂದೆ ಓನರ್ ಮನೀಶ್ ಶೆಟ್ಟಿ ಗುಂಡಿಕ್ಕಿ ಹತ್ಯೆ
ಬೆಂಗಳೂರು, ಅ. 15: ಬ್ರಿಗೇಡ್ ರಸ್ತೆ ಸಮೀಪವಿರುವ ಡ್ಯುಯೆಟ್ ಬಾರ್ ಓನರ್ ಮನೀಶ್ ಶೆಟ್ಟಿ ಅವರನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ರೆಸ್ಟ್ ಹೌಸ್ ರಸ್ತೆಯಲ್ಲಿರುವ ತಮ್ಮ ಬಾರ್ ಮುಂದೆ ರಾತ್ರಿ ಸುಮಾರು 9. 05 ಸುಮಾರಿಗೆ ನಿಂತಿದ್ದ 45 ವರ್ಷ ವಯಸ್ಸಿನ ಮನೀಶ್ ಶೆಟ್ಟಿ ಅವರ ಮೇಲೆ ಬೈಕಿನಿಂದ ಬಂದ ಅನಾಮಿಕ ವ್ಯಕ್ತಿಗಳು ಮೊದಲಿಗೆ ಮನೀಶ್ ಶೆಟ್ಟಿ ಅವರಿಗೆ ಚಾಕುವಿನಿಂದ ತಿವಿದಿದ್ದಾರೆ ನಂತರ ಡಬ್ಬಲ್ ಬ್ಯಾರೆಲ್ ಗನ್ ಬಳಸಿ ಎರಡು ಸುತ್ತು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದಾರೆ.
ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮನೀಶ್ ರನ್ನು ತಕ್ಷಣವೇ ಸಮೀಪದ ಮಲ್ಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಯತ್ನಿಸಲಾಗಿದೆ. ಆದರೆ, ಪಾಯಿಂಟ್ ಬ್ಲ್ಯಾಂಕ್ ನಲ್ಲಿ ತಗುಲಿದ್ದ ಗುಂಡು ಮನೀಶ್ ಪ್ರಾಣ ತೆಗೆದಿದೆ.

ಮೇಲ್ನೋಟಕ್ಕೆ ಇದು ಹಳೆ ದ್ವೇಷದಿಂದ ನಡೆದ ಕೃತ್ಯ ಎಂದು ಕಂಡು ಬಂದಿದೆ. ರವಿ ಪೂಜಾರಿ ಗ್ಯಾಂಗಿನವರು ಇರಬಹುದು ಎಂದು ಶಂಕಿಸಲಾಗಿದೆ. ಮೃತ ಮನೀಶ್ ಶೆಟ್ಟಿ ಅವರು ಉಡುಪಿಯ ಅಂಬಾಲಪಾಡಿಯವರಾಗಿದ್ದು, ಅವರ ವಿರುದ್ಧ ಉಡುಪಿ, ದಕ್ಷಿಣ ಕನ್ನಡ ಹಾಗೂ ಮುಂಬೈನಲ್ಲಿ ಹಲವು ಕೇಸುಗಳಿವೆ. ಕೊಲೆ ಬೆದರಿಕೆ, ಕೊಲೆ ಯತ್ನ ಪ್ರಕರಣದ ಆರೋಪಿಯೂ ಹೌದು. ಮಂಗಳೂರಿನಲ್ಲಿ ರೌಡಿ ಶೀಟರ್ ಆಗಿದ್ದ ಮನೀಶ್ ಅವರು ಒಂದು ಕಾಲದಲ್ಲಿ ರವಿ ಪೂಜಾರಿಗೆ ಆಪ್ತರಾಗಿದ್ದರು ಎಂದು ಕಬ್ಬನ್ ಪಾರ್ಕ್ ಪೊಲೀಸರು ತಿಳಿಸಿದ್ದಾರೆ.
Recommended Video
ಬೆಂಗಳೂರು ಹಾಗೂ ಹೈದರಾಬಾದಿನಲ್ಲಿ ದೊಡ್ಡ ಮಟ್ಟದಲ್ಲಿ ಚಿನ್ನಾಭರಣ ಮಳಿಗೆ ದೋಚುವ ಕೃತ್ಯಗಳಲ್ಲಿ ಮನೀಶ್ ಕೈವಾಡ ಇದ್ದೆ ಇರುತ್ತಿತ್ತು. ಸದ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಜಾರಿಯಲ್ಲಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications