ಅಡ್ಡಾದಿಡ್ಡಿ ಕಾರು ಚಾಲನೆ: ಮೂವರ ವಿರುದ್ಧ ಎಫ್ಐಆರ್
ಬೆಂಗಳೂರು, ಜು.2: ನಗರದಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸಂಚಾರ ಪೊಲೀಸರಿಗೆ ಧಮ್ಕಿ ಹಾಕಿದ ಮೂವರು ಯುವಕರ ವಿರುದ್ಧ ಹೈಗ್ರೌಂಡ್ಸ್ ಸಂಚಾರ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಚಾರ ನಿಯಮವನ್ನು ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಕ್ಕೆ ಎಸ್ಐ ಶ್ರೀನಿವಾಸ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ನೀಡಿದ್ದು ಬೆದರಿಕೆ ಹಾಕಿದ ಯುವಕರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ.

ಏನಿದು ಪ್ರಕರಣ: ಭಾನುವಾರ ಸಂಜೆ ಹೈಗ್ರೌಂಡ್ಸ್ ಸಂಚಾರ ಠಾಣೆ ಎಸ್ಐ ಶ್ರೀನಿವಾಸ್ ಮತ್ತು ಸಿಬ್ಬಂದಿ ಸಂಚಾರ ದಟ್ಟನೆಯನ್ನು ನಿಯಂತ್ರಿಸುತ್ತಿದ್ದ ವೇಳೆ 2 ಜಾಗ್ವಾರ್ ಮತ್ತು ಮತ್ತು ಒಂದು ಪೊರ್ಷೆ ಕಾರುಗಳು ಸ್ಪರ್ಧೆಗೆ ಬಿದ್ದವರಂತೆ ಅತಿ ವೇಗವಾಗಿ ಹೋಗುತ್ತಿದ್ದನ್ನು ಕಂಡು ಪೊಲೀಸರು ಕಾರನ್ನು ನಿಲ್ಲಿಸಲು ಸೂಚಿಸಿದ್ದರು.[ಅಡ್ಡಾದಿಡ್ಡಿ ಚಾಲನೆ: ಎಸ್ಎಂಕೆ ಮೊಮ್ಮಗನಿಂದ ಧಮ್ಕಿ]
ಕೌಶಿಕ್ ,ಅದಿತ್ಯ ರೆಡ್ಡಿ,ಸಿದ್ದಾಂತ್ ಸರಾಫ್ ಕಾರನ್ನು ನಿಲ್ಲಿಸದೇ ಸಮೀಪದ ತಾಜ್ ವೆಸ್ಟೆಂಡ್ ಹೋಟೆಲ್ನ ಆವರಣಕ್ಕೆ ವಾಹನ ನುಗ್ಗಿಸಿದ್ದಾರೆ. ಬೈಕ್ನಲ್ಲಿ ಹಿಂಬಾಲಿಸಿ ಹೋದ ಶ್ರೀನಿವಾಸ್ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಪಾವತಿಸುವಂತೆ ಚಾಲಕರಿಗೆ ಸೂಚಿಸಿದ್ದದ್ದಕ್ಕೆ ಶ್ರೀನಿವಾಸ್ ಅವರಿಗೆ ಧಮ್ಕಿ ಹಾಕಿದ್ದರು.[ಟ್ರಾಫಿಕ್ ರೂಲ್ಸ್ ಬ್ರೇಕ್: ಮಿರ್ಜಿ ಪುತ್ರರು ಮಾಡಿದ್ದೇನು?]
ಅಪಾಯಕಾರಿ ಚಾಲನೆ, ಅಡ್ಡಾದಿಡ್ಡಿ ಚಾಲನೆ, ಪೊಲೀಸರ ಜೊತೆ ಅನುಚಿತ ವರ್ತನೆ ,ಟಿಂಡೆಡ್ ಗ್ಲಾಸ್ ಬಳಕೆ, ವಾಹನ ಸಂಚಾರಕ್ಕೆ ಅಡ್ಡಿ, ಪೊಲೀಸ್ ಆಜ್ಞೆ ಉಲ್ಲಂಘನೆ, ವಿರುದ್ಧ ಪ್ರಕರಣ ದಾಖಲಿಸಿ ತಲಾ 900 ರಂತೆ 2700 ರೂ.ದಂಡವನ್ನು ಸಂಚಾರ ಪೊಲೀಸರು ವಸೂಲಿ ಮಾಡಿದ್ದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications