ಬೆಂಗಳೂರಲ್ಲಿ ಶ್ರೀ ಸಾಯಿ ಕೋಟಿ ಬಾಬ ಮಂದಿರ ನಿರ್ಮಾಣ
ಬೆಂಗಳೂರು, ನವೆಂಬರ್, 16 : ಶ್ರೀ ಸಾಯಿಬಾಬ ಅಂತರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಶ್ರೀ ಸಾಯಿ ಕೋಟಿ ಬಾಬ ಮಂದಿರವನ್ನು ಬೆಂಗಳೂರಿನ ಅಂತರಾಷ್ಟೀಯ ವಿಮಾನ ನಿಲ್ದಾಣ ರಸ್ತೆಯ ಚಿಕ್ಕಜಾಲದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಬಾಬ ಆದೇಶ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1 ಕೋಟಿ ಸಾಯಿಬಾಬ ಮೂರ್ತಿಗಳನ್ನು ಮಂದಿರದ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು. ಆಧ್ಯಾತ್ಮಕ ಕೇಂದ್ರವನ್ನು ಮಂದಿರದಲ್ಲಿ ಸ್ಥಾಪಿಸಿ ಬೆಂಗಳೂರು ಶಾಂತಿ, ಸಹಭಾಳ್ವೆ ಹಾಗೂ ಭಕ್ತಿಯನ್ನು ಇಡೀ ಜಗತ್ತಿಗೆ ಸಾರುವ ಉದ್ದೇಶದಿಂದ ಹಾಗೂ ಸ್ಮಾರಕವನ್ನು ಬಾಬಾ ಭಕ್ತರಿಗೆ ಅರ್ಪಿಸುವ ಉದ್ದೇಶದಿಂದ ಶ್ರೀ ಸಾಯಿ ಕೋಟಿ ಬಾಬ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು.

ನ. 19 ಹಾಗೂ 2ರಂದು ತ್ರಿಪುರವಾಸಿನಿ, ಪ್ಯಾಲೆಸ್ ಮೈದಾನದಲ್ಲಿ ಶ್ರೀ ಶಿರಡಿ ಸಾಯಿಬಾಬರವರ ನಿಜಪಾದುಕ ದರ್ಶನ ಹಾಗೂ 11 ಅಡಿ ಎತ್ತರದ ಶ್ರೀ ಸಾಯಿಬಾಬರವರ ಮೂರ್ತಿಯ ದರ್ಶನವನ್ನು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಭಕ್ತಾಧಿಗಳಿಗೆ ಏರ್ಪಡಿಸಲಾಗಿದೆ.
ಸಬ್ ಕ ಮಾಲಿಕ್ ಏಕ್ ಎಂಬ ಪರಿಕಲ್ಪನೆಯಲ್ಲಿ ಎಲ್ಲಾ ಧರ್ಮದವರು ಕಾರ್ಯಕ್ರಮಕ್ಕೆ ಆಗಮಿಸಿ ಶ್ರೀ ಶಿರಡಿ ಸಾಯಿಬಾಬರವರ ಕೃಪೆಗೆ ಪಾತ್ರರಾಗಬೇಕೆಂದು ವಕ್ತಾರ ಗುರುರಾಜ ಕೋರಿದರು.
ದೇವಸ್ಥಾನದ ಆವರಣದಲ್ಲಿ ನಮ್ಮ ದೇಶದ ಸಂಸ್ಕೃತಿಯಾದ ಗೋವುಗಳನ್ನು ರಕ್ಷಿಸಿ, ಅದನ್ನು ಪೋಷಿಸಲು ಗೋಶಾಲೆಗಳನ್ನು ನಿರ್ಮಿಸುವುದು.
ನಿರ್ಗತಿಕರಿಗೆ ಉಚಿತ ಆರೋಗ್ಯ ಕೇಂದ್ರ, ಜೈ ಜವಾನ್-ಜೈ ಕಿಸಾನ್ ಎಂಬ ಮೂಲ ಕಲ್ಪನೆಯ ಮೇಲೆ ನಂಬಿಕೆ ಹೊಂದಿ ಸಮಾಜದ ಕ್ಷೇಮಕ್ಕೆ ತಮ್ಮ ಜೀವನವನ್ನು ಸವೆಸುವ ರೈತರ ಕುಂಟುಂಬಕ್ಕೆ ಹಾಗೂ ದೇಶದ ರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಡುವ ಸೈನಿಕರ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವುದು.
ನಿರ್ಗತಿಕ ಹಾಗೂ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಲಾಗುವುದು ಎಂದು ಉಪಾಧ್ಯಕ್ಷ ವಿಜಯ್ ಕುಮಾರ್ ಗೌಡರವರು ತಿಳಿಸಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್












Click it and Unblock the Notifications