ಮದ್ಯದಂಗಡಿ ತೆರೆದ ಸರ್ಕಾರದ ನಿರ್ಧಾರವನ್ನ ಖಂಡಿಸಿದ ಸಿದ್ಧರಾಮಯ್ಯ
ಬೆಂಗಳೂರು, ಮೇ 5: ಮದ್ಯ ಮಾರಾಟದ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಖಂಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Recommended Video
''ಮದ್ಯದಂಗಡಿ ತೆರೆದದ್ದು @CMofKarnataka ಅವರ ಅವಸರದ ಮತ್ತು ಪೂರ್ವ ಸಿದ್ದತೆಯಿಲ್ಲದ ನಿರ್ಧಾರ. ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರವನ್ನು ಜನ ಪಾಲಿಸಿದಂತೆ ಕಾಣುತ್ತಿಲ್ಲ. ಇದರಿಂದಾಗಿ ಕೊರೋನಾ ಸೋಂಕು ಉಲ್ಭಣಿದರೆ ಅದರ ಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ.'' ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಮದ್ಯ ನಿಷೇಧದ ಬಗ್ಗೆ ಪ್ರತಿಕ್ರಿಯೆ ನೀಡಿದ ವೇಳೆ, ಸರ್ಕಾರ ಮದ್ಯ ಮಾರಾಟ ಮಾಡಲಿ ಎಂದು ಸಿದ್ಧರಾಮಯ್ಯ ಹೇಳಿದ್ದರು. ಆದರೆ, ಈಗ ಮದ್ಯ ಮಾರಾಟ ಮಾಡುವ ಸಮಯದಲ್ಲಿ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಮದ್ಯದಂಗಡಿ ಮುಂದೆ ದೊಡ್ಡ ಕ್ಯೂಗಳು ಇದ್ದವು. ಎಷ್ಟೋ ಕಡೆ ಸಾಮಾಜಿಕ ಅಂತರ ಕಾಪಾಡಿಲ್ಲ. ಕೊರೊನಾ ಬಾರದಂತೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡಿಲ್ಲ. ಇದರಿಂದ ಮತ್ತೆ ಕೊರೊನಾ ಹೆಚ್ಚಾದರೆ, ಅದರ ಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ ಎಂದಿದ್ದಾರೆ.
ಮದ್ಯದಂಗಡಿ ತೆರೆದದ್ದು @CMofKarnataka ಅವರ ಅವಸರದ ಮತ್ತು ಪೂರ್ವ ಸಿದ್ದತೆಯಿಲ್ಲದ ನಿರ್ಧಾರ. ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರವನ್ನು ಜನ ಪಾಲಿಸಿದಂತೆ ಕಾಣುತ್ತಿಲ್ಲ.
— Siddaramaiah (@siddaramaiah) May 5, 2020
ಇದರಿಂದಾಗಿ ಕೊರೋನಾ ಸೋಂಕು ಉಲ್ಭಣಿದರೆ ಅದರ ಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ,
6/7#TrialandErrorSarkar
ಆರ್ಥಿಕ ವ್ಯವಸ್ಥೆಯನ್ನು ಗಮನದಲ್ಲಿ ಇಟ್ಟುಕೊಂಡು ನಿನ್ನೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಮೊದಲೇ ದಿನವೇ 45 ಕೋಟಿ ಮದ್ಯ ಮಾರಾಟವಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications