ದೇಶಾದ್ಯಂತ ಅಯೋಧ್ಯೆ ಶ್ರೀ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ

ಬೆಂಗಳೂರು, ಡಿಸೆಂಬರ್ 21: ಶ್ರೀರಾಮಜನ್ಮ ಭೂಮಿ ಟ್ರಸ್ಟ್ ದೇಶಾದ್ಯಂತ ಅಯೋಧ್ಯೆ ನಿಧಿ ಸಮರ್ಪಣಾ ಅಭಿಯಾನವನ್ನು ಹಮ್ಮಿಕೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಿಧಿ ಸಮರ್ಪಣಾ ಅಭಿಯಾನ ನಿಮಿತ್ತ ಡಿಸೆಂಬರ್ 22 ರಂದು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿದೆ.

ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಜಿ ಅವರು ಮಾತನಾಡಲಿದ್ದಾರೆ.

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಮಂದಿರದ ಪುನರ್ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 5 ರಂದು ಶಿಲಾನ್ಯಾಸ ಮಾಡಿದ ಬಳಿಕ ನಿರ್ಮಾಣದ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

Shri Ram Janmabhoomi Mandir Nidhi Samarpan Abhiyan In India

ರಾಷ್ಟ್ರೀಯ ಅಸ್ಮಿತೆಯ ಸಂಕೇತವಾದ ಶ್ರೀರಾಮಮಂದಿರ ನಿರ್ಮಾಣದ ಈ ಪುಣ್ಯಕಾರ್ಯದಲ್ಲಿ ದೇಶದ ಎಲ್ಲ ಪ್ರಜೆಗಳೂ ಭಾಗಿಯಾಗುವ ಅವಕಾಶ ಒದಗಿಸುವ ದೃಷ್ಟಿಯಿಂದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಇದೀಗ ದೇಶಾದ್ಯಂತ ನಿಧಿ ಸಮರ್ಪಣಾ ಅಭಿಯಾನವನ್ನು ಹಮ್ಮಿಕೊಂಡಿದೆ.

ದೇಶದ ಎಲ್ಲ ಮನೆಗಳನ್ನೂ ತಲುಪುವ ಗುರಿ ಹೊಂದಿರುವ ಈ ಬೃಹತ್ ಜನಸಂಪರ್ಕ ಅಭಿಯಾನದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಪತ್ರಿಕಾಗೋಷ್ಠಿಯು ಡಿಸೆಂಬರ್ 22 ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ನಡೆಯಲಿದೆ.

Recommended Video

      Bangalore: ರೂಪಾಂತರಗೊಂಡ ಕೊರೊನಾ ವೈರಸ್‌ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ- ಸಿಎಂ ಯಡಿಯೂರಪ್ಪ ಮಾಹಿತಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+