ದ್ವಿಚಕ್ರ ವಾಹನ, ಸಾರಿಗೆಯೇತರ ವಾಹನಗಳಿಗೂ ಸ್ಪೀಡ್ ಗವರ್ನರ್
ಬೆಂಗಳೂರು, ಮಾರ್ಚ್ 10: ಸಾರಿಗೆ ವಾಹನಗಳ ಮಾದರಿಯಲ್ಲಿ ಸಾರಿಗೆಯೇತರ ವಾಹನಗಳು ಹಾಗೂ ದ್ವಿಚಕ್ರ ವಾಹನಗಳಿಗೂ ವೇಗ ನಿಯಂತ್ರಕ ಅಳವಡಿಕೆಗೆ ದಕ್ಷಿಣ ಭಾರತದ ಸಾರಿಗೆ ಪರಿಷತ್ತು ನಿರ್ಧರಿಸಿದೆ.
ಈ ಸಂಬಂಧದ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಿದೆ. ಶುಕ್ರವಾರ ನಡೆದ 22ನೇ ದಕ್ಷಿಣ ಭಾರತ ಸಾರಿಗೆ ಪರಿಷತ್ತಿನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ದ್ವಿಚಕ್ರ ವಾಹನಗಳು, ಸರ್ಕರೇತರ ವಾಹನಗಳ ವೇಗಕ್ಕೆ ತಡೆ ಹಾಕುವ ಉದ್ದೇಶದಿಂದ ವಿವಿಧ ರಾಜ್ಯಗಳ ಸಾರಿಗೆ ಸಚಿವರು ಸಹಮತ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಖಾಸಗಿ ವಾಹನಗಳಿಗೂ ಸ್ಪೀಡ್ ಗವರ್ನರ್ ಅಥವಾ ವಾಹನಗಳ ತಯಾರಿಕೆ ಹಂತದಲ್ಲೇ ವೇಗ ನಿಯಂತ್ರಕಗಳನ್ನು ಅಳವಡಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.

ಈ ಸಂಬಂಧ 1988ರ ಮೋಟಾರು ವಾಹನ ಕಾಯ್ದೆ ಕಲಂ 118ಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಸಾರಿಗೆಯೇತರ ವಾಹನಗಳ ವೇಗ ಮಿತಿ ಗಂಟೆಗೆ 100ಕಿ.ಮೀ ಗಿಂತ ಹೆಚ್ಚಿದೆ. ಕೆಲವು ಹೈಟೆಕ್ ಬೈಕ್ ಗಳ ವೇಗ 150-200ಕಿ.ಮೀ ಇದೆ. ಮೂಲಗಳ ಪ್ರಕಾರ ಇದನ್ನು 80 ಕಿ.ಮೀ ತಗ್ಗಿಸುವ ಚಿಂತನೆ ಇದೆ. ಆದರೆ, ಇದನ್ನು ಅಂತಿಮವಾಗಿ ಕೇಂದ್ರ ಸರ್ಕಾರ ನಿರ್ಧರಿಸಲಿದೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications